ಪೋಕ್ಸೋ ಪ್ರಕರಣ : ಬಿ ಎಸ್ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು!
ಬೆಂಗಳೂರು, ಫೆ. 7: ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ, ಧಾರವಾಡ ಹೈಕೋರ್ಟ್ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಫೆ. 7 ರಂದು ತೀರ್ಪು ನೀಡಿದೆ.
ಇದರಿಂದ ಸದ್ಯಕ್ಕೆ ಬಿ ಎಸ್ ಯಡಿಯೂರಪ್ಪ ನಿರಾಳರಾಗಿದ್ದು, ಬಂಧನದ ಭೀತಿಯಿಂದ ಮುಕ್ತರಾಗಿದ್ದಾರೆ. ಆದರೆ ವಿಚಾರಣಾ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರಿಯಲಿದೆ.
ಬಿ ಎಸ್ ವೈ ಅವರು ಪ್ರಕರಣ ರದ್ದು ಪಡಿಸುವಂತೆ ಕೋರಿ ಹಾಗೂ ನಿರೀಕ್ಷಣಾ ಜಾಮೀನು ಮಂಜೂರು ಕೋರಿ, ಎರಡು ಪ್ರತ್ಯೇಕ ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಸದರಿ ಪ್ರಕರಣದ ಕಾಗ್ನಿಜೆನ್ಸ್ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಹೊಸದಾಗಿ ಪ್ರಕರಣದ ಕಾಗ್ನಿಜೆನ್ಸ್ ಪಡೆಯಲು ಸೂಚನೆ ನೀಡಿದೆ. ಹೈಕೋರ್ಟ್ ಈ ಪ್ರಕರಣವನ್ನು ಪೋಕ್ಸೊ ವಿಶೇಷ ಕೋರ್ಟ್ ಗೆ ಮರಳಿಸಿದೆ. ಸಮನ್ಸ್ ಜಾರಿ ಬಗ್ಗೆ ಹೊಸದಾಗಿ ತೀರ್ಮಾನಿಸಲು ಪೋಕ್ಸೋ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿದೆ.
ಪ್ರಕರಣದ ಹಿನ್ನೆಲೆ : 2024 ರ ಫೆಬ್ರವರಿ 2 ರಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಮನೆಗೆ ತಮ್ಮ ಅಪ್ರಾಪ್ತ ವಯಸ್ಸಿನ ಮಗಳ ಜತೆ ತೆರಳಿದ್ದ ಸಂದರ್ಭದಲ್ಲಿ, ಯಡಿಯೂರಪ್ಪ ಅವರು ಪುತ್ರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಮಹಿಳೆಯೋರ್ವರು ದೂರು ನೀಡಿದ್ದರು.
ಈ ಸಂಬಂಧ ಯಡಿಯೂರಪ್ಪ ವಿರುದ್ದ ಬೆಂಗಳೂರಿನ ಸದಾಶಿವ ನಗರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿತ್ತು. ಬಳಿಕ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.
POCSO case: BS Yeddyurappa granted anticipatory bail – Bengaluru, Feb 7: The Dharwad High Court bench granted anticipatory bail to former Chief Minister BS Yeddyurappa in the POCSO case on Feb 7.
More Stories
bengaluru news | ಬೆಂಗಳೂರು | ತಾಂಡ, ಹಟ್ಟಿ, ಗೊಲ್ಲರಹಟ್ಟಿ ನಿವಾಸಿಗಳಿಗೆ ಸಿಹಿ ಸುದ್ದಿ : ಫೆಬ್ರವರಿ ತಿಂಗಳಲ್ಲಿ1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ – ಕಂದಾಯ ಇಲಾಖೆಯ ಮಹತ್ವದ ಕ್ರಮ!
Bengaluru | Good news for residents of Thanda, Hatti Gollarahatti : Title deeds for 1.10 lakh families in February – a significant step by the Revenue Department!
ಬೆಂಗಳೂರು | ತಾಂಡ, ಹಟ್ಟಿ ಗೊಲ್ಲರಹಟ್ಟಿ ನಿವಾಸಿಗಳಿಗೆ ಸಿಹಿ ಸುದ್ದಿ : ಫೆಬ್ರವರಿ ತಿಂಗಳಲ್ಲಿ1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ – ಕಂದಾಯ ಇಲಾಖೆಯ ಮಹತ್ವದ ಕ್ರಮ!
Bengaluru news | ಬೆಂಗಳೂರು | ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ತಿದ್ದುಪಡಿಗೆ ಡಿ.23 ರಂದು ಅಂತಿಮ ಅಧಿಸೂಚನೆ : ಹಲವು ಮಹತ್ವದ ಬದಲಾವಣೆ!
Final notification on December 23 for amendment of Karnataka Land Revenue Act 1964: Many important changes! ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ತಿದ್ದುಪಡಿಗೆ ಡಿ.23 ರಂದು ಅಂತಿಮ ಅಧಿಸೂಚನೆ : ಹಲವು ಮಹತ್ವದ ಬದಲಾವಣೆ!
Shamanur Shivashankarappa Death : ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ
Shamanur Shivashankarappa Death : Senior Congress MLA Shamanur Shivashankarappa passes away
Shamanur Shivashankarappa Death : ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ
bengaluru news | ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ : CM ಸಿದ್ದರಾಮಯ್ಯ ಭರವಸೆ
Women’s Workers’ Day to be declared on September 13: Chief Minister Siddaramaiah promises
ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
‘ಬ್ರದರ್ಸ್ ಬ್ರೇಕ್ ಫಾಸ್ಟ್ ಮೀಟಿಂಗ್ – 2’| ‘ನಾವಿಬ್ಬರೂ ಸಹೋದರರಿದ್ದಂತೆ’ | DCM ಡಿಕೆಶಿ ನಿವಾಸದಲ್ಲಿ CM ಸಿದ್ದರಾಮಯ್ಯ ಹೇಳಿಕೆ!
‘Brothers Breakfast Meeting – 2’! : ‘We are both like brothers’ – CM Siddaramaiah’s new statement at DCM DKshi’s residence!!
‘ಬ್ರದರ್ಸ್ ಬ್ರೇಕ್ ಫಾಸ್ಟ್ ಮೀಟಿಂಗ್ – 2’! : ‘ನಾವಿಬ್ಬರೂ ಸಹೋದರರಿದ್ದಂತೆ’ – ಡಿಸಿಎಂ ಡಿಕೆಶಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹೊಸ ಹೇಳಿಕೆ!!
bengaluru | ಬೆಂಗಳೂರು : ಕನ್ನಡ ಸಿನಿಮಾ ರಂಗದ ಹಿರಿಯ ಹಾಸ್ಯ ನಟ ಎಂ ಎಸ್ ಉಮೇಶ್ ವಿಧಿವಶ!
Bengaluru: Senior comedian of Kannada cinema industry MS Umesh passes away!
ಬೆಂಗಳೂರು : ಕನ್ನಡ ಸಿನಿಮಾ ರಂಗದ ಹಿರಿಯ ಹಾಸ್ಯ ನಟ ಎಂ ಎಸ್ ಉಮೇಶ್ ವಿಧಿವಶ!
