shimoga | ಶಿವಮೊಗ್ಗ – ಮುಂದುವರೆದ ಗಾಂಜಾ ಬೇಟೆ : ಇಬ್ಬರು ಯುವಕರು ಅರೆಸ್ಟ್!

shimoga | Shimoga - Continued ganja hunting: Two youths arrested! ಶಿವಮೊಗ್ಗ - ಮುಂದುವರೆದ ಗಾಂಜಾ ಬೇಟೆ : ಇಬ್ಬರು ಯುವಕರು ಅರೆಸ್ಟ್!

ಶಿವಮೊಗ್ಗ (shivamogga), ಆ. 30: ಶಿವಮೊಗ್ಗ ತಾಲೂಕಿನಲ್ಲಿ ಗಾಂಜಾ (ganja) ಬೇಟೆ ಮುಂದುವರಿದಿದೆ. ಕುಂಸಿ ಠಾಣೆ (kumsi police station) ಪೊಲೀಸರು ಪ್ರತ್ಯೇಕ ಘಟನೆಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಮೂವರನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ, ಗ್ರಾಮಾಂತರ ಠಾಣೆ (shimoga rural police station) ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಶಿವಮೊಗ್ಗ ನಗರದ ಹೊರವಲಯ ಕೋಟೆಗಂಗೂರು (kotegangur) ಗ್ರಾಮದ ಲೇಔಟ್ ವೊಂದರಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ (ganja sale) ಮಾಡುತ್ತಿದ್ದ ಆರೋಪದ ಮೇರೆಗೆ, ಆ. 29 ರಂದು ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಸಾಗರ ತಾಲೂಕು (sagara taluk) ಆನಂದಪುರದ ಯಾಸೀನ್ ಬೇಗ್ (23) ಹಾಗೂ ಮುಬಾರಕ್ ಬೇಗ್ (28) ಬಂಧಿತ ಆರೋಪಿಗಳೆಂದು (arrested accused) ಗುರುತಿಸಲಾಗಿದೆ. ಬಂಧಿತರಿಂದ 8000 ರೂ. ಮೌಲ್ಯದ 582 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಖಚಿತ ವರ್ತಮಾನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಎಸ್ಪಿ (sp) ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ (asp) ಗಳಾದ ಅನಿಲ್ ಕುಮಾರ್ ಭೂಮರೆಡ್ಡಿ, ಕಾರಿಯಪ್ಪ ಎ ಜಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ (dysp) ಸುರೇಶ್ ಎಂ ಮೇಲ್ವಿಚಾರಣೆಯಲ್ಲಿ

ಇನ್ಸ್’ಪೆಕ್ಟರ್ (inspector) ಸತ್ಯನಾರಾಯಣ, ಸಬ್ ಇನ್ಸ್’ಪೆಕ್ಟರ್ (sub inspector) ಸ್ವಪ್ನಾ ಮತ್ತವರ ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗಳ ವಿರುದ್ದ ಎನ್.ಡಿ.ಪಿ.ಎಸ್. ಕಾಯ್ದೆ (ndps act) ಯಡಿ ಪ್ರಕರಣ ದಾಖಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →