shikaripur | ಶಿರಾಳಕೊಪ್ಪ – ಜಾನುವಾರುಗಳ ಕಳವು : ಹಾವೇರಿ ಜಿಲ್ಲೆ ಹಿರೇಕೆರೂರು ಆರೋಪಿ ಅರೆಸ್ಟ್!

ಶಿರಾಳಕೊಪ್ಪ ಪೊಲೀಸ್ ಠಾಣೆ Cattle theft near Shiralakoppa: Haveri district Hirekerur man arrested! ಶಿರಾಳಕೊಪ್ಪ ಬಳಿ ಜಾನುವಾರುಗಳ ಕಳವು : ಹಾವೇರಿ ಜಿಲ್ಲೆ ಹಿರೇಕೆರೂರು ವ್ಯಕ್ತಿ ಅರೆಸ್ಟ್!

ಶಿಕಾರಿಪುರ (shikaripur), ಆ. 23: ಫಾರಂ ಹೌಸ್ (farm house) ವೊಂದರಲ್ಲಿ ನಾಲ್ಕು ಜಾನುವಾರುಗಳನ್ನು (cattles ) ಕಳವು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ, ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ ಘಟನೆ Aug – 23 ರಂದು ನಡೆದಿದೆ.

ಹಾವೇರಿ ಜಿಲ್ಲೆ ಹಿರೆಕೇರೂರು ತಾಲೂಕು (haveri district hirekerur taluk) ಅರಿಕಟ್ಟೆ ಗ್ರಾಮದ ನಿವಾಸಿ, ಶಿವರಾಜ ಯಾನೆ ಕುಮಾರ್ (26) ಬಂಧಿತ ಆರೋಪಿ (arrested accused) ಎಂದು ಗುರುತಿಸಲಾಗಿದೆ. ಆರೋಪಿ ಕಳವು (theft) ಮಾಡಿದ್ದ 2. 40 ಲಕ್ಷ ರೂ. ಮೌಲ್ಯದ ನಾಲ್ಕು ಆಕಳುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

9-8-2024 ರಂದು ಆರೋಪಿಯು ಶಿರಾಳಕೊಪ್ಪ (shiralakoppa) ಸಮೀಪದ ಚಿಕ್ಕಜಂಬೂರು ಗ್ರಾಮದ ನಿವಾಸಿ ಮಹಮ್ಮದ್ ಆಲಿಖಾನ್  ಎಂಬುವರಿಗೆ ಸೇರಿದ ಫಾರಂ ಹೌಸ್ ನಲ್ಲಿದ್ದ ಹಸುಗಳನ್ನು (cows) ಕಳವು ಮಾಡಿದ್ದ. ಈ ಕುರಿತಂತೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಶಿಕಾರಿಪುರ ಡಿವೈಎಸ್ಪಿ (shikaripur dysp) ಕೇಶವ್, ಸರ್ಕಲ್ ಇನ್ಸ್’ಪೆಕ್ಟರ್ (inspector) ರುದ್ರೇಶ್ ಮೇಲ್ವಿಚಾರಣೆಯಲ್ಲಿ ಸಬ್ ಇನ್ಸ್’ಪೆಕ್ಟರ್ (sub inspector) ಪ್ರಶಾಂತ್ ಕುಮಾರ್ ಟಿ ಬಿ ನೇತೃತ್ವದಲ್ಲಿ ಪಿಎಸ್ಐ ಪುಷ್ಪಾ,

ಸಿಬ್ಬಂದಿಗಳಾದ ಹೆಚ್.ಸಿ. ಸಂತೋಷ್, ಟೀಕಪ್ಪ, ಪಿಸಿಗಳಾದ ಸಲ್ಮಾನ್, ಕಾರ್ತಿಕ್, ಅಶೋಕ ಮತ್ತು ಪ್ರೇಮಾಬಾಯಿ ಅವರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಸದರಿ ಪೊಲೀಸ್ ತಂಡಕ್ಕೆ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಅಭಿನಂದಿಸಿದ್ದಾರೆ

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →