ಶಿವಮೊಗ್ಗ – ಭದ್ರಾವತಿ ನಡುವಿನ ರಸ್ತೆಯಲ್ಲಿ ಕಾರ್ಗತ್ತಲು : ಅಮಾಯಕರ ಬಲಿಗಾಗಿ ಕಾಯುತ್ತಿವೆಯೇ ಪಾಲಿಕೆ, ಹೆದ್ದಾರಿ ಇಲಾಖೆ?

On the road between Shimoga and Bhadravati : Are the corporation and the highway department waiting for innocent victims? ಶಿವಮೊಗ್ಗ – ಭದ್ರಾವತಿ ನಡುವಿನ ರಸ್ತೆಯಲ್ಲಿ ಕಾರ್ಗತ್ತಲು : ಅಮಾಯಕರ ಬಲಿಗಾಗಿ ಕಾಯುತ್ತಿವೆಯೇ ಪಾಲಿಕೆ - ಹೆದ್ದಾರಿ ಇಲಾಖೆ? ವರದಿ : ಬಿ. ರೇಣುಕೇಶ್ b renukesha

ಶಿವಮೊಗ್ಗ (shivamogga), ಆ. 4: ಶಿವಮೊಗ್ಗ ನಗರದ ಹೊರವಲಯ ಮಹಾನಗರ ಪಾಲಿಕೆ 15 ನೇ ವಾರ್ಡ್ ಮಲವಗೊಪ್ಪದ (malavagoppa) ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬೀದಿ ದೀಪಗಳು (street lights) ಹಾಳಾಗಿವೆ. ಸಂಜೆ ವೇಳೆ ಕಾರ್ಗತ್ತಲು ಆವರಿಸುತ್ತಿದೆ. ಇಲ್ಲಿಯವರೆಗೂ ದುರಸ್ತಿಗೆ ಕ್ರಮಕೈಗೊಂಡಿಲ್ಲ. ಸಂಪೂರ್ಣ ನಿರ್ಲಕ್ಷ್ಯವಹಿಸಲಾಗಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಶಿವಮೊಗ್ಗ – ಭದ್ರಾವತಿ ನಡುವಿನ ಸದರಿ ಹೆದ್ದಾರಿಯಲ್ಲಿ (shimoga – bhadravati national highway) ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬೆಂಗಳೂರು (bengaluru) ಸೇರಿದಂತೆ ಪ್ರಮುಖ ನಗರಗಳಿಗೆ ಸಂಪರ್ಕ ಸೇತುವಾಗಿದೆ. ಈ ಕಾರಣದಿಂದ ಸದರಿ ಹೆದ್ಧಾರಿಯಲ್ಲಿ ಭಾರೀ ಪ್ರಮಾಣದ, ಜನ – ವಾಹನ ದಟ್ಟಣೆಯಿದೆ.

ಹೆದ್ದಾರಿ (highway) ಅಭಿವೃದ್ದಿ ಕಾಮಗಾರಿ ನಡೆಸುತ್ತಿದ್ದ ವೇಳೆ ಮಾಡಿದ ಎಡವಟ್ಟಿನಿಂದ, ಬೀದಿ ದೀಪಗಳು ಆನ್ ಆಗುತ್ತಿಲ್ಲ. ಈಗಾಗಲೇ ರಾಷ್ಟ್ರಿಯ ಹೆದ್ದಾರಿ (national highway dept) ಹಾಗೂ ಮಹಾನಗರ ಪಾಲಿಕೆ (shimoga corporation) ಆಡಳಿತದ ಗಮನಕ್ಕೆ ತರಲಾಗಿದೆ. ಆದರೆ ಇಲ್ಲಿಯವರೆಗೂ ಬೀದಿ ದೀಪಗಳ ದುರಸ್ತಿಗೆ ಕ್ರಮಕೈಗೊಂಡಿಲ್ಲ.

ಒಬ್ಬರು ಮತ್ತೊಬ್ಬರ ಮೇಲೆ ಜವಾಬ್ದಾರಿ ಹಾಕಿ ನುಣುಚಿಕೊಳ್ಳುವ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ. ಇದರಿಂದ ಕಳೆದ ಎರಡು ತಿಂಗಳಿನಿಂದ ಹೆದ್ದಾರಿಯಲ್ಲಿ ಕತ್ತಲ ಸ್ಥಿತಿ (dark condition) ಆವರಿಸಿದೆ ಎಂದು ನಿವಾಸಿಗಳು (residents) ಸ್ಥಳೀಯ ಆಕ್ರೋಶ ವ್ಯಕ್ತಪಡಿಸುತ್ತಾರೆ.

ಬೀದಿ ದೀಪಗಳ ಅವ್ಯಸ್ಥೆಯಿಂದ (chaos of street lights), ಸಂಜೆ ವೇಳೆ ಹೆದ್ಧಾರಿಯಲ್ಲಿ ಕಾರ್ಗತ್ತಲು ಆವರಿಸುತ್ತಿದೆ. ಅಪಘಾತಗಳು (accidents) ಸಂಭವಿಸುತ್ತಿವೆ. ಈಗಾಗಲೇ ಮೂರ್ನಾಲ್ಕು ಬೈಕ್ ಸವಾರರು ಅಪಘಾತಕ್ಕೀಡಾಗಿದ್ದಾರೆ. ನಾಗರೀಕರು (citizens) ತೊಂದರೆ ಅನುಭವಿಸುವಂತಾಗಿದೆ ಎಂದು ಸ್ಥಳೀಯ ನಿವಾಸಿ ಶ್ರೀಕಾಂತ್ ಎಂಬುವರು ದೂರಿದ್ದಾರೆ.

ತಕ್ಷಣವೇ ಸಂಬಂಧಿಸಿದವರು ಎಚ್ಚೆತ್ತುಕೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ (national highway) ದುರಸ್ತಿಗೀಡಾಗಿರುವ ಬೀದಿ ದೀಪ ಸರಿಪಡಿಸಬೇಕು. ಈ ಮೂಲಕ ಅಮಾಯಕರು ಸಾವು – ನೋವಿಗೆ ತುತ್ತಾಗದಂತೆ ಎಚ್ಚರವಹಿಸಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →