ಮಲೆನಾಡಲ್ಲಿ ಮಳೆ : ಭದ್ರಾ ಡ್ಯಾಂ ಒಳಹರಿವಿನಲ್ಲಿ ಮತ್ತಷ್ಟು ಇಳಿಕೆ – ಲಿಂಗನಮಕ್ಕಿ, ತುಂಗಾ ಏರಿಕೆ!

Rain in the malnad : Further decrease in Bhadra Dam inflow – Linganamakki, Tunga rise! ಮಲೆನಾಡಲ್ಲಿ ಮಳೆ : ಭದ್ರಾ ಡ್ಯಾಂ ಒಳಹರಿವಿನಲ್ಲಿ ಮತ್ತಷ್ಟು ಇಳಿಕೆ – ಲಿಂಗನಮಕ್ಕಿ, ತುಂಗಾ ಏರಿಕೆ!

ಶಿವಮೊಗ್ಗ (shivamogga), ಜು. 29: ಮಲೆನಾಡಲ್ಲಿ (malnad) ಮುಂಗಾರು ಮಳೆ (monsoon rain) ಆರ್ಭಟ ತಗ್ಗಿದೆ. ಉಕ್ಕಿ ಹರಿಯುತ್ತಿದ್ದ ನದಿ, ಕೆರೆಕಟ್ಟೆ, ಹಳ್ಳಕೊಳ್ಳಗಳ ನೀರಿನ ಹರಿವಿನಲ್ಲಿಇಳಿಕೆಯಾಗಿದೆ. ಈ ನಡುವೆ ಭದ್ರಾ ಡ್ಯಾಂ ಒಳಹರಿವಿನಲ್ಲಿ ಇಳಿಕೆ ಕಂಡುಬಂದಿದೆ. ಉಳಿದಂತೆ ಲಿಂಗನಮಕ್ಕಿ, ತುಂಗಾ ಡ್ಯಾಂಗಳ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.

ಜು. 29 ರ ಸೋಮವಾರ ಬೆಳಿಗ್ಗೆಯ ಮಾಹಿತಿಯಂತೆ, ಭದ್ರಾ ಜಲಾಶಯದ (bhadra dam) ಒಳಹರಿವು 18,381 ಕ್ಯೂಸೆಕ್ ಗೆ ಇಳಿಕೆಯಾಗಿದೆ. ಡ್ಯಾಂನ ನೀರಿನ ಮಟ್ಟ 181 ಅಡಿ 10 ಇಂಚು ಇದೆ. ಗರಿಷ್ಠ ಮಟ್ಟವಾದ 186 ಅಡಿ ತಲುಪಲು ಇನ್ನೂ ನಾಲ್ಕೂವರೆ ಅಡಿಯಷ್ಟು ನೀರು ಬೇಕಾಗಿದೆ. ಡ್ಯಾಂನಿಂದ 962 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ (outflow). ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 160. 9 ಅಡಿ ನೀರು ಸಂಗ್ರಹವಾಗಿತ್ತು (bhadra dam water level).

ಭಾನುವಾರಕ್ಕೆ ಹೋಲಿಸಿದರೆ, ತುಂಗಾ ಜಲಾಶಯದ (tunga dam) ಒಳಹರಿವಿನಲ್ಲಿ ಕೊಂಚ ಏರಿಕೆ ಕಂಡುಬಂದಿದೆ. 38,086 ಕ್ಯೂಸೆಕ್ ಒಳಹರಿವಿದ್ದು, ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ 34,498 ಕ್ಯೂಸೆಕ್ ನೀರನ್ನು ಹೊಸಪೇಟೆ ತುಂಗಭದ್ರಾ ಜಲಾಶಯಕ್ಕೆ (hospet tugabhadra dam) ಹೊರ ಹರಿಸಲಾಗುತ್ತಿದೆ.

ಉಳಿದಂತೆ ಲಿಂಗನಮಕ್ಕಿ ಡ್ಯಾಂನ (linganamakki dam) ಒಳಹರಿವಿನಲ್ಲಿ ಕೊಂಚ ಏರಿಕೆ ಕಂಡುಬಂದಿದೆ. 40,382 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಡ್ಯಾಂನ ನೀರಿನ ಮಟ್ಟ 1809. 15 (ಗರಿಷ್ಠ ಮಟ್ಟ : 1819) ಅಡಿಯಿದೆ. 3815 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 1786. 30 ಅಡಿ ನೀರು ಸಂಗ್ರಹವಾಗಿತ್ತು.

ಮಳೆ ವಿವರ : ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆ ವಿವರ ಈ ಮುಂದಿನಂತಿದೆ. ಪಶ್ಚಿಮಘಟ್ಟ (western ghat) ವ್ಯಾಪ್ತಿಯ ಪ್ರದೇಶಗಳಾದ ಮಾಣಿಯಲ್ಲಿ (mani) 48 ಮಿ.ಮೀ., ಯಡೂರು (yadur) 79 ಮಿ.ಮೀ., ಹುಲಿಕಲ್ (hulikall) 61 ಮಿ.ಮೀ., ಮಾಸ್ತಿಕಟ್ಟೆ (masthikatte) 87 ಮಿ.ಮೀ., ಚಕ್ರಾ (chakra) 103 ಮಿ.ಮೀ., ಸಾವೇಹಕ್ಲುವಿನಲ್ಲಿ (savehakklu) 156 ಮಿ.ಮೀ. ವರ್ಷಧಾರೆಯಾಗಿದೆ (rain).

ಶಿವಮೊಗ್ಗ (shimoga) 3.80 ಮಿ.ಮೀ., ಭದ್ರಾವತಿ (bhadravati) 3.70 ಮಿ.ಮೀ., ತೀರ್ಥಹಳ್ಳಿ (thirthahalli) 39,60, ಸಾಗರ (sagar) 17.50 ಮಿ.ಮೀ., ಶಿಕಾರಿಪುರ (shikaripur) 1.10 ಮಿ.ಮೀ., ಸೊರಬ (sorab) 6.90 ಮಿ.ಮೀ., ಹೊಸನಗರ (hosanagar) 20.90 ಮಿ.ಮೀ. ಮಳೆಯಾಗಿದೆ (rainfall).

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →