ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳಿಗೆ ಭಾರೀ ಪ್ರಮಾಣದ ಒಳಹರಿವು!

Heavy inflow to Linganamakki, Tunga, Bhadra reservoirs! ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳಿಗೆ ಭಾರೀ ಪ್ರಮಾಣದ ಒಳಹರಿವು!

ಶಿವಮೊಗ್ಗ (shivamogga), ಜು. 31: ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಬೀಳುತ್ತಿರುವ ಧಾರಾಕಾರ ಮಳೆಯಿಂದ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ತುಂಗ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಭಾರೀ ಪ್ರಮಾಣದ ಏರಿಕೆ ಕಂಡುಬಂದಿದೆ!

ಬುಧವಾರ ಬೆಳಿಗ್ಗೆಯ ಮಾಹಿತಿಯಂತೆ ಲಿಂಗನಮಕ್ಕಿ ಜಲಾಶಯದ (linganamakki dam) ಒಳಹರಿವು 82,587 ಕ್ಯೂಸೆಕ್ ಇದೆ. 5636 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ (out flow). ಡ್ಯಾಂ ನೀರಿನ ಮಟ್ಟ 1812. 7 (ಗರಿಷ್ಠ ಮಟ್ಟ : 1819) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 1787. 5 ಅಡಿಯಿತ್ತು.

ಭದ್ರಾ ಜಲಾಶಯದ (bhadra dam) ಒಳಹರಿವು 61,042 ಕ್ಯೂಸೆಕ್ ಗೆ ಹೆಚ್ಚಳವಾಗಿದೆ. 41,957 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಡ್ಯಾಂ ನೀರಿನ ಮಟ್ಟ (bhadra dam water level) 184. 6 (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 162. 2 ಅಡಿಯಿತ್ತು.

ತುಂಗಾ ಜಲಾಶಯದ ಒಳಹರಿವು (tunga dam inflow) 72,250 ಕ್ಯೂಸೆಕ್ ಇದೆ. ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ ಒಳಹರಿವಿನಷ್ಟೆ ನೀರನ್ನು ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ (hospet tungabhadra dam) ಬಿಡಲಾಗುತ್ತಿದೆ.

ಮಳೆ ವಿವರ : ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆ (rain) ವಿವರ ಈ ಮುಂದಿನಂತಿದೆ. ಪಶ್ಚಿಮಘಟ್ಟ (western ghat) ಪ್ರದೇಶಗಳಾದ ಮಾಣಿಯಲ್ಲಿ (mani) 185 ಮಿಲಿ ಮೀಟರ್ (ಮಿ.ಮೀ.,) ಯಡೂರು (yadur) 188 ಮಿ.ಮೀ., ಹುಲಿಕಲ್ (hulikall) 189 ಮಿ.ಮೀ., ಮಾಸ್ತಿಕಟ್ಟೆ (masthikatte) 186 ಮಿ.ಮೀ., ಚಕ್ರಾ (chakra) 201 ಮಿ.ಮೀ., ಸಾವೇಹಕ್ಲು (savehakklu) 155 ಮಿ.ಮೀ. ವರ್ಷಧಾರೆಯಾಗಿದೆ.

ಉಳಿದಂತೆ ಶಿವಮೊಗ್ಗ (shimoga) 11. 20 ಮಿ.ಮೀ., ಭದ್ರಾವತಿ (bhadravati) 8. 40 ಮಿ.ಮೀ., ತೀರ್ಥಹಳ್ಳಿ (thirthahalli) 73. 90 ಮಿ.ಮೀ., ಸಾಗರ (sagar) 89. 40 ಮಿ.ಮೀ., ಶಿಕಾರಿಪುರ (shikaripur) 13. 80 ಮಿ.ಮೀ., ಸೊರಬ (sorab) 28. 50 ಮಿ.ಮೀ., ಹೊಸನಗರದಲ್ಲಿ (hosanagara) 63. 30 ಮಿ.ಮೀ. ಮಳೆಯಾಗಿದೆ (rainfall).

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →