ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು : ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಕೃತ್ಯ!

Shimoga - The theft of a bike parked in front of the house: The act was caught on the CC camera! ಶಿವಮೊಗ್ಗ - ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು : ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಕೃತ್ಯ!

ಶಿವಮೊಗ್ಗ (shivamogga), ಜು. 10: ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ಬೈಕ್ (bike) ವೊಂದನ್ನು ಕಳ್ಳನೋರ್ವ ನಕಲಿ ಕೀ ಬಳಸಿ ಕೊಂಡೊಯ್ದ ಘಟನೆ ಶಿವಮೊಗ್ಗ ನಗರದ ಬಸ್ ನಿಲ್ದಾಣ (bus stand) ಸಮೀಪದ ಜಿ ಎಸ್ ಕೆ ಎಂ ರಸ್ತೆಯ (gskm road) ಪಿಡಬ್ಲ್ಯೂಡಿ ಕ್ವಾಟರ್ಸ್ ನಲ್ಲಿ (pwd quarters) ಜುಲೈ 10 ರ ಬುಧವಾರ ಬೆಳಿಗ್ಗೆ ನಡೆದಿದೆ.

ಕಳುವಾದ ಬೈಕ್ ಕುಮಾರಸ್ವಾಮಿ ರಾಮಚಂದ್ರ ಎಂಬುವರಿಗೆ ಸೇರಿದ್ದಾಗಿದೆ. ಸದರಿ ಕಳ್ಳತನ ಕೃತ್ಯವು (The act of theft) ಮನೆಯ ಮುಂಭಾಗ ಅಳವಡಿಸಿರುವ ಸಿಸಿ ಕ್ಯಾಮರಾಗಳಲ್ಲಿ (cc cameras) ಸೆರೆಯಾಗಿದೆ.

ಸುಮಾರು 60 ಸಾವಿರ ರೂಪಾಯಿ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಬೈಕ್ ನ್ನು (splendar plus bike) ಕಳವು ಮಾಡಲಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ (doddapete police station) ದೂರು ನೀಡಿದ್ದೆನೆ ಎಂದು ಕುಮಾರಸ್ವಾಮಿ ರಾಮಚಂದ್ರ ಅವರು ತಿಳಿಸಿದ್ದಾರೆ.

ಮುಂಜಾನೆ ಸರಿಸಮಾರು 4 ಗಂಟೆ ವೇಳೆಗೆ ಕುಮಾರಸ್ವಾಮಿ ರಾಮಚಂದ್ರ ಅವರ ಮನೆ ಬಳಿ  ಜೀನ್ಸ್ ಪ್ಯಾಂಟ್ (jeans pant) ಹಾಗೂ ಟೀ ಶರ್ಟ್ (t shirt) ಧರಿಸಿದ್ದ ಕಳ್ಳ (thief) ಆಗಮಿಸಿದ್ದು, ಕ್ಷಣ ಮಾತ್ರದಲ್ಲಿಯೇ ನಕಲಿ ಕೀ ಬಳಸಿ (use a duplicate key) ಬೈಕ್ ನ ಹ್ಯಾಂಡ್ ಲಾಕ್ (hand lock) ತೆರೆದಿದ್ದಾನೆ. ನಂತರ ಶಬ್ದವಾಗದಂತೆ ಸ್ವಲ್ಪ ದೂರದವರೆಗೆ ಬೈಕ್ ತಳ್ಳಿಕೊಂಡು ಹೋಗಿದ ಕಳ್ಳ, ನಂತರ ಬೈಕ್ ಆನ್ ಮಾಡಿಕೊಂಡು ಪರಾರಿಯಾಗಿದ್ದಾನೆ.

ಕುಮಾರಸ್ವಾಮಿ ರಾಮಚಂದ್ರ ಅವರು ಬೆಳಿಗ್ಗೆ ಎದ್ದು ಮನೆ ಹೊರಭಾಗ ಆಗಮಿಸಿದಾಗ ಬೈಕ್ ಇಲ್ಲದಿರುವುದು ಗೊತ್ತಾಗಿದೆ. ನಂತರ ಮನೆಯ ಸಿಸಿ ಕ್ಯಾಮರಾ ದೃಶ್ಯಾವಳಿ (cc camera footage) ವೀಕ್ಷಿಸಿದಾಗ ಬೈಕ್ ಕಳುವಾಗಿರುವುದು (bike stolen) ಬೆಳಕಿಗೆ ಬಂದಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *