bhadravati | holehonnuru | Car washed away in Bhadra canal! ಭದ್ರಾವತಿ | ಹೊಳೆಹೊನ್ನೂರು | ಭದ್ರಾ ನಾಲೆಯಲ್ಲಿ ಕೊಚ್ಚಿ ಹೋದ ಕಾರು!

bhadravati | holehonnuru | ಭದ್ರಾ ನಾಲೆಯಲ್ಲಿ ಕೊಚ್ಚಿ ಹೋದ ಕಾರು!

ಭದ್ರಾವತಿ (bhadravathi), ಮೇ 9: ಭದ್ರಾ ಬಲದಂಡೆ ನಾಲೆಗೆ ಕಾರೊಂದು ಉರುಳಿ ಬಿದ್ದ ಘಟನೆ ಮೇ 8 ರ ಸಂಜೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ದಾನವಾಡಿ ಗ್ರಾಮದಲ್ಲಿ ನಡೆದಿದೆ.

ಸದರಿ ಕಾರು ದಾನವಾಡಿಯಿಂದ ನಾಗವಲ್ಲಿ ಗ್ರಾಮದೆಡೆಗೆ ತೆರಳುತ್ತಿದ್ದ ವೇಳೆ ನಾಲೆಗೆ ಕಾರು ಉರುಳಿಬಿದ್ದಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದ ಎಂದು ಹೇಳಲಾಗಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸಂಜೆಯವರೆಗೂ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಕಾರಿನ ಸುಳಿವು ಲಭ್ಯವಾಗಿರಲಿಲ್ಲ.

ಮೇ 9 ರ ಬೆಳಿಗ್ಗೆಯಿಂದ ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದ ತಂಡ ನಾಲೆಯಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದು, ಸಾಕಷ್ಟು ಹುಡುಕಾಟ ನಡೆಸಲಾರಂಭಿಸಿದೆ.

ಇತ್ತೀಚೆಗೆ ಭದ್ರಾ ಜಲಾಶಯದಿಂದ ನಾಲೆಗೆ ನೀರು ಬಿಡಲಾಗಿದ್ದು, ಇದರಿಂದ ನಾಲೆಯು ಮೈದುಂಬಿ ಹರಿಯುತ್ತಿದೆ. ಭಾರೀ ಪ್ರಮಾಣದ ನೀರು ಹರಿಯುತ್ತಿರುವುದರಿಂದ ಶೋಧ ಕಾರ್ಯಾಚರಣೆಗೆ ಅಡೆತಡೆಯಾಗಿ ಪರಿಣಮಿಸಿದೆ.

ನಾಲೆಯಲ್ಲಿನ ನೀರಿನ ರಭಸಕ್ಕೆ ಕಾರು ಕೊಚ್ಚಿ ಹೋಗಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ, ಮುಳುಗು ತಜ್ಞರ ತಂಡವು ಕಿ.ಮೀ. ದೂರದವರೆಗೆ ನಾಲೆಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Bhadravati, May 9: An incident in which a car fell into the Bhadra Right Bank Canal took place on the evening of May 8 in Danawadi village near Holehonnur in Bhadravati taluk. The car was heading from Danawadi to Nagavalli village when it fell into a canal. It is said that only the driver was in the car, but more details are yet to be made available.

Brutal murder of a man who had gone for a walk : The crime took place in the early hours of the morning near Holehonnuru! ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಕೊಲೆ : ಹೊಳೆಹೊನ್ನೂರು ಬಳಿ ಬೆಳ್ಳಂಬೆಳಿಗ್ಗೆ ನಡೆದ ದುಷ್ಕೃತ್ಯ! Previous post holehonnuru | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಕೊಲೆ : ಹೊಳೆಹೊನ್ನೂರು ಬಳಿ ಬೆಳ್ಳಂಬೆಳಿಗ್ಗೆ ನಡೆದ ದುಷ್ಕೃತ್ಯ!
shimoga | Shivamogga | Applications invited for the posts of teacher - lecturer in minority residential schools colleges shimoga | ಶಿವಮೊಗ್ಗ | ಅಲ್ಪಸಂಖ್ಯಾತರ ವಸತಿ ಶಾಲೆ, ಕಾಲೇಜುಗಳಲ್ಲಿ ಶಿಕ್ಷಕ - ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ Next post shimoga | ಶಿವಮೊಗ್ಗ | ಅಲ್ಪಸಂಖ್ಯಾತರ ವಸತಿ ಶಾಲೆ, ಕಾಲೇಜುಗಳಲ್ಲಿ ಶಿಕ್ಷಕ – ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ