ಶಿವಮೊಗ್ಗ (shivamogga), ಜೂ. 30: ಮಚ್ಚಿನಿಂದ ಹೊಡೆದು ವ್ಯಕ್ತಿಯೋರ್ವನನ್ನು ಭೀಕರವಾಗಿ ಕೊ*ಲೆ ಮಾಡಿದ ಘಟನೆ, ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಚಿಕ್ಕಮರಸ ಗ್ರಾಮದಲ್ಲಿ ಜೂ. 29 ರ ರಾತ್ರಿ 9 ರಿಂದ 10 ಗಂಟೆ ನಡುವೆ ನಡೆದಿದೆ.
ಕುಂಸಿ ಗ್ರಾಮದ ನಿವಾಸಿಯಾದ ವಸಂತ್ (34) ಕೊ*ಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ವಿವಾಹಿತನಾಗಿದ್ದು, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ಇನ್ಸ್’ಪೆಕ್ಟರ್ ದೀಪಕ್ ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ವಸಂತ್ ಕೊಲೆಗೆ ಸ್ಪಷ್ಟ ಕಾರಣಗಳು ತಿಳಿದುಬಂದಿಲ್ಲ. ಆದರೆ ಕುಂಸಿ ಗ್ರಾಮದ ಇಬ್ಬರು ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ.
ಘಟನೆಯ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ಧಾರೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Shivamogga, June 30: A man was brutally murdered by being beaten with a machete in Chikkamarasa village near Kusi in Shivamogga taluk on June 29 between 9 and 10 pm.

