ಜೋಗ ಜಲಪಾತದ ಬಳಿ ಬೆಂಗಳೂರಿನಿಂದ ಆಗಮಿಸಿದ್ದ ಯುವಕ ಕಣ್ಮರೆ!

A young man who had arrived from Bangalore disappeared near the Joga waterfall! ಜೋಗ ಜಲಪಾತದ ಬಳಿ ಬೆಂಗಳೂರಿನಿಂದ ಆಗಮಿಸಿದ್ದ ಯುವಕ ಕಣ್ಮರೆ!

ಜೋಗಫಾಲ್ಸ್ (jogfalls), ಜು. 21: ವಿಶ್ವವಿಖ್ಯಾತ ಜೋಗ ಜಲಪಾತ (jogfalls) ವೀಕ್ಷಣೆಗೆಂದು ಬೆಂಗಳೂರಿನಿಂದ (bengaluru) ಆಗಮಿಸಿದ್ದ ಯುವಕನೋರ್ವ ಜಲಪಾತದ ಬಳಿ ಕಣ್ಮರೆಯಾಗಿರುವ ಘಟನೆ ನಡೆದಿದ್ದು, ಯುವಕನಿಗಾಗಿ ಕಾರ್ಗಲ್ ಠಾಣೆ ಪೊಲೀಸರು (kargal police station) ಶೋಧ ಕಾರ್ಯ ನಡೆಸುತ್ತಿದ್ದಾರೆ.

ಮೂಲತಃ ಗದಗ (gadag) ಜಿಲ್ಲೆಯ ನಿವಾಸಿಯಾದ, ಪ್ರಸ್ತುತ ಬೆಂಗಳೂರಿನಲ್ಲಿ (bengaluru city) ಟೀ ಅಂಗಡಿ ನಡೆಸುತ್ತಿರುವ ಆನಂದ್ (24) ಜಲಪಾತದ (water falls) ಬಳಿ ನಾಪತ್ತೆಯಾದ ಯುವಕ ಎಂದು ಗುರುತಿಸಲಾಗಿದೆ. ಕಾರ್ಗಲ್ ಠಾಣೆ ಪೊಲೀಸರು ನಾಪತ್ತೆ (missing) ದೂರು ದಾಖಲಿಸಿಕೊಂಡು ಯುವಕನಿಗಾಗಿ ಜಲಪಾತದ ಬಳಿ ಶೋಧ ನಡೆಸುತ್ತಿದ್ದಾರೆ.

ನಿಗೂಢ : ಜು . 15 ರಂದು ಯುವಕ ಆನಂದ್ ಜೋಗ ಜಲಪಾತಕ್ಕೆ (jogfalls) ಆಗಮಿಸಿದ್ದ. ಯಾತ್ರಿ ನಿವಾಸದದ ಸೀತಾಕಟ್ಟೆ ಬ್ರಿಡ್ಜ್ (seethakatte bridge) ಬಳಿಯಿಂದ ಬೇಲಿ ದಾಟಿ, ಜಲಪಾತದ ಬಳಿ ಆಗಮಿಸಿದ್ದ. ನಂತರ ಆತನ ಸುಳಿವು ಲಭ್ಯವಾಗಿಲ್ಲ.

ಯುವಕ ತಂದಿದ್ದ ಬ್ಯಾಗ್ ಸಿಕ್ಕಿದೆ. ಕಳೆದ 6 ದಿನಗಳಿಂದಲೂ ಯುವಕನಿಗಾಗಿ ಕಾರ್ಗಲ್ ಠಾಣೆ ಸಬ್ ಇನ್ಸ್’ಪೆಕ್ಟರ್ (sub inspector) ಹೊಳೆಬಸಪ್ಪ ಹೋಳಿ ನೇತೃತ್ವದ ಪೊಲೀಸ್ ತಂಡ ಶೋಧ (search) ಕಾರ್ಯ ನಡೆಸುತ್ತಿದೆ. ಆದರೆ ಸುಳಿವು ಲಭ್ಯವಾಗಿಲ್ಲ.

ಜೋಗ್ (jog) ಜಲಪಾತದ ಬಳಿ ಬೀಳುತ್ತಿರುವ ಭಾರೀ ಮಳೆ (heavy rainfall) ಹಾಗೂ ಮಂಜು ಮುಸುಕಿದ ವಾತಾವರಣದಿಂದ (Foggy weather), ಯುವಕನ ಶೋಧ ಕಾರ್ಯವು ಪೊಲೀಸರಿಗೆ ಕಷ್ಟಕರವಾಗಿ ಪರಿಣಮಿಸಿದೆ. ಜಲಪಾತದ ಬಳಿ ಯುವಕ ನಾಪತ್ತೆಯಾಗಿದ್ದ ಹೇಗೆ ಎಂಬುವ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →