ಬೆಕ್ಕು ಕಚ್ಚಿದ ಪರಿಣಾಮ ರೇಬೀಸ್ ರೋಗಕ್ಕೆ ತುತ್ತಾಗಿ ಮಹಿಳೆ ಸಾವು!

A woman died of rabies as a result of being bitten by a cat! ಬೆಕ್ಕು ಕಚ್ಚಿದ ಪರಿಣಾಮ ರೇಬೀಸ್ ರೋಗಕ್ಕೆ ತುತ್ತಾಗಿ ಮಹಿಳೆ ಸಾವು!

ಶಿಕಾರಿಪುರ (shikaripur), ಆ. 9: ಮನೆಯಲ್ಲಿ ಸಾಕಿದ್ದ ಬೆಕ್ಕೊಂದು ಕಚ್ಚಿದ (cat bite) ಪರಿಣಾಮ ರೇಬೀಸ್ ತಗುಲಿ ಮಹಿಳೆಯೋರ್ವರು (women) ಮೃತಪಟ್ಟ ಘಟನೆ, ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ತರಲಘಟ್ಟ (tarlagatta shikaripura) ಗ್ರಾಮದಲ್ಲಿ ನಡೆದಿದೆ.

ಗೃಹಿಣಿ ಗಂಗೀಬಾಯಿ (44) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಕಳೆದ ಎರಡು ತಿಂಗಳ ಹಿಂದೆ ಮಹಿಳೆಯ ಕಾಲಿಗೆ ಬೆಕ್ಕು (cat) ಕಚ್ಚಿತ್ತು. ಖಾಸಗಿ ಆಸ್ಪತ್ರೆಗೆ (private hospital) ತೆರಳಿ ಚಿಕಿತ್ಸೆ ಪಡೆದಿದ್ದರು.

ರೇಬೀಸ್ (rabies) ಮುನ್ನೆಚ್ಚರಿಕೆಯಾಗಿ ಐದು ಇಂಜೆಕ್ಷನ್ (rabies injection) ಪಡೆಯಬೇಕಿದ್ದ ಮಹಿಳೆಯು, ಕೇವಲ ಒಂದು ಇಂಜೆಕ್ಷನ್ ಪಡೆದಿದ್ದರು. ಗುಣಮುಖರಾಗಿದ್ದ ಕಾರಣದಿಂದ ಉಳಿದ ನಾಲ್ಕು ಇಂಜೆಕ್ಷನ್ (injection) ಪಡೆಯದೆ ನಿರ್ಲಕ್ಷ್ಯವಹಿಸಿದ್ದರು.

ಆದರೆ ಕಳೆದ 10 ದಿನಗಳ ಹಿಂದೆ ಅವರು ಅನಾರೋಗ್ಯಕ್ಕೆ (un health) ತುತ್ತಾಗಿದ್ದರು. ಗುಣಮುಖರಾಗದ ಕಾರಣದಿಂ ಶಿಕಾರಿಪುರ ತಾಲೂಕು ಆಸ್ಪತ್ರೆಗೆ (shikaripura govt hospital) ದಾಖಲಾಗಿದ್ದರು. ಅಲ್ಲಿಂದ ಅವರನ್ನು ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ (shimoga megan hospital) ದಾಖಲಿಸಿದ್ದು, ಗುರುವಾರ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ ಎಂದು ಜಿಲ್ಲಾ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಅಧಿಕಾರಿ ಡಾ. ಮಲ್ಲಪ್ಪ ಅವರು ತಿಳಿಸಿದ್ದಾರೆ.

ಶುಕ್ರವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪ್ರಾಣಿಗಳು ಕಚ್ಚಿದ (animal bites) ವೇಳೆ ತಕ್ಷಣವೇ ಸದರಿ ಗಾಯವನ್ನು ಆಂಟಿಬಯಾಟಿಕ್ (antibiotic liquid) ವಸ್ತುವಿನಿಂದ ಚೆನ್ನಾಗಿ ತೊಳೆಯಬೇಕು. ತದನಂತರ ಸಮೀಪದ ಆಸ್ಪತ್ರೆಗೆ ತೆರಳಿ ರೇಬೀಸ್ ಲಸಿಕೆ (rabies injection) ಪಡೆಯಬೇಕು.

ಒಂದು ತಿಂಗಳಲ್ಲಿ ನಾಲ್ಕು ಇಂಜೆಕ್ಷನ್ ಪಡೆಯಬೇಕಾಗುತ್ತದೆ. ಇದರಿಂದ ರೇಬೀಸ್ ಬರದಂತೆ ತಡೆಯಲು ಸಾಧ್ಯವಾಗುತ್ತದೆ. ಈ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವಹಿಸಬಾರದು ಎಂದು ಡಾ. ಮಲ್ಲಪ್ಪ ಅವರು ಸಲಹೆ ನೀಡುತ್ತಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →