ಶಾಲಾ-ಕಾಲೇಜುಗಳ ಬಳಿ ಪೊಲೀಸ್ ಗಸ್ತು ವ್ಯವಸ್ಥೆ : ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿಕೆ

ಶಿವಮೊಗ್ಗ, ಮಾ. 5: ಶಾಲಾ-ಕಾಲೇಜುಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಲಾಗುವುದು. ಮಿತಿಮೀರಿದ ವೇಗದಲ್ಲಿ ವಾಹನ ಚಲಾಯಿಸುವವರ ವಿರುದ್ದ ಕ್ರಮ ಜರುಗಿಸಲಾಗುವುದು  ಎಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ತಿಳಿಸಿದ್ದಾರೆ.

ಭಾನುವಾರ ಜಿಲ್ಲೆಯ ಸೊರಬ ಪಟ್ಟಣದ ರಂಗನಾಥ ಸ್ವಾಮಿ ದೇವಸ್ಥಾನ ಆವರಣದಲ್ಲಿ ಆಯೋಜಿಸಲಾಗಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿದ್ದ ಅವರು ನಾಗರೀಕರ ಅಹವಾಲು ಆಲಿಸಿ ಮಾತನಾಡಿದರು.

ಅಪ್ರಾಪ್ತ ವಯಸ್ಸಿನವರು ವಾಹನ ಚಾಲನೆ ಮಾಡುವುದು ಹಾಗೂ ಬೈಕ್ ಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವವರನ್ನು ಪತ್ತೆ ಹಚ್ಚಿ ಐಎಂಎ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.  

ವಿಳಂಬಕ್ಕೆ ಆಸ್ಪದವಿಲ್ಲದಂತೆ ಪ್ರಕರಣಗಳ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ವರದಿ ಸಲ್ಲಿಸಲಾಗುತ್ತಿದೆ. ಸಮಸ್ಯೆ ಮತ್ತು ಸಹಾಯಕ್ಕಾಗಿ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರು ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಯಾವುದೇ ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಹತ್ತಿರದ ಪೊಲೀಸ್ ಠಾಣೆ ಅಥವಾ 112 ಸಹಾಯವಾಣಿ / ಕಂಟ್ರೋಲ್ ರೂಮ್ ಗೆ ಸಂಪರ್ಕಿಸಿ ಸಹಾಯ ಪಡೆಬಹುದಾಗಿದೆ.

ಪಟ್ಟಣ ಪಂಚಾಯ್ತಿ ಸಹಕಾರದೊಂದಿಗೆ, ಸೊರಬ ಪಟ್ಟಣದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುವುದು. ಹಾಗೆಯೇ ವಾಣಿಜ್ಯ ಕಟ್ಟಡಳು ಹಾಗೂ ನಾಗರೀಕರು ತಮ್ಮ ಮನೆಗಳ ಬಳಿ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.  

ಸಭೆಯಲ್ಲಿ ಶಿಕಾರಿಪುರ ಪೊಲೀಸ್ ಉಪ ವಿಭಾಗದ ಉಪಾಧೀಕ್ಷಕರಾದ ಶಿವಾನಂದ ಮದರಕಂಡಿ, ಸೊರಬ ಇನ್ಸ್’ಪೆಕ್ಟರ್ ಭಾಗ್ಯವತಿ, ಸಬ್ ಇನ್ಸ್ ಪೆಕ್ಟರ್ ಗಳಾದ ನಾಗರಾಜ್, ಶಿವಪ್ರಸಾದ್, ವಿಠಲ ಅಗಸಿ ಮೊದಲಾದವರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *