ಮುಂದುವರಿದ ಭಾರೀ ಮಳೆ : ಜು. 19 ರ ಶುಕ್ರವಾರ ಕೂಡ ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲಾ – ಕಾಲೇಜ್ ಗಳಿಗೆ ರಜೆ ಘೋಷಣೆ!

Continued heavy rain Holiday announcement for schools and colleges across Shimoga district on Friday july 19th too! ಮುಂದುವರಿದ ಭಾರೀ ಮಳೆ : ಜು. 19 ರ ಶುಕ್ರವಾರ ಕೂಡ ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲಾ – ಕಾಲೇಜ್ ಗಳಿಗೆ ರಜೆ ಘೋಷಣೆ!

ಶಿವಮೊಗ್ಗ (shivamogga), ಜು. 18 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ (rain) ತೀವ್ರತೆ ಮತ್ತಷ್ಟು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ, ಜು. 19 ರ ಶುಕ್ರವಾರ ಕೂಡ ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ (Holidays for schools and colleges) ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಈ ಸಂಬಂಧ ಗುರುವಾರ ರಾತ್ರಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ (shimoga dc gurudatt hegde) ಅವರು ಪ್ರಕಟಣೆ ಹೊರಡಿಸಿದ್ದಾರೆ. ‘ಜಿಲ್ಲೆಯಲ್ಲಿ ಸತತವಾಗಿ ಮಳೆ (continuous rain) ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಅಂಗನವಾಡಿ (Anganwadi), ಪ್ರಾಥಮಿಕ (primary), ಪ್ರೌಢಶಾಲೆ (high school), ಪದವಿಪೂರ್ವ ಕಾಲೇಜ್ (puc), ಪದವಿ (degree), ಸ್ನಾತಕೋತ್ತರ ಪದವಿ (Master’s degree), ಐಟಿಐ (iti) ಮತ್ತು ಡಿಪ್ಲೊಮಾ ಕಾಲೇಜ್ (diploma college) ಗಳಿಗೆ ಜು. 19 ರ ಶುಕ್ರವಾರ ರಜೆ ಘೋಷಣೆ (holiday declare) ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಭಾರೀ ಮಳೆ : ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ (heavy rainfall). ಕೆರೆಕಟ್ಟೆ, ಹಳ್ಳಕೊಳ್ಳ, ನದಿಗಳು (rivers) ಉಕ್ಕಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಜು. 16 ರಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ (Holidays for schools and colleges) ಮಾಡಲಾಗಿತ್ತು. ತದನಂತರ ಜು. 18 ರಂದು ಕೂಡ ರಜೆ ಮುಂದುವರಿಸಲಾಗಿತ್ತು. ಮಳೆ ಕಡಿಮೆಯಾಗದ ಕಾರಣದಿಂದ ಜು. 19 ರಂದು ಕೂಡ ರಜೆ ಘೋಷಣೆ ಮಾಡಲಾಗಿದೆ.

ಮತ್ತೊಂದೆಡೆ, ಹವಾಮಾನ ಇಲಾಖೆಯು (meteorological department) ಮುಂದಿನ ಎರಡು ದಿನಗಳ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →