bhadravati | ಭದ್ರಾ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ತಂದೆ – ಮಗನ ದಾರುಣ ಸಾವು!
ಭದ್ರಾವತಿ (bhadravathi), ಏ. 21: ಭದ್ರಾ ಜಲಾಶಯ ಹಿನ್ನೀರಿನಲ್ಲಿ ಮುಳುಗಿ ತಂದೆ – ಮಗ ಮೃತಪಟ್ಟ ದಾರುಣ ಘಟನೆ, ಬಿಆರ್’ಪಿಯಲ್ಲಿ ಏ. 20 ರಂದು ನಡೆದಿದೆ.
ಭದ್ರಾವತಿ ನಗರದ ಭೂತನಗುಡಿ ನಿವಾಸಿ, ಫ್ಲೈವುಡ್ ಅಂಗಡಿಯೊಂದರ ಮಾಲೀಕರಾದ ಮೊಹಮ್ಮದ್ ಜಾಬೀರ್ (55) ಹಾಗೂ ಅವರ ಪುತ್ರ ಜಾವೇದ್ (15) ಮೃತಪಟ್ಟವರೆಂದು ಗುರುತಿಸಲಾಗಿದೆ.
ಭಾನುವಾರ ಜಾಬೀರ್ ಅವರು ಕುಟುಂಬದವರೊಂದಿಗೆ ಭದ್ರಾ ಜಲಾಶಯಕ್ಕೆ ವಿಹಾರಕ್ಕೆಂದು ಆಗಮಿಸಿದ್ದರು. ಊಟವಾದ ನಂತರ ಪುತ್ರ ಜಾವೇದ್ ಜಲಾಶಯದ ಹಿನ್ನೀರಿನಲ್ಲಿ ಈಜಾಡುತ್ತಿದ್ದ. ಈ ವೇಳೆ ಮುಳುಗಲಾರಂಭಿಸಿದ್ದಾನೆ.
ತಕ್ಷಣವೇ ಜಾಬೀರ್ ಅವರು ಮುಳುಗುತ್ತಿದ್ದ ಮಗನ ರಕ್ಷಣೆಗೆಂದು ನೀರಿಗೆ ಧುಮುಕಿದ್ದಾರೆ. ಆದರೆ ಅಪ್ಪ – ಮಗ ಇಬ್ಬರು ಕೂಡ ನೀರು ಪಾಲಾಗಿದ್ದಾರೆ ಎಂದು ತಿಳಿದುಬಂದಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು, ಸಂಜೆ ಹಿನ್ನೀರಿನಿಂದ ಬಾಲಕನ ಶವ ಪತ್ತೆ ಹಚ್ಚಿ ಹೊರ ತೆಗೆದಿದ್ದರು. ಮುಳುಗು ತಜ್ಞ ಮಲ್ಪೆ ಈಶ್ವರ್ ನೇತೃತ್ವದ ತಂಡವು ತಡರಾತ್ರಿ ವೇಳೆ ಜಾಬೀರ್ ಅವರ ಶವ ಪತ್ತೆ ಹಚ್ಚಿ ಹೊರತೆಗೆದಿದ್ದಾರೆ.
ಘಟನಾ ಸ್ಥಳಕ್ಕೆ ಸಬ್ ಇನ್ಸ್ ಪೆಕ್ಟರ್ ಶಿಲ್ಪಾ ಅವರು ಭೇಟಿ ನೀಡಿದ್ದರು. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bhadravathi, Apr. 21: A tragic incident in which a father and son drowned in the backwaters of Bhadra reservoir took place in BRP on Apr. 20. The police and fire brigade, who reached the spot after learning about the incident, found the boy’s body from the backwater in the evening and pulled it out. A team led by Malpe Ishwar found and pulled out Jabir’s body late at night.
More Stories
bhadravati news | ಭದ್ರಾವತಿಯಲ್ಲಿ ಅಸ್ಸಾಂ ರಾಜ್ಯದ ಮಹಿಳೆಯ ನಿಗೂಢ ಕಣ್ಮರೆ!
The mysterious disappearance of a woman from Bhadravati!
ಭದ್ರಾವತಿಯ ಆಲೆಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ನಿಗೂಢ ಕಣ್ಮರೆ!
bhadravati news | ಭದ್ರಾವತಿ : ವಿಕೋಪಕ್ಕೆ ತಿರುಗಿದ ಪ್ರೀತಿಯ ವಿವಾದ – ಇಬ್ಬರ ಕೊಲೆಯಲ್ಲಿ ಅಂತ್ಯ!
Bhadravati: A love dispute that turned into a disaster – ended in the murder of two people!
ಭದ್ರಾವತಿ : ವಿಕೋಪಕ್ಕೆ ತಿರುಗಿದ ಪ್ರೀತಿಯ ವಿವಾದ – ಇಬ್ಬರ ಕೊಲೆಯಲ್ಲಿ ಅಂತ್ಯ!
job news | ಉದ್ಯೋಗ ಮಾಹಿತಿ | ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
Job Information | Applications invited for the posts of Anganwadi workers and helpers in Shivamogga and Bhadravati taluks
ಉದ್ಯೋಗ ಮಾಹಿತಿ | ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
bhadravati news | ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
Woman’s body found in Bhadra River in Bhadravati city!
ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
bhadravati news | ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
Caste abuse, assault case : Bhadravati man sentenced to 4 years rigorous imprisonment!
ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
bhadravati | ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ : ನಾಗರೀಕರ ಆತಂಕ!
‘Chaddi gang’ roaming in Bhadravati: Citizens worried!
ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ ಓಡಾಟ : ನಾಗರೀಕರ ಆತಂಕ!
