ಕಾಂಗ್ರೆಸ್ ಪಕ್ಷದ ಮೊದಲ ಲೀಸ್ಟ್ ಪ್ರಕಟ!  

  • ಸೊರಬ – ಮಧು ಬಂಗಾರಪ್ಪ
  • ಭದ್ರಾವತಿ – ಬಿ.ಕೆ.ಸಂಗಮೇಶ್
  • ಸಾಗರ – ಬೇಳೂರು ಗೋಪಾಲಕೃಷ್ಣ

*******************************************************************************************************

ಶಿವಮೊಗ್ಗ, ಮಾ. 25: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ, ಕಾಂಗ್ರೆಸ್ ಪಕ್ಷ 124 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೊದಲ ಹಂತದ ಪಟ್ಟಿ ಪ್ರಕಟಿಸಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ.

ಸೊರಬ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಮಧು ಬಂಗಾರಪ್ಪ, ಭದ್ರಾವತಿ ಕ್ಷೇತ್ರದಿಂದ ಹಾಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಹಾಗೂ ಸಾಗರ ಕ್ಷೇತ್ರದಿಂದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ನೀಡಲಾಗಿದೆ.

ಸೊರಬ ಹಾಗೂ ಭದ್ರಾವತಿ ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ನಿರೀಕ್ಷಿತವಾಗಿತ್ತು. ಆದರೆ ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಗೆ ಬೇಳೂರು ಗೋಪಾಲಕೃಷ್ಣ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿಯ ನಡುವೆ ಸಾಕಷ್ಟು ಪೈಪೋಟಿ ಕಂಡುಬಂದಿತ್ತು.

ಇತ್ತೀಚೆಗೆ ಕಾಗೋಡು ತಿಮ್ಮಪ್ಪ ಅವರು ತಮ್ಮ ಬೆಂಬಲಿಗರೊಂದಿಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು. ಪುತ್ರಿಗೆ ಟಿಕೆಟ್ ನೀಡುವಂತೆ ವರಿಷ್ಠರಲ್ಲಿ ಮನವಿ ಮಾಡಿದ್ದರು ಎಂದು ಹೇಳಲಾಗಿತ್ತು.

ಇದು ಸಾಗರ ಕೈ ಪಾಳೇಯದಲ್ಲಿ ಬಿರುಸಿನ ಬೆಳವಣಿಗೆಗೆ ಕಾರಣವಾಗಿತ್ತು. ಬೇಳೂರು ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಆಕ್ರೋಶ ಹೊರಹಾಕಿದ್ದರು. ಕೊನೆಗೂ ಬೇಳೂರು ಅವರಿಗೆ ವರಿಷ್ಠರು ಮಣೆ ಹಾಕಿದ್ದಾರೆ. ಇದರಿಂದ ಸಾಗರ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಅಖಾಡಕ್ಕೆ ವೇದಿಕೆ ಸಿದ್ದವಾಗುವುದು ಬಹುತೇಕ ಖಚಿತವಾಗಿದೆ.

ಎರಡನೇ ಹಂತದಲ್ಲಿ ಉಳಿದ 4 ಕ್ಷೇತ್ರಗಳಿಗೆ ಪ್ರಕಟ

*** ಪ್ರಸ್ತುತ ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, 3 ಕಡೆ ಕಾಂಗ್ರೆಸ್ ಪಕ್ಷ ಹುರಿಯಾಳುಗಳನ್ನು ಅಖಾಡಕ್ಕಿಳಿಸಿದೆ. ಉಳಿದಂತೆ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ತೀರ್ಥಹಳ್ಳಿ ಹಾಗೂ ಶಿಕಾರಿಪುರ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಅಭ್ಯರ್ಥಿಗಳ ಹೆಸರು ಪ್ರಕಟಿಸುವ ಸಾಧ್ಯತೆಯಿದೆ. ಶಿಕಾರಿಪುರ ಹೊರತುಪಡಿಸಿ, ಉಳಿದ ಮೂರು ಕ್ಷೇತ್ರಗಳಲ್ಲಿ ಟಿಕೆಟ್ ಗೆ ಸಾಕಷ್ಟು ಲಾಬಿಯಿದೆ. ಯಾರಿಗೆ ಟಿಕೆಟ್ ಸಿಗಲಿದೆ ಎಂಬ ಕುತೂಹಲ ಮನೆ ಮಾಡಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *