ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ರೆಸಾರ್ಟ್, ಹೋಂ ಸ್ಟೇ ವಿರುದ್ದ ಕಾರ್ಯಾಚರಣೆ!

Operation against illegal resorts and home stays built forest encroachment! ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ರೆಸಾರ್ಟ್ ಹೋಂ ಸ್ಟೇ ವಿರುದ್ದ ಕಾರ್ಯಾಚರಣೆ

ಬೆಂಗಳೂರು / ಶಿವಮೊಗ್ಗ, ಆ. 5: ರಾಜ್ಯದ ಪಶ್ಚಿಮಘಟ್ಟ ಅರಣ್ಯ ಪ್ರದೇಶ (western ghat forest) ವ್ಯಾಪ್ತಿಯ 10 ಜಿಲ್ಲೆಗಳಲ್ಲಿ, ಅರಣ್ಯ ಭೂಮಿ ಒತ್ತುವರಿ ಮಾಡಿ (forest land encroachment) ನಿರ್ಮಿಸಿರುವ ರೆಸಾರ್ಟ್, ಹೋಂ ಸ್ಟೇ ಸೇರಿದಂತೆ ಎಲ್ಲ ಮಾದರಿಯ ಅರಣ್ಯ ಒತ್ತುವರಿ ತೆರವುಗೊಳಿಸಲು ಆಗಸ್ಟ್ 5 ರ ಸೋಮವಾರದಿಂದ ಕಾರ್ಯಾಚರಣೆ ನಡೆಸಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ (forest dept minister eshwar khandre) ಘೋಷಿಸಿದ್ದಾರೆ.

ಈ ಕುರಿತಂತೆ ಸಚಿವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮೊದಲು ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ (resort), ಹೋಂ ಸ್ಟೇ (home stay) ಇತರೆ ಕಟ್ಟಡ, ಜಮೀನುಗಳನ್ನು (agriculture land) ತೆರವುಗೊಳಿಸಲು ನಿರ್ಧರಿಸಲಾಗಿದೆ. ಪಶ್ಚಿಮಘಟ್ಟ (western ghat)  ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ವಾಣಿಜ್ಯ ಚಟುವಟಿಕೆ (commercial activities) ನಡೆಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಒತ್ತುವರಿ ತೆರವಿಗಾಗಿ (encroachment clearance) ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚಿಸಲಾಗಿದೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ಕಾರ್ಯಪಡೆ ಅಸ್ತಿತ್ವಕ್ಕೆ ತರಲಾಗಿದೆ. ಪಶ್ಚಿಮಘಟ್ಟ ಅರಣ್ಯದಲ್ಲಿ 2015 ರ ನಂತರದ ಒತ್ತುವರಿಗೆ (encroachment) ಸಂಬಂಧಿಸಿದಂತೆ, ಕರ್ನಾಟಕ ಅರಣ್ಯ ಕಾಯ್ದೆ (karnataka forest act) ಸೆಕ್ಷನ್ 64 ಎ ಅಡಿ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಕೂಡಲೇ ತೆರವು ಕಾರ್ಯಾಚರಣೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ನಡುಕ : ಶಿವಮೊಗ್ಗ ಜಿಲ್ಲೆಯು (shimoga district) ಕೂಡ ಪಶ್ಚಿಮಘಟ್ಟ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿದೆ. ಜಿಲ್ಲೆಯ ವಿವಿಧೆಡೆ ಅರಣ್ಯ ಪ್ರದೇಶಗಳಲ್ಲಿ (forest areas), ಕಳೆದೊಂದು ದಶಕದ ಅವಧಿಯಲ್ಲಿ ಭಾರೀ ದೊಡ್ಡ ಪ್ರಮಾಣದ ರೆಸಾರ್ಟ್, ಹೋಂ ಸ್ಟೇಗಳು ತಲೆಎತ್ತಿವೆ. ಈಗಾಗಲೇ ಅನಧಿಕೃತ ಕಟ್ಟಡಗಳನ್ನು ಅರಣ್ಯ ಇಲಾಖೆ ಗುರುತಿಸಿದೆ ಎನ್ನಲಾಗಿದೆ.

ಇದೀಗ ಸೋಮವಾರದಿಂದ  ಅನದಿಕೃತ ಒತ್ತುವರಿ ತೆರವು ಕಾರ್ಯಾಚರಣೆ (unscheduled encroachment clearance operation) ಆರಂಭಿಸಲು ರಾಜ್ಯ ಸರ್ಕಾರ ಅರಣ್ಯ ಇಲಾಖೆಗೆ ಖಡಕ್ ಆದೇಶ ನೀಡಿದೆ.  ಇದು ಸಹಜವಾಗಿಯೇ ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡಿರುವವರಲ್ಲಿ ನಡುಕ ಹುಟ್ಟಿಸಿದೆ. ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಯಲಿದೆ ಎಂಬುವುದು ಇನ್ನಷ್ಟೆ ಸ್ಪಷ್ಟವಾಗಬೇಕಾಗಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →