ಶಿವಮೊಗ್ಗದಲ್ಲಿ ಅಪಾಯದ ಮಟ್ಟ ತಲುಪಿದ ತುಂಗಾ ನದಿ : ಪಶ್ಚಿಮಘಟ್ಟ ಪ್ರದೇಶಗಳಲ್ಲಿ ವರ್ಷಧಾರೆಯ ಅಬ್ಬರ!

tunga river has reached the danger level in shimoga : heavy to heavy rainfall in Western Ghats! ಶಿವಮೊಗ್ಗದಲ್ಲಿ ಅಪಾಯದ ಮಟ್ಟ ತಲುಪಿದ ತುಂಗಾ ನದಿ : ಪಶ್ಚಿಮಘಟ್ಟ ಪ್ರದೇಶಗಳಲ್ಲಿ ವರ್ಷಧಾರೆಯ ಅಬ್ಬರ!

ಶಿವಮೊಗ್ಗ (shivamogga), ಜು. 16: ಶಿವಮೊಗ್ಗ ನಗರದಲ್ಲಿ (shimoga city) ಸೋಮವಾರ ರಾತ್ರಿಯಿಡಿ ಭಾರೀ ಮಳೆಯಾಯಿತು (heavy rainfall). ಮಂಗಳವಾರ ಬೆಳಿಗ್ಗೆಯಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಮತ್ತೊಂದೆಡೆ, ನಗರದ ಮೂಲಕ ಹಾದು ಹೋಗಿರುವ ತುಂಗಾ ನದಿಯು (tunga river) ಮತ್ತೆ ಮೈದುಂಬಿದೆ. ಜೊತೆಗೆ ಅಪಾಯದ ಮಟ್ಟದಲ್ಲಿ (danger level) ಹರಿಯುತ್ತಿದೆ.

ಆಗುಂಬೆ (agumbe), ತೀರ್ಥಹಳ್ಳಿ (thirthalli) ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ (rain). ಇದರಿಂದ ತುಂಗಾ ಡ್ಯಾಂಗೆ (tunga dam) ಹರಿದುಬರುತ್ತಿರುವ ನೀರಿನ (water inflow) ಪ್ರಮಾಣದಲ್ಲಿ ನಿರಂತರವಾಗಿ ಏರಿಕೆ (increasing) ಕಂಡುಬರುತ್ತಿದೆ. ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ (maximum level) ತಲುಪಿರುವುದರಿಂದ ಒಳಹರಿವಿನಷ್ಟೆ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಡ್ಯಾಂನಿಂದ ಹೊರಬಿಡುವ (out flow)ನೀರಿನ ಪ್ರಮಾಣ ಹೆಚ್ಚಾದಂತೆ, ಶಿವಮೊಗ್ಗದಲ್ಲಿ ತುಂಗಾ ನದಿಯ (shimoga tunga river) ಹರಿವು ಕೂಡ ಹೆಚ್ಚಾಗುತ್ತದೆ. ಮಂಗಳವಾರ ಬೆಳಿಗ್ಗೆ ಅಪಾಯದ ಮಟ್ಟ ಸೂಚಿಸುವ ನಗರದ ಕೋರ್ಪಳಯ್ಯನ ಛತ್ರದ ಬಳಿ ನದಿಯಲ್ಲಿರುವ ಮಂಟಪ ಮುಳುಗಿತ್ತು. ಮಂಟಪದ ಮೇಲೆ ನೀರು ಹರಿಯುತ್ತಿದ್ದುದು ಕಂಡುಬಂದಿತು.

ಮತ್ತೊಂದೆಡೆ, ತುಂಗೆಯ ಹರಿವು ಹೆಚ್ಚಾಗಿರುವುದರಿಂದ ನದಿಯಂಚಿನ ತಗ್ಗು ಪ್ರದೇಶಗಳಲ್ಲಿ (low-lying areas) ಜಲಾವೃತದ (waterlogging) ಭೀತಿ ಎದುರಾಗಿದೆ. ಈಗಾಗಲೇ ಪಾಲಿಕೆ (corporation) ಆಡಳಿತವು ತಗ್ಗು ಪ್ರದೇಶಗಳ ಜನತೆಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಹಾಗೆಯೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಆಡಳಿತ ಮಾಡಿಕೊಂಡಿದೆ.

ಮಳೆ ವಿವರ : ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ (western ghats areas) ಮಳೆಯ ಆರ್ಭಟ ಜೋರಾಗಿದ್ದು, ಅಕ್ಷರಶಃ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಮಾಣಿಯಲ್ಲಿ (mani) 240 ಮಿಲಿ ಮೀಟರ್ (ಮಿ.ಮೀ.), ಯಡೂರು (yadur) 229 ಮಿ.ಮೀ., ಹುಲಿಕಲ್ಲು (hulikallu) 245 ಮಿ.ಮೀ., ಮಾಸ್ತಿಕಟ್ಟೆ (masthikatte) 247 ಮಿ.ಮೀ., ಸಾವೇಹಕ್ಲುವಿನಲ್ಲಿ (savehakklu) 210 ಮಿ.ಮೀ. ಮಳೆಯಾಗಿದೆ.

ಶಿವಮೊಗ್ಗ (shimoga) 52 ಮಿ.ಮೀ., ಭದ್ರಾವತಿ (bhadravathi) 26. 40 ಮಿ.ಮೀ., ತೀರ್ಥಹಳ್ಳಿ (thirthalli) 120. 90 ಮಿ.ಮೀ., ಸಾಗರ (sagara) 129. 10 ಮಿ.ಮೀ., ಶಿಕಾರಿಪುರ (shikaripura) 57. 90 ಮಿ.ಮೀ., ಸೊರಬ (soraba) 58. 50 ಮಿ.ಮೀ. ಹಾಗೂ ಹೊಸನಗರದಲ್ಲಿ (hosanagara) 133. 60 ಮಿ.ಮೀ. ಮಳೆಯಾಗಿದೆ.  

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *