ಭಾರೀ ಮಳೆಗೆ ಕುಸಿದ ಸರ್ಕಾರಿ ಶಾಲೆ ಗೋಡೆ : ತಪ್ಪಿದ ಭಾರೀ ದೊಡ್ಡ ದುರಂತ!

Government school wall collapsed due to heavy rain: A big tragedy missed! ಭಾರೀ ಮಳೆಗೆ ಕುಸಿದ ಸರ್ಕಾರಿ ಶಾಲೆ ಗೋಡೆ : ತಪ್ಪಿದ ಭಾರೀ ದೊಡ್ಡ ದುರಂತ!

ಆನವಟ್ಟಿ (anavatti), ಜು. 23: ಸೊರಬ (sorab) ತಾಲೂಕಿನಲ್ಲಿ ಮಳೆಯ (rain) ಅಬ್ಬರ ಮುಂದುವರೆದಿದೆ. ಈ ನಡುವೆ ಮಂಗಳವಾರ ಆನವಟ್ಟಿ ಪಟ್ಟಣದ ಸರ್ಕಾರಿ ಉರ್ದು ಪ್ರೌಢ ಶಾಲೆಯ (govt high school) ಗೋಡೆ ಕುಸಿದು ಬಿದ್ದ ಆತಂಕಕಾರಿ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆ ಸಂಭವಿಸಿದ ವೇಳೆ, ಕೊಠಡಿಯಲ್ಲಿ ಯಾವುದೇ ವಿದ್ಯಾರ್ಥಿಗಳು (students) ಇರಲಿ್ಲ್ಲ ಎಂದು ತಿಳಿದುಬಂದಿದೆ.

ಸದರಿ ಸರ್ಕಾರಿ ಶಾಲೆಯಲ್ಲಿ 104 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಮಧ್ಯಾಹ್ನ ತರಗತಿ ಮುಗಿಸಿ ವಿದ್ಯಾರ್ಥಿಗಳಿಗೆ ವಿಶ್ರಾಂತಿ ನೀಡಲಾಗಿತ್ತು. ಗೋಡೆ ಕುಸಿದ (wall collapsed) ಕೊಠಡಿಯಲ್ಲಿ 31 ವಿದ್ಯಾರ್ಥಿಗಳಿದ್ದರು. ಅದೃಷ್ಟವಶಾತ್ ವಿದ್ಯಾರ್ಥಿಗಳಿಗೆ ನೀಡಿದ ವಿಶ್ರಾಂತಿ ಸಮಯದಲ್ಲಿ ಕೊಠಡಿ ಗೋಡೆ ಕುಸಿದಿದೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನಾಹುತವಾಗಿಲ್ಲ. ಆದರೆ, ಮೇಜು, ಆಸನಗಳು ಮತ್ತು ವಿದ್ಯಾರ್ಥಿಗಳ ಪಠ್ಯ ಪರಿಕರಗಳಿಗೆ ಹಾನಿಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡುತ್ತಾರೆ.

ಶಾಲೆಯು ಶಿಥಿಲಾವ್ಯಸ್ಥೆಯಲ್ಲಿದ್ದು, ಶಿಕ್ಷಣ ಇಲಾಖೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪೋಷಕರು ದೂರುತ್ತಾರೆ. ತರಗತಿ ನಡೆಯುವ ವೇಳೆ ಗೋಡೆ ಕುಸಿದಿದ್ದರೆ ಹೆಚ್ಚಿನ ಅನಾಹುತವಾಗುತ್ತಿತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಾರೆ. ಸ್ಥಳಕ್ಕೆ ತಹಶೀಲ್ದಾರ್ ಮಂಜುಳಾ ಹೆಗಡಾಳ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →