ಮೂರು ಜನರ ಜೀವ ಉಳಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಸನ್ಮಾನ

Tribute to police personnel who saved three lives ಮೂರು ಜನರ ಜೀವ ಉಳಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಸನ್ಮಾನ

ಆನಂದಪುರ (anandapura), ಜು. 26: ಹೊಳೆ ನೀರಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಳ್ಳಲು ಮುಂದಾಗಿದ್ದ, ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ರಕ್ಷಿಸಿದ ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ (police personnel), ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಸನ್ಮಾನಿಸಿ ಅಭಿನಂದಿಸಿದ್ದಾರೆ.

ಸಾಗರ ಪೇಟೆ ಪೊಲೀಸ್ ಠಾಣೆ (sagar town station) ಹೆಡ್ ಕಾನ್ಸ್’ಟೇಬಲ್ ಶಿವರುದ್ರಯ್ಯ ಎ ಆರ್ ಹಾಗೂ ಡಿಎಆರ್ (dar) ಎಪಿಸಿ ಶಿವಾನಂದ್ ಸನ್ಮಾನಕ್ಕೊಳಗಾದ ಪೊಲೀಸ್ ಸಿಬ್ಬಂದಿಗಳಾಗಿದ್ದಾರೆ. ಆನಂದಪುರ ಪೊಲೀಸ್ ಠಾಣೆಯಲ್ಲಿ (anandapura police station) ನಡೆದ ಸರಳ ಕಾರ್ಯಕ್ರಮದಲ್ಲಿ, ಎಸ್ಪಿ ಜಿ.ಕೆ.ಮಿಥುನ್ ಕುಮಾರ್ (sp g k mithun kumar) ಅವರು ಸದರಿ ಸಿಬ್ಬಂದಿಗಳಿಗೆ ಶಾಲು ಹೊದಿಸಿ, ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಿದ್ದಾರೆ.

ಈ ಸಂದರ್ಭದಲ್ಲಿ ಸಾಗರ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ (dysp) ಗೋಪಾಲಕೃಷ್ಣ ಟಿ ನಾಯಕ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಸಕಾಲಿಕ ಕ್ರಮ : ತುರ್ತ ಸಹಾಯವಾಣಿ ವಾಹನ 112-ERSS ನಲ್ಲಿ ಶಿವರುದ್ರಯ್ಯ ಎ ಆರ್, ಮತ್ತು ವಾಹನ ಚಾಲಕ ಶಿವಾನಂದ್ ಅವರು 22-07-2024  ರಂದು ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು.

ಅಂದು ಮಧ್ಯಾಹ್ನ ಸಾಗರ (sagar) ತಾಲೂಕಿನ ಕುಗ್ವೆ ಗ್ರಾಮದ ಹೊಳೆ ನೀರಿಗೆ ಬಿದ್ದು ಮಹಿಳೆಯೋರ್ವರು ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸುತ್ತಿರುವ ಮಾಹಿತಿ ಲಭಿಸಿತ್ತು.  

ತಕ್ಷಣವೇ ಸ್ಥಳಕ್ಕಾಗಮಿಸಿದ್ದ ಈ ಇಬ್ಬರು ಸಿಬ್ಬಂದಿಗಳು,  ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ರಕ್ಷಿಸುವಲ್ಲಿ ಸಫಲರಾಗಿದ್ದರು. ಸಿಬ್ಬಂದಿಗಳ ಈ ಸಕಾಲಿಕ ಕ್ರಮವು ಸಾರ್ವಜನಿಕ ವಲಯದ ಮೆಚ್ಚುಗೆಗೆ ಪಾತ್ರವಾಗಿತ್ತು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →