ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ ಕಲ್ಪಿಸಲು ಕ್ರಮ : ಶಿವಮೊಗ್ಗ ಜಿಪಂ ಸಿಇಓ ಭರವಸೆ

Action to provide mid day meal to government school children: Shimoga GIP CEO promises ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ ಕಲ್ಪಿಸಲು ಕ್ರಮ : ಶಿವಮೊಗ್ಗ ಜಿಪಂ ಸಿಇಓ ಭರವಸೆ

ಶಿವಮೊಗ್ಗ (shivamogga), ಜೂ. 26: ಶಿವಮೊಗ್ಗ ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿರುವ ಮೌಲಾನಾ ಆಜಾದ್ ಮಾದರಿ ಸರ್ಕಾರಿ ಶಾಲೆ (maulana azad model school) ಮಕ್ಕಳಿಗೆ, ಬಿಸಿಯೂಟ (mid day meal) ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯ್ತಿ (zp) ಮುಖ್ಯ ಕಾರ್ಯನಿರ್ವಹಣಾಧಿಕಾರಿ (ceo) ಸ್ನೇಹಲ್ ಸುಧಾಕರ್ ಲೋಖಂಡೆ ಅವರು ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಸದರಿ ಶಾಲೆ ಕಾರ್ಯನಿರ್ವಹಣೆ ಮಾಡುತ್ತಿದೆ. ಸೋಮಿನಕೊಪ್ಪ ಬಡಾವಣೆಯಲ್ಲಿ ಸ್ವಂತ ಕಟ್ಟಡದಲ್ಲಿ ಕಳೆದ ವರ್ಷದಿಂದ ಶಾಲೆ ಪ್ರಾರಂಭವಾಗಿದೆ. 6 ರಿಂದ 10 ನೇ ತರಗತಿಯವರೆಗೆ 100 ಕ್ಕೂ ಅಧಿಕ ಮಕ್ಕಳು (childrens) ಅಭ್ಯಾಸ ಮಾಡುತ್ತಿದ್ದಾರೆ.

ಆದರೆ ಇಲ್ಲಿಯವರೆಗೂ ಶಾಲೆಯಲ್ಲಿನ ಮಕ್ಕಳಿಗೆ ಬಿಸಿಯೂಟ ಸೇರಿದಂತೆ, ಇತರೆ ಸರ್ಕಾರಿ ಶಾಲೆಗಳ ಮಕ್ಕಳಿಗೆ ಲಭ್ಯವಾಗುವ ಕೆಲ ಸೌಲಭ್ಯಗಳಿಂದ ವಂಚಿತವಾಗುವಂತಾಗಿದೆ. ಸದರಿ ಶಾಲೆ ಮಕ್ಕಳಿಗೂ ಬಿಸಿಯೂಟ, ಹಾಲು, ಬಾಳೆಹಣ್ಣು ವಿತರಣೆ ಆರಂಭಿಸಬೇಕೆಂಬ ಆಗ್ರಹ ಪೋಷಕರಿಂದ ಕೇಳಿಬಂದಿತ್ತು.

ಈ ಸಂಬಂಧ ಬುಧವಾರ ಜಿಪಂ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರೊಂದಿಗೆ ಮಾತನಾಡಿದರು. ‘ಸದರಿ ಶಾಲೆ ಮಕ್ಕಳಿಗೆ ಬಿಸಿಯೂಟ ಆರಂಭಕ್ಕೆ ಸಂಬಂಧಿಸಿದಂತೆ, ಈಗಾಗಲೇ ತಾವು ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚಿಸಿ ಸೂಚನೆ ನೀಡಿದ್ದೆನೆ. ಇಷ್ಟರಲ್ಲಿಯೇ ಮಕ್ಕಳಿಗೆ ಬಿಸಿಯೂಟ ಲಭ್ಯವಾಗಲಿದೆ ಎಂದು ಹೇಳಿದ್ಧಾರೆ.

ಹಿಂದಿ ಶಿಕ್ಷಕರ ಅಲಭ್ಯತೆ, ಕಂಪ್ಯೂಟರ್ ಶಿಕ್ಷಣ ಸೇರಿದಂತೆ ಮತ್ತೀತರ ಶೈಕ್ಷಣಿಕ ಸೌಲಭ್ಯಗಳಿಂದ ಮಕ್ಕಳು ವಂಚಿತರಾಗಿರುವ ಕುರಿತಂತೆ ಪ್ರತಿಕ್ರಿಯಿಸಿರುವ ಸಿಇಓ ಅವರು, ‘ಶಿಕ್ಷಕರ ಕೊರತೆ ಸರಿದೂಗಿಸುವುದರ ಜೊತೆಗೆ ಮಕ್ಕಳ ಶೈಕ್ಷಣಿಕ ಬೆಳವಣಿಗೆ ಅಗತ್ಯವಿರುವ ಎಲ್ಲ ರೀತಿಯ ಕ್ರಮಕೈಗೊಳ್ಳಲಾಗುವುದು. ಈ ಸಂಬಂಧ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು’ ಎಂದು ಸ್ಪಷ್ಟಪಡಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *