ಪ್ರವಾಹದ ಭೀತಿ ಮೂಡಿಸಿದ ತುಂಗಾ ನದಿ : ಗಾಜನೂರು ತುಂಗಾ ಜಲಾಶಯಕ್ಕೆ ಹೆಚ್ಚುತ್ತಿರುವ ಒಳಹರಿವು!

Tunga river which caused flood threat: Increasing inflow to Gajanur Tunga Reservoir! ಪ್ರವಾಹದ ಭೀತಿ ಮೂಡಿಸಿದ ತುಂಗಾ ನದಿ : ಗಾಜನೂರು ತುಂಗಾ ಡ್ಯಾಂಗೆ ಹೆಚ್ಚುತ್ತಿರುವ ಒಳಹರಿವು!

ಶಿವಮೊಗ್ಗ (shivamogga), ಜು. 18: ನಾಡಿನ ಜೀವ ನದಿಗಳಲ್ಲೊಂದಾದ ತುಂಗಾ ನದಿ (tunga river) ಪ್ರಸ್ತುತ ಮೈದುಂಬಿ ಹರಿಯುತ್ತಿದೆ. ಜೊತೆಗೆ ಪ್ರವಾಹದ ಭೀತಿ ( Fear of flood) ಸೃಷ್ಟಿಸಿದೆ. ಕೆಲವೆಡೆ ನದಿಪಾತ್ರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.

ಈ ನಡುವೆ ತೀರ್ಥಹಳ್ಳಿ (thirthalli), ಆಗುಂಬೆ (agumbe), ಶೃಂಗೇರಿ (sringeri) ಸುತ್ತಮುತ್ತ ಭಾರೀ ಮಳೆ (heavy rainfall) ಮುಂದುವರಿದಿದೆ. ಇದರಿಂದ ಶಿವಮೊಗ್ಗ ತಾಲೂಕಿನ ತುಂಗಾ ಜಲಾಶಯದ (tunga dam) ಒಳಹರಿವಿನಲ್ಲಿ ನಿರಂತರ ಹೆಚ್ಚಳ ಕಂಡುಬರಲಾರಂಭಿಸಿದೆ.

ಗುರುವಾರ ಬೆಳಿಗ್ಗೆಯ ಮಾಹಿತಿಯಂತೆ ತುಂಗಾ ಜಲಾಶಯಕ್ಕೆ 71,484 ಕ್ಯೂಸೆಕ್ ಒಳಹರಿವಿದೆ (inflow). ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ ಅಷ್ಟೇ ಪ್ರಮಾಣದ ನೀರನ್ನು ಹೊರ ಹರಿಸಲಾಗುತ್ತಿದೆ (outflow).

ಡ್ಯಾಂನಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಶಿವಮೊಗ್ಗ ನಗರದ ಮೂಲಕ ಹಾದು ಹೋಗಿರುವ ತುಂಗಾ ನದಿಯು (shimoga city tunga river flowing) ಕಳೆದ ಮೂರು ದಿನಗಳಿಂದ ಅಪಾಯದ ಮಟ್ಟದಲ್ಲಿ (danger level) ಹರಿಯುತ್ತಿದೆ. ಡ್ಯಾಂನಿಂದ ಬಿಡುವ ನೀರಿನಲ್ಲಿ ಹೆಚ್ಚಳವಾದರೆ, ನಗರದ ನದಿಯಂಚಿನ ತಗ್ಗು ಪ್ರದೇಶಗಳಿಗೆ (low lying areas) ನೀರು ನುಗ್ಗುವ ಸಾಧ್ಯತೆಯಿದೆ.

ಈಗಾಗಲೇ ಮಹಾನಗರ ಪಾಲಿಕೆ (corporation) ಆಡಳಿತವು ನದಿ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳ ನಿವಾಸಿಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಜೊತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು (Precautionary measure) ಕೈಗೊಂಡಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →