ಕೃಷಿ ವಿದ್ಯುತ್ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ವಿರೋಧಿಸಿ ಪ್ರತಿಭಟನೆ

Shimoga: Farmers protest against Aadhaar link for agricultural electricity pump sets ಶಿವಮೊಗ್ಗ : ಕೃಷಿ ವಿದ್ಯುತ್ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ವಿರೋಧಿಸಿ ರೈತರ ಪ್ರತಿಭಟನೆ

ಶಿವಮೊಗ್ಗ (shivamogga), ಜು. 14: ಕೃಷಿ ವಿದ್ಯುತ್ ಪಂಪ್ ಸೆಟ್ ಗಳ ಆರ್.ಆರ್. ಸಂಖ್ಯೆಯೊಂದಿಗೆ ರೈತರ ಆಧಾರ್ ಕಾರ್ಡ್ ಸಂಖ್ಯೆ ಲಿಂಕ್ (aadhaar card number link) ಮಾಡುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ಸೋಮವಾರ ಶಿವಮೊಗ್ಗ ತಾಲೂಕಿನ (shimoga taluk) ಹೊಳಲೂರು (holaluru) ಗ್ರಾಮದ ಮೆಸ್ಕಾಂ ಕಚೇರಿ (mescom office) ಎದುರು ಸುತ್ತಮುತ್ತಲಿನ ಗ್ರಾಮಗಳ ರೈತರು ಪ್ರತಿಭಟನೆ (protest) ನಡೆಸಿದರು.

ಕೃಷಿ ವಿದ್ಯುತ್ ಪಂಪ್’ಸೆಟ್ ಗಳಿಗೆ ((agricultural electric pump sets) ಆಧಾರ್ ಜೋಡಣೆ ಮಾಡುವಂತೆ ಹೊರಡಿಸಿರುವ ಆದೇಶ ಸರಿಯಲ್ಲ. ಇದು ರೈತ (farmers) ಸಮುದಾಯಕ್ಕೆ ಮಾರಕವಾಗಿ ಪರಿಣಮಿಸಲಿದೆ. ಹಲವು ರೀತಿಯ ಗೊಂದಲಗಳಿಗೆ ಎಡೆ ಮಾಡಿಕೊಡಲಿದೆ ಎಂದು ಪ್ರತಿಭಟನಾಕಾರರು (protesters) ಆರೋಪಿಸಿದ್ದಾರೆ.

ಕೃಷಿ ಚಟುವಟಿಕೆಗೆ (agricultural activity) ಉತ್ತೇಜನ ನೀಡಲು ಸರ್ಕಾರಗಳು ರೈತರಿಗೆ ಸೂಕ್ತ ಪ್ರೋತ್ಸಾಹ, ನೆರವು, ಸಹಕಾರ ನೀಡಬೇಕು. ಆದರೆ ಕೃಷಿ ವಿದ್ಯುತ್ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ (aadhar link) ಮಾಡುವಂತಹ ಕ್ರಮಗಳು ರೈತ ವಿರೋಧಿ ಕ್ರಮವಾಗಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಅತೀವೃಷ್ಟಿ – ಅನಾವೃಷ್ಟಿ ಸಮಸ್ಯೆ ಸೇರಿದಂತೆ ನಾನಾ ಕಾರಣಗಳಿಂದ ರೈತರು ಬೆಳೆ (crops) ಉಳಿಸಿಕೊಳ್ಳಲು ಪರದಾಡುವಂತಹ ದುಃಸ್ಥಿತಿಯಿದೆ. ಇಷ್ಟೆಲ್ಲ ಸಮಸ್ಯೆಗಳ ನಡುವೆಯೂ ಕೃಷಿ ಚಟುವಟಿಕೆಯಲ್ಲಿ ರೈತ ಸಮುದಾಯ ತೊಡಗಿಸಿಕೊಂಡಿದೆ ಎಂಬುವುದನ್ನು ಆಡಳಿತಗಾರರು ಮರೆಯಬಾರದು.

ತಕ್ಷಣವೇ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವ ಆದೇಶವನ್ನು (order) ವಾಪಾಸ್ ಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಂದು ತೀವ್ರ ಸ್ವರೂಪದ ಪ್ರತಿಭಟನೆ (protest) ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *