shimoga rain | ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿಕೆ ಮುನ್ಸೂಚನೆ!

Rain in shimoga district | malnad rainfall | western ghat rain news

ಶಿವಮೊಗ್ಗ (shivamogga), ಆ. 28: ಶಿವಮೊಗ್ಗ ಜಿಲ್ಲೆಯಲ್ಲಿ, ಕಳೆದ ಕೆಲ ದಿನಗಳಿಂದ ಮುಂಗಾರು ಮಳೆ (monsoon rain) ಚುರುಕುಗೊಂಡಿದೆ. ಪಶ್ಚಿಮಘಟ್ಟ ವ್ಯಾಪ್ತಿಯ (western ghat) ಪ್ರದೇಶಗಳಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ಈ ನಡುವೆ ಮುಂದಿನ ಕೆಲ ದಿನಗಳವರೆಗೆ ಮಳೆ ಮುಂದುವರಿಕೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಭಾರೀ ಮಳೆಯಾಗುವ (heavy rainfall) ಸಾಧ್ಯತೆಯಿದೆ. 12 ರಿಂದ 20 ಸೆಂಟಿ ಮೀಟರ್ ವರೆಗೂ ವರ್ಷಧಾರೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿರುವ ಹವಾಮಾನ ಇಲಾಖೆಯು, ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಮಳೆ ವಿವರ : ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ಹೊಸನಗರ (hosanagara) ತಾಲೂಕಿನ ವಿವಿಧೆಡೆ ಬಿದ್ದ ಮಳೆ ವಿವರ ಈ ಮುಂದಿನಂತಿದೆ.

ಮಾಣಿ (mani) 48 ಮಿಲಿ ಮೀಟರ್, ಯಡೂರು (yadur) 40 ಮಿ.ಮೀ., ಹುಲಿಕಲ್ (hulikallu) 121ಮಿ.ಮೀ., ಮಾಸ್ತಿಕಟ್ಟೆ (masthikatte) ಯಲ್ಲಿ 105 ಮಿ.ಮೀ., ಚಕ್ರಾ (chakra) 65 ಮಿ.ಮೀ., ಸಾವೇಹಕ್ಲು (savehakklu) ವಿನಲ್ಲಿ 61 ಮಿ.ಮೀ. ಮಳೆಯಾಗಿದೆ (rain).

ಡ್ಯಾಂ ವಿವರ: ಬುಧವಾರ ಬೆಳಿಗ್ಗೆಯ ಮಾಹಿತಿಯಂತೆ, ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಅಣೆಕಟ್ಟು (linganamakki reservoir) ನೀರಿನ ಮಟ್ಟ 1817. 12 (ಗರಿಷ್ಠ ಮಟ್ಟ : 1819) ಅಡಿಯಿದೆ. 39,896 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.

ಭದ್ರಾ ಜಲಾಶಯ (bhadr dam) ದ ನೀರಿನ ಮಟ್ಟ 181. 2 (ಗರಿಷ್ಠ ಮಟ್ಟ : 186) ಅಡಿಯಿದೆ. 8571 ಕ್ಯೂಸೆಕ್ ಒಳಹರಿವಿದ್ದು (inflow), 3942 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ (outflow).

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →