ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ದಿಢೀರ್ ದಾಳಿ!

Sudden police attack on Shimoga Central Jail! ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ದಿಢೀರ್ ದಾಳಿ ಜೈಲ್

ಶಿವಮೊಗ್ಗ (shivamogga), ಜು. 21: ಶಿವಮೊಗ್ಗ ನಗರದ ಹೊರವಲಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ (central jail) ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ, ತಪಾಸಣೆ ನಡೆಸಿದ ಘಟನೆ ಭಾನುವಾರ ನಡೆದಿದೆ.

ಮಹಿಳಾ ಬ್ಯಾರಕ್ ಸೇರಿದಂತೆ ಕಾರಾಗೃಹದ ಪ್ರತಿಯೊಂದು ವಿಭಾಗಗಳನ್ನು ತಪಾಸಣೆಗೊಳಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ (police department) ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಆದರೆ ದಾಳಿಯ ವೇಳೆ ಜೈಲ್ ನಲ್ಲಿ (jail) ಯಾವೆಲ್ಲ ವಸ್ತುಗಳು ಪತ್ತೆಯಾಗಿವೆ ಎಂಬುವುದರ ವಿವರ ನೀಡಿಲ್ಲ. ಇನ್ನಷ್ಟೆ ಈ ಕುರಿತಂತೆ ಹೆ್ಚ್ಚಿನ ಮಾಹಿತಿಗಳು ಲಭ್ಯವಾಗಬೇಕಾಗಿದೆ.

ಎಸ್ಪಿ (sp) ಜಿ.ಕೆ.ಮಿಥುನ್ ಕುಮಾರ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್ಪಿ (asp) ಅನಿಲ್ ಕುಮಾರ್ ಭೂಮರೆಡ್ಡಿ ನೇತೃತ್ವದಲ್ಲಿ ಡಿವೈಎಸ್ಪಿ (dysp) ಬಾಬು ಆಂಜನಪ್ಪ, ಡಿಎಆರ್ ಡಿವೈಎಸ್ಪಿ ಕೃಷ್ಣಮೂರ್ತಿ,

ಇನ್ಸ್’ಪೆಕ್ಟರ್ ಗಳಾದ (pi) ಸಿದ್ದೇಗೌಡ, ಭರತ್, ಅಶ್ವತ್ಥಗೌಡ, ಹರೀಶ್ ಕೆ ಪಾಟೀಲ್, ಚಂದ್ರಕಲಾ ಸೇರಿದಂತೆ  10 ಸಬ್ ಇನ್ಸ್’ಪೆಕ್ಟರ್ ಗಳು (psi), 50 ಜನ ಪೊಲೀಸ್ ಸಿಬ್ಬಂದಿಗಳ ತಂಡ ಕಾರಾಗೃಹ ತಪಾಸಣೆಯಲ್ಲಿ ಭಾಗಿಯಾಗಿತ್ತು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →