‘ಎಂ.ಎಲ್.ಸಿ. ಸ್ಥಾನಕ್ಕೆ ರಾಜೀನಾಮೆ : ಕೆ.ಎಸ್.ಈಶ್ವರಪ್ಪ ವಿರುದ್ದ ಕಣಕ್ಕೆ!’ – ಆಯನೂರು ಮಂಜುನಾಥ್ ಘೋಷಣೆ

‘ವಿಧಾನ ಪರಿಷತ್ ಸ್ಥಾನಕ್ಕೆ ಇಷ್ಟರಲ್ಲಿಯೇ ರಾಜೀನಾಮೆ ನೀಡುತ್ತಿದ್ದೆನೆ. ಕೆ.ಎಸ್.ಈಶ್ವರಪ್ಪ ವಿರುದ್ದ ಚುನಾವಣಾ ಕಣಕ್ಕಿಳಿಯುತ್ತಿದ್ದೆನೆ’ ಎಂದು ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಘೋಷಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಕುರಿತಂತೆ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ನೀಡದ ಅವರು, ‘ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳುತ್ತೆನೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿಗೆ ಗುಡ್ ಬೈ ನಿಶ್ಚಿತ… ಕಾಂಗ್ರೆಸ್ ಸೇರ್ಪಡೆಯಾಗೋದು ಸನ್ನಿಹಿತ..??

********************************************************************************************************

-ಬಿ. ರೇಣುಕೇಶ್-

ಶಿವಮೊಗ್ಗ, ಎ. 3: ‘ವಿಧಾನ ಪರಿಷತ್ ಸ್ಥಾನಕ್ಕೆ ಇಷ್ಟರಲ್ಲಿಯೇ ರಾಜೀನಾಮೆ ನೀಡುತ್ತಿದ್ದೆನೆ. ಕೆ.ಎಸ್.ಈಶ್ವರಪ್ಪ ವಿರುದ್ದ ಚುನಾವಣಾ ಕಣಕ್ಕಿಳಿಯುತ್ತಿದ್ದೆನೆ’ ಎಂದು ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಘೋಷಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಕುರಿತಂತೆ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ನೀಡದ ಅವರು, ‘ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳುತ್ತೆನೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿಯಿಂದ ಟಿಕೆಟ್ ಸಿಗುವ ಲಕ್ಷಣಗಳು ಕಂಡುಬರುತ್ತಿಲ್ಲ. ಆದರೆ ತಾವು ಚುನಾವಣಾ ಕಣಕ್ಕಿಳಿಯುವುದು ನಿಶ್ಚಿತ. ಬಿಜೆಪಿ ಪಕ್ಷ ಹಾಗೂ ನಾಯಕರ ಬಗ್ಗೆ ತಮಗೆ ಅಸಮಾಧಾನವಿಲ್ಲ.  ಆದರೆ ಕೆ.ಎಸ್.ಈಶ್ವರಪ್ಪರ ನಡವಳಿಕೆ ಬಗ್ಗೆ ಅಸಮಾಧಾನವಿದೆ. ಆ ಕಾರಣದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದೆನೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್, ಜೆಡಿಎಸ್ ಅಥವಾ ಪಕ್ಷೇತರವಾಗಿ ಚುನಾವಣೆಗೆ ಸ್ಪರ್ಧಿಸಬೇಕು ಎಂಬುವುದನ್ನು ನಿರ್ಧರಿಸಿಲ್ಲ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.  

ಟೀಕಾಪ್ರಹಾರ: ‘ನಾನ್ಯಾವ ಲೆಕ್ಕ ಎಂದು ಅವರು ಕೇಳಿದ್ದಾರೆ. ಅವರ ಸವಾಲನ್ನು ಸ್ವೀಕರಿಸಿದ್ದೆನೆ. ನೀವಾಗಲಿ, ನಿಮ್ಮ ಮಗನಾಗಲಿ ತಮ್ಮೆದುರು ಕಣಕ್ಕಿಳಿಯಲಿ. ತಾವು ಏನೆಂಬುವುದನ್ನು ಚುನಾವಣೆಯಲ್ಲಿ ತೋರಿಸುತ್ತೆನೆ’ ಎಂದು ಕೆ.ಎಸ್.ಈಶ್ವರಪ್ಪ ವಿರುದ್ದ ಹರಿಹಾಯ್ದಿದ್ದಾರೆ.

ಕಳೆದ 32 ವರ್ಷಗಳಿಂದ ಶಿವಮೊಗ್ಗದಿಂದ ಆಯ್ಕೆಯಾಗಿರುವ ಕೆ.ಎಸ್.ಈಶ್ವರಪ್ಪ ಅವರು, ಜನರ ಸಮಸ್ಯೆ ಹಾಗೂ ಕ್ಷೇತ್ರದ ಅಭಿವೃದ್ದಿಗೆ ಸ್ಪಂದಿಸುವ ಕಾರ್ಯ ನಡೆಸಿಲ್ಲ. ಶಿವಮೊಗ್ಗದಲ್ಲಿ ನಡೆದಿರುವ ಅಭಿವೃದ್ದಿ ಕಾರ್ಯಗಳಿಗೆ ಯಡಿಯೂರಪ್ಪ, ಬಿ.ವೈ.ರಾಘವೇಂದ್ರ ಕಾರಣಕರ್ತರಾಗಿದ್ದಾರೆ. ಹೇಳಿಕೊಳ್ಳುವಂತಹ ಯಾವುದೇ ಕೆಲಸ ಮಾಡಿಲ್ಲ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಯಡಿಯೂರಪ್ಪಗೆ ಸಾಕಷ್ಟು ಬಾರಿ ಈಶ್ವರಪ್ಪ ಅಪಮಾನ ಮಾಡಿದ್ದಾರೆ. ಸಿಎಂಗೆ ಆಗಿದ್ದಾಗ ಸೂಕ್ತ ಗೌರವ ಕೊಡಲಿಲ್ಲ. ಈಶ್ವರಪ್ಪರ ಹೇಳಿಕೆಯಿಂದ ಪಕ್ಷಕ್ಕೆ ಸಾಕಷ್ಟು ಬಾರಿ ಮುಜುಗರ ಹಾಗೂ ಡ್ಯಾಮೇಜ್ ಆಗಿದೆ ಎಂದು ಆರೋಪಗಳ ಸುರಿಮಳೆಗೈದರು.

ಈಗಾಗಲೇ ಚುನಾವಣೆಗೆ ಭಾರೀ ಪ್ರಮಾಣದಲ್ಲಿ ಹಣ ಖರ್ಚು ಮಾಡಲು ಸಿದ್ದ ಮಾಡಿಕೊಂಡಿದ್ದಾರೆ. ಲಕ್ಷ್ಮೀಪುತ್ರರ ಎದುರು ಈ ಬಡವ ನಿಂತುಕೊಳ್ಳಲಿದ್ದಾನೆ ಎಂದು ಕೆ.ಎಸ್.ಈಶ್ವರಪ್ಪ ವಿರುದ್ದ ಆರೋಪಗಳ ಸುರಿಮಳೆಗೈದಿದ್ದಾರೆ.

ಬಿಜೆಪಿಯಲ್ಲಿಯೇ ಈಶ್ವರಪ್ಪ ಬಗ್ಗೆ ಅಸಮಾಧಾನವಿದೆ!

*** ಶಿವಮೊಗ್ಗ ನಗರ ಬಿಜೆಪಿ ಘಟಕದಲ್ಲಿ ಈಶ್ವರಪ್ಪ ವಿರುದ್ದ ಸಾಕಷ್ಟು ಅಸಮಾಧಾನವಿದೆ. ಪಕ್ಷದ ಹಲವು ನಿಷ್ಠಾವಂತ ಮುಖಂಡರು, ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ತಮ್ಮ ಹಿಂಬಾಲಕರಿಗೆ ಈಶ್ವರಪ್ಪ ಮಣೆ ಹಾಕಿಕೊಂಡು ಬರುತ್ತಿದ್ದಾರೆ. ಈ ಕಾರಣದಿಂದ ನೀವು ಚುನಾವಣಾ ಕಣಕ್ಕಿಳಿಯಬೇಕು ಎಂದು ಕಾರ್ಯಕರ್ತರೇ ಒತ್ತಾಯಿಸುತ್ತಿದ್ದಾರೆ ಎಂದು ಆಯನೂರು ಮಂಜುನಾಥ್ ಅವರು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಅಶಾಂತಿ ಸೃಷ್ಟಿಗೆ ಸಂಚು!

*** ವಿಧಾನಸಭೆ ಚುನಾವಣೆ ವೇಳೆ ಶಿವಮೊಗ್ಗ ನಗರದಲ್ಲಿ ಅಶಾಂತಿ ಸೃಷ್ಟಿಸುವ ಸಂಚು ನಡೆಯುತ್ತಿದೆ. ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಆಯನೂರು ಮಂಜುನಾಥ್ ತಿಳಿಸಿದ್ದಾರೆ. ಹಿಂದೂ – ಮುಸ್ಲಿಂ ಬಾಂಧವರು ಕೂಡ ಇತ್ತ ಗಮನಹರಿಸಬೇಕಾಗಿದೆ. ಅಶಾಂತಿ ಸೃಷ್ಟಿಸುವ ಸಂಚುಗಳನ್ನು ವಿಫಲಗೊಳಿಸಬೇಕಾಗಿದೆ ಎಂದು ಆಯನೂರು ಮಂಜುನಾಥ್ ಅವರು ತಿಳಿಸಿದ್ದಾರೆ.

ಕಾಂಗ್ರೆಟ್ ಟಿಕೆಟ್ ಆಕಾಂಕ್ಷಿಗಳಲ್ಲಿ ಹೆಚ್ಚಿದ ಆತಂಕ!

*** ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ವದಂತಿಯ ಹಿನ್ನೆಲೆಯಲ್ಲಿಯೇ, ಇತ್ತೀಚೆಗೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸ್ಪರ್ಧಾಕಾಂಕ್ಷಿಗಳು ಬೆಂಗಳೂರಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿಯಾಗಿದ್ದರು. ಟಿಕೆಟ್ ಕೋರಿ ಅರ್ಜಿ ಸಲ್ಲಿಸಿರುವವರಿಗೆ ಟಿಕೆಟ್ ನೀಡಬೇಕು ಎಂದು ವರಿಷ್ಠರಿಗೆ ಮನವಿ ಮಾಡಿಕೊಂಡಿದ್ದರು. ಇದೀಗ ಆಯನೂರು ಮಂಜುನಾಥ್ ಅವರು ಬಿಜೆಪಿ ತೊರೆಯುವುದು ಬಹುತೇಕ ನಿಶ್ಚಿತವಾಗಿದೆ. ಮತ್ತೊಂದೆಡೆ ಚುನಾವಣಾ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ಇದರಿಂದ ಕಾಂಗ್ರೆಸ್ ಟಿಕೆಟ್ ಸ್ಪರ್ಧಾಕಾಂಕ್ಷಿಗಳಲ್ಲಿನ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

One Comment on “‘ಎಂ.ಎಲ್.ಸಿ. ಸ್ಥಾನಕ್ಕೆ ರಾಜೀನಾಮೆ : ಕೆ.ಎಸ್.ಈಶ್ವರಪ್ಪ ವಿರುದ್ದ ಕಣಕ್ಕೆ!’ – ಆಯನೂರು ಮಂಜುನಾಥ್ ಘೋಷಣೆ”

  1. ಒಳ್ಳೇ ದೃಢ ವರದಿ, ಹಾಗೂ ಸೂಕ್ತ ಸದೃಢ ವಿಶ್ವಾಸಕ್ಕೆ ಜಯವಾಗಲಿ

Leave a Reply

Your email address will not be published. Required fields are marked *