ತೀರ್ಥಹಳ್ಳಿ (thirthahalli), ಸೆ. 23: ಮನೆಯಿಂದ ಹೊರಹೋದ ವಯೋವೃದ್ದೆ (aged woman) ಯೋರ್ವರು ನಾಪತ್ತೆಯಾಗಿರುವ ಘಟನೆ, ಶಿವಮೊಗ್ಗ ಜಿಲ್ಲೆ (shimoga district) ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣಾ (agumbe police station) ವ್ಯಾಪ್ತಿಯ ಕೇಳೂರು ಗ್ರಾಮದಲ್ಲಿ ನಡೆದಿದೆ.
ಈ ಕುರಿತಂತೆ ಪೊಲೀಸ್ ಇಲಾಖೆ (police department) ಸೆ. 23 ರಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಕಮಲಮ್ಮ (76) ನಾಪತ್ತೆಯಾದ ಮಹಿಳೆ ಎಂದು ಗುರುತಿಸಲಾಗಿದೆ.
ಸೆ. 3 ರಂದು ಮನೆಯಿಂದ ಹೊರಹೋದ ಇವರು ಮತ್ತೆ ಮನೆಗೆ ಹಿಂದಿರುಗಿಲ್ಲ. ಕುಟುಂಬದವರು ಎಲ್ಲೆಡೆ ಶೋಧ ನಡೆಸಿದರೂ ಯಾವುದೇ ಸುಳಿವು ಲಭ್ಯವಾಗಿಲ್ಲ.
ವೃದ್ದೆಯು 5 ಅಡಿ ಎತ್ತರವಿದ್ದು, ಸಾಧಾರಣ ಮೈಕಟ್ಟು, ದುಂಡುಮುಖ, ಗೋಧಿ ಮೈಬಣ್ಣ ಹೊಂದಿರುತ್ತಾರೆ. ತಲೆಯಲ್ಲಿ 5 ಇಂಚು ಉದ್ದದ ಬಿಳಿ ಕೂದಲಿರುತ್ತದೆ. ಕನ್ನಡ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಬಿಳಿ ಬಣ್ಣದ ಚೌಕಳಿ ನೈಟಿ ಧರಿಸಿರುತ್ತಾರೆ.
ಇವರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ ಶಿವಮೊಗ್ಗ ಎಸ್.ಪಿ ಕಚೇರಿ (sp office) 08182-261400, ಡಿವೈಎಸ್ಪಿ ತೀರ್ಥಹಳ್ಳಿ ಕಚೇರಿ (dysp office) – 08181-220388, ಸಿಪಿಐ ಮಾಳೂರು – 9480803333, ಪಿಎಸ್ಐ ಆಗುಂಬೆ – 9480803314 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ನಾಗರೀಕರಿಗೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

