ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ ಎಂ.ಲಿಂಗಪ್ಪರಿಗೆ ಡಿ.31 ರಂದು ಸನ್ಮಾನ

ಶಿವಮೊಗ್ಗ, ಡಿ. 31: ದೇಶದ ಹಿರಿಯ ಪತ್ರಕತ್ರ, ‘ಕ್ರಾಂತಿ ಭಗತ್’ ದಿನಪತ್ರಿಕೆ ಸಂಪಾದಕರಾದ ಕಾಮ್ರೇಡ್ ಎಂ.ಲಿಂಗಪ್ಪ ಅವರಿಗೆ ಡಿ. 31 ರಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವತಿಯಿಂದ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ತಿಳಿಸಿದ್ದಾರೆ.
ಶಿವಮೊಗ್ಗ ನಗರದ ಮಥುರಾ ಪ್ಯಾರಡೈಸ್ ಹೋಟೆಲ್ ಸಭಾಂಗಣದಲ್ಲಿ ಬೆಳಿಗ್ಗೆ 11.45 ಕ್ಕೆ ಸಮಾರಂಭ ನಡೆಯಲಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಕಾಮ್ರೇಡ್ ಲಿಂಗಪ್ಪ ಅವರಿಗೆ ಸನ್ಮಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಆರ್.ಕೆ.ಸಿದ್ದರಾಮಣ್ಣವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್, ಮಾಜಿ ವಿಪ ಸದಸ್ಯ ಆರ್.ಪ್ರಸನ್ನಕುಮಾರ್, ಹಿರಿಯ ಸಮಾಜವಾದಿ ಪಿ.ಪುಟ್ಟಯ್ಯ ಅವರು ಉಪಸ್ಥಿತರಿರಲಿದ್ದಾರೆ ಎಂದು ಹೇಳಿದ್ದಾರೆ.
ಕಾಮ್ರೇಡ್ ಎಂ.ಲಿಂಗಪ್ಪ ಅವರು ದೇಶ, ರಾಜ್ಯದ ಹಿರಿಯ ಪತ್ರಕರ್ತರಾಗಿದ್ದಾರೆ. 98 ವರ್ಷ ಪೂರೈಸಿರುವ ಅವರು ಈಗಲೂ ಸಕ್ರಿಯ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಾಂತಿ ಭಗತ್ ಪತ್ರಿಕೆ ಸಂಪಾದಕರಾಗಿದ್ದಾರೆ. ಹಲವು ಸಮಾಜಮುಖಿ ಕಾರ್ಯಗಳನ್ನು ನಡೆಸಿದ್ದಾರೆ. ನೊಂದವರಿಗೆ ನ್ಯಾಯ ಕೊಡಿಸಿದ್ದಾರೆ. ನೇರ, ನಿರ್ಭೀಡ ವ್ಯಕ್ತಿತ್ವದ ಮೂಲಕ ಗಮನ ಸೆಳೆದಿದ್ದಾರೆ ಎಂದು ಕಲ್ಲೂರು ಮೇಘರಾಜ್ ಅವರು ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →