shimoga | ಶಿವಮೊಗ್ಗ : ಅಣ್ಣನ ಕೊಲೆ – ತಮ್ಮ ಪೊಲೀಸ್ ಬಲೆಗೆ!

ಭದ್ರಾವತಿ : ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ ಬೆಂಕಿ! ಭದ್ರಾವತಿ, ಫೆಬ್ರವರಿ 20: ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ, ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಭದ್ರಾವತಿಯ ನೆಹರು ನಗರದಲ್ಲಿ ಫೆಬ್ರವರಿ 17 ರ ಮುಂಜಾನೆ ನಡೆದಿದೆ. ಆದಿಲ್ ಎಂಬುವರ ಮನೆಯ ಬಳಿ ಘಟನೆ ನಡೆದಿದೆ. ಬಜಾಜ್ ಡಿಸ್ಕವರ್, ಪಲ್ಸರ್ ಮತ್ತು ಪ್ಲಾಟಿನಾ ಬೆಂಕಿಗಾಹುತಿಯಾದ ಬೈಕ್ ಗಳಾಗಿವೆ. ಸದರಿ ಬೈಕ್ ಗಳು ಆದಿಲ್ ಅವರ ಸಹೋದರರಿಗೆ ಸೇರಿದ್ದಾಗಿವೆ. ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಒಟ್ಟಾರೆ 1.85 ಲಕ್ಷ ರೂ. ನಷ್ಟವಾಗಿದೆ. ಬೆಂಕಿ ಹಚ್ಚಿದವರು ಯಾರು? ಕಾರಣವೇನು? ಎಂಬಿತ್ಯಾದಿ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ. ಈ ಸಂಬಂಧ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Bhadravati: Three bikes parked in front of a house set on fire! Bhadravati, February 20: In a shocking incident, miscreants set fire to three bikes parked in front of a house in Nehru Nagar, Bhadravati, during the early hours of February 17. The incident occurred near the residence of a man named Adil. The bikes that were burnt include a Bajaj Discover, Pulsar, and Platina. These belonged to Adil’s brothers. All three bikes were completely gutted in the fire, resulting in a total loss estimated at ₹1.85 lakh. The identity of those who set the fire and the motive behind the act remain unknown and are under police investigation. A case has been registered at the Bhadravati Old Town Police Station in connection with the incident.

ಶಿವಮೊಗ್ಗ (shivamogga), ಜು. 28: ಮನೆಯಲ್ಲಿಯೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪದ ಮೇರೆಗೆ, ತಮ್ಮನನ್ನು ಶಿವಮೊಗ್ಗ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಸಂತೋಷ್ (38) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ತುಂಗಾನಗರ ಠಾಣೆ ಇನ್ಸ್’ಪೆಕ್ಟರ್ ಕೆ ಟಿ ಗುರುರಾಜ್ ನೇತೃತ್ವದ ಪೊಲೀಸ್ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಘಟನೆ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಬಂಧಿಸುವಲ್ಲಿ ಸಫಲವಾಗಿದೆ.

ಪ್ರಕರಣದ ಹಿನ್ನೆಲೆ : ಮೇಲಿನ ತುಂಗಾನಗರ ಬಡಾವಣೆಯಲ್ಲಿ ಕೊಲೆಗೀಡಾದ ಮಣಿಕಂಠ ಹಾಗೂ ಆತನ ತಮ್ಮ ಆರೋಪಿ ಸಂತೋಷ ಜೊತೆಯಾಗಿ ವಾಸಿಸುತ್ತಿದ್ದರು. ಆರೋಪಿಗೆ ವಿವಾಹವಾಗಿದ್ದು, ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ತೊರೆದಿದ್ದಳು ಎಂಬ ಮಾಹಿತಿಯಿದೆ.

ಇವರು ವಾಸವಿದ್ದ ಮನೆಯ ಹಂಚಿಕೆ ವಿಚಾರದಲ್ಲಿ, ಇಬ್ಬರ ನಡುವೆ ಆಗಾಗ್ಗೆ ಗಲಾಟೆಯಾಗುತ್ತಿತ್ತು. ಜುಲೈ 26 ರ ರಾತ್ರಿ ಕೂಡ ಇಬ್ಬರ ನಡುವೆ ಕಲಹವಾಗಿದೆ. ಇದು ವಿಕೋಪಕ್ಕೆ ತಿರುಗಿ ಕೈ ಕೈ ಮಿಲಾವಣೆಯಾಗಿದೆ.

ಮದ್ಯದ ಅಮಲಿನಲ್ಲಿದ್ದ ಆರೋಪಿಯು ಗದ್ದಲಿಯಿಂದ ಅಣ್ಣನ ತಲೆಗೆ ಹೊಡೆದಿದ್ದಾನೆ. ನಂತರ ಕಲ್ಲೊಂದನ್ನು ತಲೆ ಮೇಲೆ ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ತದನಂತರ ರಾತ್ರಿ ಮನೆಯಲ್ಲಿಯೇ ನಿದ್ರಿಸಿದ್ದಾನೆ. ಜು. 27 ರ ಮುಂಜಾನೆ ನಿದ್ರೆಯಿಂದ ಎದ್ದ ನಂತರ ಮನೆಯಿಂದ ಪರಾರಿಯಾಗಿದ್ದ ಎಂದು ಪೊಲೀಸ್ ಇಲಾಖೆ ಮೂಲಗಳು ಮಾಹಿತಿ ನೀಡುತ್ತವೆ.

ಸದರಿ ಮನೆಯ ಸಮೀಪದಲ್ಲಿಯೇ ವಾಸವಾಗಿರುವ ಸಹೋದರಿಯು, ಎಂದಿನಂತೆ ಟೀ ಕೊಡಲು ಮನೆಗೆ ಆಗಮಿಸಿದಾಗ ಮಣಿಕಂಠ ಕೊಲೆಗೀಡಾಗಿರುವುದು ಹಾಗೂ ಮತ್ತೋರ್ವ ಸಹೋದರ ಕಣ್ಮರೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿದ್ದ ತುಂಗಾನಗರ ಠಾಣೆ ಪೊಲೀಸರು ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ಧಾರೆ.

Shimoga, Ju. 28: brother was arrested by the Shimoga Tunganagar Police Station on the charge of brutally murdering his elder brother at home and running away. A police team led by Tunganagar Police Station Inspector KT Gururaj conducted a swift operation and succeeded in arresting the accused within a few hours of the incident.

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: www.udayasaakshi.@gmail.com Mobile : 9242987506

View all posts by B. Renukesha →