bhadravati news | ಭದ್ರಾವತಿ ತಾಲೂಕಿನ ವ್ಯಕ್ತಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ! : ಕಾರಣವೇನು?
ಭದ್ರಾವತಿ (bhadravathi), ಆಗಸ್ಟ್ 6: ಮಹಿಳೆಯೋರ್ವರ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗೆ, 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ 4 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಭದ್ರಾವತಿ ತಾಲೂಕು ಕೋಮಾರನಹಳ್ಳಿ ತಾಂಡಾದ ನಿವಾಸಿ ತಾವರನಾಯ್ಕ್ (62) ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಅಪರಾಧಿಗೆ 35 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದಲ್ಲಿ, ಹೆಚ್ಚುವರಿಯಾಗಿ 3 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.
ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ ಅವರು ಆಗಸ್ಟ್ 4 ರಂದು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ರತ್ನಮ್ಮ ಪಿ ಅವರು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ : 27-3-2021 ರಂದು ಶಿಕ್ಷೆಗೊಳಗಾದ ತಾವರನಾಯ್ಕ್’ನು, ನೆರೆಮನೆಯ ನಿವಾಸಿ ಜಯಾಬಾಯಿ ಎಂಬ ಮಹಿಳೆಯೊಂದಿಗೆ ಜಗಳ ಮಾಡಿಕೊಂಡಿದ್ದನು. ಈ ವೇಳೆ ಮಚ್ಚಿನಿಂದ ಮಹಿಳೆಯ ಕುತ್ತಿಗೆ ಹಾಗು ತಲೆಗೆ ಮಾರಣಾಂತಿಕ ಹಲ್ಲೆ ಮಾಡಿದ್ದ.
ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಎಸ್ಐ ಮಂಜೇಶ್ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.
Bhadravati, August 6: The 4th Additional District and Sessions Court has sentenced a man to 10 years rigorous imprisonment for fatally attacking a woman with a machete.
