shimoga | ಶಿವಮೊಗ್ಗ : ಬಾಕಿ ಪಾವತಿಗೆ ಡೆಡ್ಲೈನ್ – ಇಲ್ಲದಿದ್ದರೆ ನೀರು ಪೂರೈಕೆ ಸ್ಥಗಿತ!
ಶಿವಮೊಗ್ಗ (shivamogga), ಮೇ 05: ಶಿವಮೊಗ್ಗ ನಗರದಲ್ಲಿ ಕಳೆದ 1 ವರ್ಷಕ್ಕಿಂತ ಮೇಲ್ಪಟ್ಟು ನೀರಿನ ಕಂದಾಯ ಪಾವತಿಸದೆ ಬಾಕಿ ಉಳಿಸಿಕೊಂಡವರು, ಮುಂದಿನ 7 ದಿನದೊಳಗೆ ಪಾವತಿಸಬೇಕು. ಇಲ್ಲದಿದ್ದರೆ ನೀರಿನ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಚ್ಚರಿಕೆ ನೀಡಿದೆ.
ಈ ಕುರಿತಂತೆ ಮೇ 5 ರಂದು ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರ (ಎಇಇ) ಮಿಥುನ್ ಕುಮಾರ್ ಅವರು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ನೀರಿನ ಕಂದಾಯದ ಬಾಕಿ ಮೊತ್ತ ಪಾವತಿಸುವಂತೆ ಮನವಿ ಮಾಡಿದ್ದಾರೆ.
ಡೆಡ್ ಲೈನ್! : ಕರ್ನಾಟಕ ನಗರ ನೀರು ಸರಬರಾಜು ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು / ಮಾಲಿಕರು 1 ವರ್ಷಕ್ಕಿಂತ ಮೇಲ್ಪಟ್ಟು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳೊಳಗೆ ಕಡ್ಡಾಯವಾಗಿ ಪಾವತಿಸಬೇಕು ಎಂದು ತಿಳಿಸಿದ್ದಾರೆ.
ತಪ್ಪಿದ್ದಲ್ಲಿ ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು. ಈ ರೀತಿಯ ಅಹಿತಕರ ಘಟನೆಗೆ ಅವಕಾಶ ನೀಡದೆ ಬಾಕಿಯಿರುವ ನೀರಿನ ಕಂದಾಯ ಪಾವತಿಸುವಂತೆ ಪ್ರಕಟಣೆಯಲ್ಲಿ ನಾಗರೀಕರಿಗೆ ಮನವಿ ಮಾಡಿದ್ದಾರೆ.
Shivamogga, May 05: Those who have not paid their water revenue dues in Shivamogga city for more than a year and have outstanding arrears must pay within the next 7 days. Otherwise, the Karnataka Urban Water Supply and Sewerage Board has warned that their water connections will be disconnected.
In this regard, Mithun Kumar, Assistant Executive Engineer (AEE) of the board, issued a notification on May 5. He appealed to pay the arrears of water revenue.
