ಮಲೆನಾಡಲ್ಲಿ ಭಾರೀ ಮಳೆ – ಭದ್ರಾ ಜಲಾಶಯಕ್ಕೆ ಒಂದೇ ದಿನದಲ್ಲಿ 5 ಅಡಿ ನೀರು ಸಂಗ್ರಹ!

Heavy rain in the hills - 5 feet of water stored in Bhadra reservoir in a single day! ಮಲೆನಾಡಲ್ಲಿ ಭಾರೀ ಮಳೆ - ಭದ್ರಾ ಜಲಾಶಯಕ್ಕೆ ಒಂದೇ ದಿನದಲ್ಲಿ 5 ಅಡಿ ನೀರು ಸಂಗ್ರಹ!

ಶಿವಮೊಗ್ಗ (shivamogga), ಜು. 20: ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ (shivamogga – davanagere) ರೈತರ ಜೀವನಾಡಿ ಎಂದೇ ಕರೆಯಲಾಗುವ, ಮಧ್ಯ ಕರ್ನಾಟಕದ (central karnataka) ಪ್ರಮುಖ ಜಲಾಶಯವಾದ ಭದ್ರಾ ಒಳಹರಿವಿನಲ್ಲಿ ಶನಿವಾರ ತುಸು ಇಳಿಕೆ ಕಂಡುಬಂದಿದೆ.

ಉಳಿದಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಡ್ಯಾಂಗೆ ಸುಮಾರು 5 ಅಡಿಯಷ್ಟು (feet) ನೀರು ಸಂಗ್ರಹವಾಗಿದೆ. ಇದು ಪ್ರಸ್ತುತ ಮುಂಗಾರು ಮಳೆ (monsoon rain) ಅವಧಿ ವೇಳೆ ಒಂದೇ ದಿನದಲ್ಲಿ ಇಷ್ಟೊಂದು ಪ್ರಮಾಣದ ನೀರು ಸಂಗ್ರಹವಾಗಿರುವುದು ಇದೇ ಮೊದಲಾಗಿದೆ.

ಶನಿವಾರ (ಜು. 20) ರ ಬೆಳಿಗ್ಗೆ 6 ಗಂಟೆಯ ಮಾಹಿತಿಯಂತೆ, ಭದ್ರಾ ಡ್ಯಾಂನ (bhadra dam) ಒಳಹರಿವು 46,876 ಕ್ಯೂಸೆಕ್ ಇದೆ. ಜು. 19 ರಂದು ಒಳಹರಿವಿನ (inflow) ಪ್ರಮಾಣ 49,555 ಕ್ಯೂಸೆಕ್ ಇತ್ತು. ಪ್ರಸ್ತುತ ಡ್ಯಾಂನ ಹೊರಹರಿವು (out flow) 186 ಕ್ಯೂಸೆಕ್ ಇದೆ. ಸದ್ಯ ಭದ್ರಾ ಡ್ಯಾಂ ನೀರಿನ ಮಟ್ಟ 162 ಅಡಿ 3 ಇಂಚು ಇದೆ (ಗರಿಷ್ಠ ಮಟ್ಟ : 186 ಅಡಿ) ಇದೆ.

ಕಳೆದ ವರ್ಷ (last year) ಇದೇ ದಿನದಂದು ಡ್ಯಾಂನ ನೀರಿನ ಮಟ್ಟ 142. 1 ಅಡಿ ನೀರು ಸಂಗ್ರಹವಾಗಿತ್ತು. ಪ್ರಸ್ತುತ ಮುಂಗಾರು ಮಳೆ (mungaru male) ಅವಧಿ ವೇಳೆ ಜಲಾನಯನ ಪ್ರದೇಶ (catchment areas) ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ (heavy rainfall), ಡ್ಯಾಂ ನೀರಿನ ಸಂಗ್ರಹದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ ವರ್ಷ 21. 2 ಅಡಿಯಷ್ಟು ಹೆಚ್ಚು ನೀರು ಸಂಗ್ರಹವಾಗಿದೆ.

ಭದ್ರಾ ಜಲಾಶಯವು (bhadra dam) ಒಟ್ಟಾರೆ 45. 040 ಟಿಎಂಸಿಯಷ್ಟು (tmc) ನೀರು ಸಂಗ್ರಹಣಾ ಸಾರ್ಮರ್ಥ್ಯ ಹೊಂದಿದೆ. ಪ್ರಸ್ತುತ 28. 336 ಟಿಎಂಸಿ ನೀರು ಸಂಗ್ರಹವಾಗಿದೆ. ಪ್ರಸ್ತುತ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆ (heavy to heavy rainfall) ಮುಂದುವರಿದಿದೆ. ಈ ಕಾರಣದಿಂದ ಪ್ರಸ್ತುತ ವರ್ಷ ಡ್ಯಾಂ ಗರಿಷ್ಠ ಮಟ್ಟ (maximum level) ತಲುಪುವ ಸಾಧ್ಯತೆಗಳು ಗೋಚರವಾಗುತ್ತಿವೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

One Comment on “ಮಲೆನಾಡಲ್ಲಿ ಭಾರೀ ಮಳೆ – ಭದ್ರಾ ಜಲಾಶಯಕ್ಕೆ ಒಂದೇ ದಿನದಲ್ಲಿ 5 ಅಡಿ ನೀರು ಸಂಗ್ರಹ!”

Comments are closed.