ಶ್ರೀಗಂಧದ ತುಂಡುಗಳ ಅಕ್ರಮ ಮಾರಾಟ : ಮೂವರ ಬಂಧನ!

Illegal sale of sandalwood pieces : Three arrested! ಶ್ರೀಗಂಧದ ತುಂಡುಗಳ ಅಕ್ರಮ ಮಾರಾಟ : ಮೂವರ ಬಂಧನ! ಶಿವಮೊಗ್ಗ

ಶಿವಮೊಗ್ಗ (shivamogga), ಆ. 7: ಶ್ರೀಗಂಧದ ತುಂಡುಗಳನ್ನು (sandalwood logs) ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗ ತುಂಗಾನಗರ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ ಘಟನೆ ನಡೆದಿದೆ.

ಶಿವಮೊಗ್ಗ (shimoga) ಜೆಪಿ ನಗರದ ನಿವಾಸಿ ಇಮ್ದಾದ್ ಖಾನ್ (42), ಆರ್.ಎಂ.ಎಲ್ ನಗರದ ಸಿದ್ಧಿಕ್ ಬಾಷಾ ಯಾನೆ ಸಿದ್ದು (30) ಮತ್ತು ಇಂದಿರಾನಗರದ ಫೈರೋಜ್ ಖಾನ್ ಯಾನೆ ಗಿಡ್ಡು (34) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.

ಆರೋಪಿಗಳಿಂದ 58 ಸಾವಿರ ರೂ. ಮೌಲ್ಯದ 14. 5 ಕೆಜಿ ತೂಕದ ಶ್ರೀಗಂಧದ ತುಂಡುಗಳು (sandalwood pieces) ಹಾಗೂ ಕೃತ್ಯಕ್ಕೆ ಬಳಸಿದ್ದ ಆಲ್ಟೋ ಕಾರನ್ನು (alto car) ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆ. 6 ರಂದು ರಾತ್ರಿ ಆರೋಪಿಗಳು (accused) ಉಂಬ್ಳೆಬೈಲು ರಸ್ತೆಯ ದರ್ಗಾದ ಸಮೀಪ, ಕಾರಿನಲ್ಲಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಮಾರಾಟ (illegal sale) ಮಾಡುತ್ತಿರುವ ಕುರಿತಂತೆ, ಪೊಲೀಸರಿಗೆ ಖಚಿತ ವರ್ತಮಾನ ಲಭಿಸಿತ್ತು. ಇದರ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಎಸ್ಪಿ (sp), ಎಎಸ್ಪಿ (asp), ಡಿವೈಎಸ್ಪಿ (dysp) ಮಾರ್ಗದರ್ಶನ ಹಾಗೂ ತುಂಗಾನಗರ ಠಾಣೆ (shimoga tunganagar police station) ಇನ್ಸ್’ಪೆಕ್ಟರ್ (inspector) ಮೇಲ್ವಿಚಾರಣೆಯಲ್ಲಿ ಸಬ್ ಇನ್ಸ್’ಪೆಕ್ಟರ್ (psi) ಗಳಾದ ಶಿವಪ್ರಸಾದ್, ಸಿದ್ದಪ್ಪ, ಸಿಬ್ಬಂದಿಗಳಾದ ಹೆಚ್.ಸಿ. (hc) ಕಿರಣ್ ಮೋರೆ, ಅರುಣ್ ಕುಮಾರ್, ಪಿಸಿ (pc) ಗಳಾದ ಹರೀಶ್ ನಾಯ್ಕ್, ನಾಗಪ್ಪ, ಲಂಕೇಶ್, ಹರೀಶ್, ಜಯಪ್ಪ, ರಮೇಶ್ ರವರು ಈ ಕಾರ್ಯಾಚರಣೆ ನಡೆಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →