ಲೇವಾದೇವಿಗಾರರು, ಗಿರವಿದಾರರು, ಫೈನಾನ್ಸ್’ಗಳಿಗೆ ಖಡಕ್ ಸೂಚನೆ : ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ!

Harsh notice to moneylenders pawnbrokers finance : warning of strict action if rules are violated! ಲೇವಾದೇವಿಗಾರರು, ಗಿರವಿದಾರರು, ಫೈನಾನ್ಸ್’ಗಳಿಗೆ ಖಡಕ್ ಸೂಚನೆ : ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ!

ಶಿವಮೊಗ್ಗ, ಜು. 24: ಜಿಲ್ಲೆಯಲ್ಲಿ ಲೇವಾದೇವಿ ವ್ಯವಹಾರ ನಡೆಸುತ್ತಿರುವ ಲೇವಾದೇವಿಗಾರರು, ಗಿರವಿದಾರರು ಮತ್ತು ಹಣಕಾಸು ಸಂಸ್ಥೆಗಳು (moneylenders, pawnbrokers, finance institutions) ವ್ಯವಹಾರ ಸ್ಥಳದ ಕಚೇರಿಯಲ್ಲಿ ಪರವಾನಿಗೆಯನ್ನು (license) ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು (Deputy Registrar of District Co-operative Societies) ಸೂಚಿಸಿದ್ದಾರೆ.

ಕರ್ನಾಟಕ ಲೇವಾದೇವಿ ಅಧಿನಿಯಮ 1961 (karnataka moneylenders act) ರ ಪ್ರಕರಣ 28 ರಡಿ ಸರ್ಕಾರವು ನಿಗದಿಪಡಿಸಿರುವ ಬಡ್ಡಿ ದರ (Interest rate) ಭದ್ರತಾ ಸಾಲಗಳಿಗೆ (Security loan) ವಾರ್ಷಿಕ ಶೇ.14 ರಷ್ಟು, ಭದ್ರತಾ ರಹಿತ ಸಾಲಗಳಿಗೆ (Unsecured loan) ವಾರ್ಷಿಕ ಶೇ. 16 ರಷ್ಟು ಬಡ್ಡಿಯನ್ನು (interest) ಮಾತ್ರ ವಿಧಿಸಬೇಕು ಎಂದು ತಿಳಿಸಿದ್ದಾರೆ.

ಸರ್ಕಾರವು (govt) ನಿಗದಿಪಡಿಸಿದ ಬಡ್ಡಿ ದರಕ್ಕಿಂತ ಹೆಚ್ಚಿನ ಬಡ್ಡಿ ದರ ಪಡೆದ ಬಗ್ಗೆ ಪರಿವೀಕ್ಷಣೆಯಲ್ಲಿ (inspection) ಕಂಡುಬಂದಲ್ಲಿ ಅಥವಾ ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ಸದರಿಯವರ ಮೇಲೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →