sagara | ಈಜಲು ತೆರಳಿದ ಬೆಂಗಳೂರಿನ ವಿದ್ಯಾರ್ಥಿ ನೀರುಪಾಲು!

ಸಾಗರ (sagar), ಆ. 23: ಈಜಾಡಲು ತೆರಳಿದ ಬೆಂಗಳೂರು (bengaluru) ಎಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ, ಸಾಗರ ತಾಲೂಕಿನ ಆನಂದಪುರದ (sagara taluk anandapura) ಚಂಪಕ ಸರಸು ಕಲ್ಯಾಣಿಯಲ್ಲಿ ಆ. 23 ರ ಶುಕ್ರವಾರ ನಡೆದಿದೆ.

ಬೆಂಗಳೂರಿನ ಆಂಜನ್ ನಗರದ ನಿವಾಸಿ ಕುಶಾಲ್ ದೇವ್ (22) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಖಾಸಗಿ ಎಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಯಾಗಿದ್ದಾನೆ (engineer college student).

ಮೃತ ಕುಶಾಲ್ ದೇವ್ ಕಾಲೇಜ್ ನ ಸಹಪಾಠಿಗಳಾದ ಸಾಯಿರಾಂ ಹಾಗೂ ಯಶವಂತ್ ಎಂಬುವರೊಂದಿಗೆ, ಗುರುವಾರ ಬೆಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ (shimoga district) ಪ್ರವಾಸಕ್ಕೆ ಆಗಮಿಸಿದ್ದರು.

ಶುಕ್ರವಾರ ಇತಿಹಾಸ ಪ್ರಸಿದ್ದ ಚಂಪಕ ಸರಸು (champaka sarasu) ಕಲ್ಯಾಣಿಗೆ ಆಗಮಿಸಿದ್ದಾರೆ. ಕುಶಾಲ್ ದೇವ್ ಅವರು ಈಜಾಡಲು (swimming) ತೆರಳಿದ್ದಾರೆ. ಈ ವೇಳೆ ಕಲ್ಯಾಣಿಯಲ್ಲಿ ಮುಳುಗಿ ಅಸುನೀಗಿದ್ದಾರೆ. ಅಗ್ನಿಶಾಮಕ ದಳ (fire brigade) ಆಗಮಿಸಿ ನೀರಿನಿಂದ ಶವ ಹೊರ ತೆಗೆದಿದೆ.

ಘಟನಾ ಸ್ಥಳಕ್ಕೆ ಸಬ್ ಇನ್ಸ್’ಪೆಕ್ಟರ್ (psi) ಯುವರಾಜ್ ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದರು. ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ (anandapura police station) ಪ್ರಕರಣ ದಾಖಲಾಗಿದೆ.  

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →