ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಕ್ಯಾನ್ಸರ್ ಪೀಡಿತ ಬಾಲಕಿಯ ಚಿಕಿತ್ಸೆಗೆ ನೆರವಿನಹಸ್ತ

An organization donated for the treatment of a cancer-stricken girl on the occasion of Independence Day ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಕ್ಯಾನ್ಸರ್ ಪೀಡಿತ ಬಾಲಕಿಯ ಚಿಕಿತ್ಸೆಗೆ ನೆರವಿನಹಸ್ತ

ಶಿವಮೊಗ್ಗ (shivmogga), ಆ. 15: ಸ್ವಾತಂತ್ರ್ಯ ದಿನಾಚರಣೆ (independence day) ಅಂಗವಾಗಿ, ಕ್ಯಾನ್ಸರ್ ಪೀಡಿತ ಬಾಲಕಿಯ ಚಿಕಿತ್ಸೆಗೆ ದೇಣಿಗೆ ನೀಡುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಆದಿ ಜಾಂಬವ ರಾಜ್ಯ ಸಮಿತಿಯು, ವಿಭಿನ್ನವಾಗಿ ಸ್ವಾತಂತ್ರ್ಯೋತ್ಸವ ಆಚರಿಸಿ ಗಮನ ಸೆಳೆದಿದೆ.

‘ಶಿವಮೊಗ್ಗ (shimoga) ನಗರದ ದುರ್ಗಿಗುಡಿ ಕಚೇರಿಯಲ್ಲಿ ಆ. 15 ರಂದು ನಡೆದ ಸಮಾರಂಭದಲ್ಲಿ, ಹಿರಿಯೂರಿನ ದಲಿತ ಗುರುಪೀಠದ ಗುರುಪ್ರಕಾಶ್ ಸ್ವಾಮೀಜಿಯವರ ಮೂಲಕ, ಬಾಲಕಿಯ ಕುಟುಂಬದವರಿಗೆ ಚೆಕ್ ಹಸ್ತಾಂತರ ಮಾಡಲಾಯಿತು’ ಎಂದು ಸಮಿತಿಯ ರಾಜ್ಯಾಧ್ಯಕ್ಷರಾದ ಎನ್. ಪ್ರಕಾಶ್ ಅವರು ಮಾಹಿತಿ ನೀಡಿದ್ದಾರೆ.

ಶಿವಮೊಗ್ಬ ಬೊಮ್ಮನಕಟ್ಟೆ ಬಡಾವಣೆಯ ಬಡ ಕುಟುಂಬದ ಬಾಲಕಿಯು ಕ್ಯಾನ್ಸರ್ ಗೆ ತುತ್ತಾಗಿದ್ದು, ಸದ್ಯ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಂತಹಂತವಾಗಿ ಸಮಿತಿಯಿಂದ ಬಾಲಕಿಯ ಕುಟುಂಬಕ್ಕೆ ನೆರವಿನಹಸ್ತ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಬಾಲಕಿಯ ಕುಟುಂಬಕ್ಕೆ ನೆರವಿನಹಸ್ತ ಕಲ್ಪಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ಸಮಿತಿಯವತಿಯಿಂದ ಮತ್ತಷ್ಟು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದು ಎನ್. ಪ್ರಕಾಶ್ ಅವರು ಹೇಳಿದ್ದಾರೆ.

ಸಮಾರಂಭದಲ್ಲಿ ಪತ್ರಕರ್ತ ಚನ್ನಬಸಪ್ಪ, ಸಮಿತಿಯ ಗೌರವಾಧ್ಯಕ್ಷರಾದ ದೇವೇಂದ್ರಪ್ಪ, ಜಿಲ್ಲಾಧ್ಯಕ್ಷರಾದ ಕರಿಬಸಪ್ಪ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಕೆಂಚಮ್ಮ ರಮೇಶ್, ಪ್ರಮುಖರಾದ ಹಾರನಹಳ್ಳಿ ಹಳದಪ್ಪ, ಪ್ರತಾಪ್, ಕಲ್ಲಪ್ಪ ಸೇರಿದಂತೆ ಮೊದಲಾದವರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →