180 ಅಡಿ ತಲುಪಿದ ಭದ್ರಾ ಡ್ಯಾಂ : ಒಳಹರಿವಿನಲ್ಲಿ ಇಳಿಕೆ!

Farmers of Shimoga – Davangere districts 180 ಅಡಿ ತಲುಪಿದ ಭದ್ರಾ ಡ್ಯಾಂ : ಒಳಹರಿವಿನಲ್ಲಿ ಇಳಿಕೆ! Bhadra Dam reached 180 feet: decrease in inflow!

ಶಿವಮೊಗ್ಗ (shivamogga), ಜು. 28: ಕಳೆದ ವರ್ಷ ಮಳೆ ಕೊರತೆಯಿಂದ ಭಾರೀ ಪ್ರಮಾಣದ ನೀರಿನ ಕೊರತೆ ಎದುರಿಸಿದ್ದ ಮಧ್ಯ ಕರ್ನಾಟಕ ಭಾಗದ ಪ್ರಮುಖ ಜಲಾಶಯವಾದ ಭದ್ರಾ (bhadra dam), ಪ್ರಸ್ತುತ ವರ್ಷ ಬೀಳುತ್ತಿರುವ ಉತ್ತಮ ಮುಂಗಾರು ಮಳೆಗೆ (monsoon rain) ಗರಿಷ್ಠ ಮಟ್ಟ ತಲುಪುವ ಹಂತಕ್ಕೆ ಬಂದಿದೆ!

july 28 ಭಾನುವಾರದ ಬೆಳಿಗ್ಗೆಯ ಮಾಹಿತಿಯಂತೆ, ಭದ್ರಾ ಡ್ಯಾಂ ನೀರಿನ ಮಟ್ಟ 180 ಅಡಿ 7 ಇಂಚು ತಲುಪಿದೆ. ಡ್ಯಾಂ ಗರಿಷ್ಠ ಮಟ್ಟವಾದ 186 ಅಡಿ ತಲುಪಲು ಇನ್ನೂ ಕೇವಲ 6 ಅಡಿ ನೀರು ಮಾತ್ರ ಬೇಕಾಗಿದೆ. ಸದ್ಯ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ (catchment areas) ಮಳೆಯ ತೀವ್ರತೆಯಲ್ಲಿ ಕೊಂಚ ಇಳಿಕೆಯಾಗಿದೆ.

ಇದರಿಂದ ಡ್ಯಾಂಗೆ ಹರಿದು ಬರುತ್ತಿರುವ (inflow) ನೀರಿನ ಪ್ರಮಾಣ ತುಸು ಇಳಿಕೆಯಾಗಿದೆ. ಭಾನುವಾರ ಬೆಳಿಗ್ಗೆಯ ಮಾಹಿತಿಯಂತೆ, ಡ್ಯಾಂನ ಒಳಹರಿವು 35,557 ಕ್ಯೂಸೆಕ್ ಇದೆ. ಶನಿವಾರ ಈ ಪ್ರಮಾಣ 49 ಸಾವಿರ ಕ್ಯೂಸೆಕ್ ನಷ್ಟಿತ್ತು. ಒಟ್ಟಾರೆ ಡ್ಯಾಂನಲ್ಲಿ 64. 877 ಟಿಎಂಸಿ ನೀರು ಸಂಗ್ರಹವಾಗಿದೆ.

ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಉತ್ತಮ ಮಳೆ (heavy rainfall) ಮುಂದುವರಿದರೆ, ಇನ್ನೆರೆಡು ಮೂರು ದಿನಗಳಲ್ಲಿ ಡ್ಯಾಂ ಗರಿಷ್ಠ ಮಟ್ಟ (bhadra dam water level) ತಲುಪುವ ಸಾಧ್ಯತೆಯಿದೆ ಎಂದು ಭದ್ರಾ ಜಲಾಶಯ ವ್ಯಾಪ್ತಿಯ ಇಂಜಿನಿಯರ್ ಗಳು ಅಭಿಪ್ರಾಯಪಡುತ್ತಾರೆ.

ಒಟ್ಟಾರೆ ಪ್ರಸ್ತುತ ವರ್ಷ ಭದ್ರಾ ಜಲಾಶಯ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ (maximum level) ಬರಲಾರಂಭಿಸಿರುವುದು ಅಚ್ಚುಕಟ್ಟು ವ್ಯಾಪ್ತಿಯ ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ ರೈತರ (farmers of shimoga – davangere districts) ಮೊಗದಲ್ಲಿ ಮಂದಹಾಸ ಮೂಡಿಸಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →