ಶಿವಮೊಗ್ಗ (shivamogga), ಜು. 27: ಮನೆಯಲ್ಲಿಯೇ ಯುವಕನೋರ್ವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ಮೇಲಿನ ತುಂಗಾನಗರದಲ್ಲಿ ತಡರಾತ್ರಿ ನಡೆದಿದೆ.
ಮಣಿಕಂಠ (38) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಈತ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಕೊಲೆಗೀಡಾದ ಮಣಿಕಂಠ ಮನೆಯಲ್ಲಿ ಓರ್ವನೇ ವಾಸವಾಗಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಇನ್ಸ್’ಪೆಕ್ಟರ್ ಕೆ ಟಿ ಗುರುರಾಜ್ ಅವರು ಭೇಟಿಯಿತ್ತು ಪರಿಶೀಲಿಸಿದ್ದಾರೆ.
ಕೊಲೆಗೆ ಕಾರಣವೇನು? ದುಷ್ಕರ್ಮಿಗಳು ಯಾರು? ಎಂಬಿತ್ಯಾದಿ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.
Shivamogga, July 27: A young man was brutally murdered by throwing a stone at his head at home in an incident that took place late last night in Tunganagara, upper part of Shivamogga city.

