ಭದ್ರಾ ಜಲಾಶಯದಿಂದ ನಾಲೆಗಳಿಗೆ ಇಂದಿನಿಂದಲೇ ನೀರು ಹರಿಸಲು ಮಹತ್ವದ ನಿರ್ಧಾರ!

An important decision to release water from Bhadra reservoir to the canals from today! ಭದ್ರಾ ಜಲಾಶಯದಿಂದ ನಾಲೆಗಳಿಗೆ ಜು. 29 ರಿಂದಲೇ ನೀರು ಹರಿಸಲು ಮಹತ್ವದ ನಿರ್ಧಾರ!

ಶಿವಮೊಗ್ಗ (shivamogga), ಜು. 29: ಭದ್ರಾ ಜಲಾಶಯದಿಂದ (bhadra dam) ನಾಲೆಗಳಿಗೆ ಇಂದಿನಿಂದಲೇ (ಜು. 29) ನೀರು ಹರಿಸಲು ಸೋಮವಾರ ನಡೆದ ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಶಿವಮೊಗ್ಗ ನಗರದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (madhu bangarappa) ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯ ನಂತರ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘ಇಂದಿನಿಂದಲೇ ಜಲಾಶಯದಿಂದ ನಾಲೆಗಳಿಗೆ (bhadra dam canals) ನೀರು ಹರಿಸಲು ನಿರ್ಧರಿಸಲಾಗಿದೆ. ಎಷ್ಟು ಪ್ರಮಾಣದ ನೀರು ಹರಿಸಬೇಕು ಎಂಬುವುದನ್ನು ಪ್ರಾಧಿಕಾರದ ಇಂಜಿನಿಯರ್ ಗಳು ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದು ಸ್ಪಷ್ಟಪಡಿಸಿದ್ದಾರೆ.

ನಾಲೆಯ ಕೊನೆಯವರೆಗೆ ನೀರು ತಲುಪಿಸುವ ಕಾರ್ಯ ಆಗಬೇಕು. ಈ ಸಂಬಂಧ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮಳೆಯ ಪ್ರಮಾಣ ಮತ್ತೀತರ ಅಂಶಗಳನ್ನು ಪರಿಗಣಿಸಿ ನೀರು ಹರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ನಂತರ ಮುಂದಿನ ಪರಿಸ್ಥಿತಿಗಳ ಅವಲೋಕನ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →