ಮನೆಯಲ್ಲಿ ಚಿನ್ನಾಭರಣ ಕಳವು : ಇಬ್ಬರು ಯುವಕರ ಬಂಧನ!

Theft of gold jewelry at home : Two youths arrested! ಮನೆಯಲ್ಲಿ ಚಿನ್ನಾಭರಣ ಕಳವು : ಇಬ್ಬರು ಯುವಕರ ಬಂಧನ!

ಶಿವಮೊಗ್ಗ (shivamogga), ಆ. 3: ಮನೆಯೊಂದರಲ್ಲಿ ಚಿನ್ನಾಭರಣ ಕಳವು (theft of gold jewellery) ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗದ ಕೋಟೆ ಠಾಣೆ (shimoga kote police station) ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ ಘಟನೆ ನಡೆದಿದೆ.

ಶಿವಮೊಗ್ಗದ ಚಿಕ್ಕಲ್ ಬಡಾವಣೆ ನಿವಾಸಿ ಮೊಹಮ್ಮದ್ ರಫೀಕ್ ಯಾನೆ ಕಾಣ (25) ಮತ್ತು ಬಾಪೂಜಿನಗರದ ನಿವಾಸಿ ಅತಾವುಲ್ಲಾ (24) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.

ಆರೋಪಿಗಳಿಂದ ಅಂದಾಜು 7,62,000 ರೂ. ಮೌಲ್ಯದ 127 ಗ್ರಾಂ ತೂಕದ, ಕಳವು ಚಿನ್ನಾಭರಣಗಳನ್ನು (jewellery) ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

15-7-2022 ರಂದು ಶಿವಮೊಗ್ಗದ ಬಾಪೂಜಿ ನಗರದ (bapuji nagar) ನಿವಾಸಿ ದಸ್ತಗೀರ್ ಖಾನ್ ಯಾನೆ ಬಾಬು (47) ಎಂಬುವರ ಮನೆಯಲ್ಲಿ ಕಳವು ಕೃತ್ಯ ನಡೆದಿತ್ತು. ಬಾಗಿಲ ಬೀಗ ಮುರಿದು ಒಳ ಪ್ರವೇಶಿಸಿ, ಚಿನ್ನಾಭರಣ ಮತ್ತು ಹಣ (cash) ಕಳವು ಮಾಡಲಾಗಿತ್ತು. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಡಿವೈಎಸ್ಪಿ (dysp) ಬಾಬು ಆಂಜನಪ್ಪ ಮೇಲ್ವಿಚಾರಣೆಯಲ್ಲಿ ಇನ್ಸ್’ಪೆಕ್ಟರ್ (inspector) ಎಂ. ಎಸ್. ದೀಪಕ್, ಸಬ್ ಇನ್ಸ್’ಪೆಕ್ಟರ್ (sub inspector) ಗಳಾದ ಕುಮಾರ್, ಸಿ.ಆರ್.ಕೊಪ್ಪದ್ ಹಾಗೂ ಸಿಬ್ಬಂದಿಗಳಾದ ಎಎಸ್ಐ (asi) ಹರ್ಷ, ಹೆಚ್.ಸಿ. (hc) ಗಳಾದ ಅಣ್ಣಪ್ಪ, ನಾಗರಾಜ್, ಸಿಪಿಸಿಗಳಾದ (cpc) ಪ್ರಕಾಶ್, ಗೊರವರ ಅಂಜಿನಪ್ಪ, ಕಿಶೋರ, ಜಯಶ್ರೀ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →