ಲಿಂಗನಮಕ್ಕಿಗೆ ಭಾರೀ ಪ್ರಮಾಣದ ಒಳಹರಿವು : ಒಂದೇ ದಿನ 3 ಅಡಿ ನೀರು ಸಂಗ್ರಹ – ಶೇ. 50 ರಷ್ಟು ಭರ್ತಿಯಾದ ಡ್ಯಾಂ!

Heavy inflow to Linganamakki : 3 feet water storage in a single day – per cent 50 percent filled dam! ಲಿಂಗನಮಕ್ಕಿ ಡ್ಯಾಂಗೆ ಭಾರೀ ಪ್ರಮಾಣದ ಒಳಹರಿವು : ಒಂದೇ ದಿನ 3 ಅಡಿ ನೀರು ಸಂಗ್ರಹ – ಶೇ 50 ರಷ್ಟು ಭರ್ತಿಯಾದ ಡ್ಯಾಂ!

ಶಿವಮೊಗ್ಗ (shivamogga), ಜು. 19 : ಪಶ್ಚಿಮಘಟ್ಟ ವ್ಯಾಪ್ತಿಯ (western ghat) ಹೊಸನಗರ ತಾಲೂಕಿನಲ್ಲಿ (hosanagara taluk) ಮಳೆ ಆರ್ಭಟಿಸುತ್ತಿದೆ. ಇದರಿಂದ ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಜಲಾಶಯಕ್ಕೆ (linganamakki dam) ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಶುಕ್ರವಾರದ ಮಾಹಿತಿಯಂತೆ, ಪ್ರಸ್ತುತ ಮುಂಗಾರು ಮಳೆ (mungaru male) ಅವಧಿಯಲ್ಲಿಯೇ ಅತೀ ಹೆಚ್ಚು 87,496 ಕ್ಯೂಸೆಕ್ ಒಳಹರಿವು (inflow) ಡ್ಯಾಂಗೆ ಕಂಡುಬಂದಿದೆ.

ಮಳೆ ನೀರನ್ನೇ ವಿದ್ಯುತ್ ಉತ್ಪಾದನೆಗೆ (power generation) ಬಳಕೆ ಮಾಡಲಾಗುತ್ತಿದೆ. ಡ್ಯಾಂನಲ್ಲಿ ನೀರಿನ ಸಂಗ್ರಹಣೆಗೆ ಒತ್ತು ನೀಡಲಾಗಿದ್ದು, ಹೊರ ಹರಿವನ್ನು (out flow) ಸ್ಥಗಿತಗೊಳಿಸಲಾಗಿದೆ. ಸದ್ಯ 1791. 50 (ಗರಿಷ್ಠ ಮಟ್ಟ : 1819) ಅಡಿ ನೀರು ಸಂಗ್ರಹವಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಡ್ಯಾಂನಲ್ಲಿ 3. 70 ಅಡಿಯಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನದಂದು ಲಿಂಗನಮಕ್ಕಿ ಡ್ಯಾಂನಲ್ಲಿ 1758. 95 ಅಡಿ ನೀರು ಸಂಗ್ರಹವಾಗಿತ್ತು.

ಕಳೆದ ವರ್ಷಕ್ಕೆ (last year) ಹೋಲಿಸಿದರೆ ಪ್ರಸ್ತುತ ವರ್ಷ ಸರಿಸುಮಾರು 33 ಅಡಿಯಷ್ಟು ಹೆಚ್ಚು ನೀರು ಡ್ಯಾಂನಲ್ಲಿ ಸಂಗ್ರಹವಾಗಿದೆ. ಒಟ್ಟಾರೆ ಡ್ಯಾಂ ನೀರು ಸಂಗ್ರಹಣ ಸಾಮರ್ಥ್ಯವು 151. 64 ಟಿಎಂಸಿ (tmc) ಯಾಗಿದೆ. ಪ್ರಸ್ತುತ 76. 40 ಟಿಎಂಸಿ ನೀರು ಸಂಗ್ರಹವಾಗಿದೆ (water storage). ಶೇಕಡವಾರು ಪ್ರಮಾಣದಲ್ಲಿ 50. 38 ರಷ್ಟು ನೀರು ಸಂಗ್ರಹವಾಗಿದೆ. ಡ್ಯಾಂ ಗರಿಷ್ಠ ಮಟ್ಟ ತಲುಪಲು (maximum level) ಇನ್ನು ಅರ್ಧದಷ್ಟು ನೀರು ಹರಿದು ಬರಬೇಕಾಗಿದೆ!

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →