ಡಿಸಿ – ಎಸ್ಪಿ ಖಡಕ್ ಸೂಚನೆ : ಮರಳು, ಜಲ್ಲಿ ಕಲ್ಲು ಸಾಗಾಣೆ ಲಾರಿಗಳು ವಶ!
ತೀರ್ಥಹಳ್ಳಿ, ಎ. 15: ಕಾನೂನುಬಾಹಿರವಾಗಿ ನಡೆಯುತ್ತಿರುವ ಮರಳು ಹಾಗೂ ಜಲ್ಲಿ ಕಲ್ಲು ಸಾಗಣೆಗೆ ಕಡಿವಾಣ ಹಾಕುವಂತೆ ಡಿಸಿ ಡಾ.ಆರ್.ಸೆಲ್ವಮಣಿ ಹಾಗೂ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಅವರು ಖಡಕ್ ಸೂಚನೆ ರವಾನಿಸಿದ ಬೆನ್ನಲ್ಲೇ, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಕಾನೂನುಬಾಹಿರ ಮರಳು – ಜಲ್ಲಿಕಲ್ಲು ಸಾಗಾಣೆ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.
ತೀರ್ಥಹಳ್ಳಿ ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ, ಒಟ್ಟಾರೆ 11 ಮರಳು ಲಾರಿ ಹಾಗೂ 2 ಜಲ್ಲಿಕಲ್ಲು ಸಾಗಣೆ ಮಾಡುತ್ತಿದ್ದ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.
ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತರ, ತಹಶೀಲ್ದಾರ್ ಅಮೃತ್ ಅತ್ರೇಶ್ ಮಾರ್ಗದರ್ಶನದಲ್ಲಿ ಅಧಿಕಾರಿ ಸಿಬ್ಬಂದಿಗಳ ಮೂರು ಪ್ರತ್ಯೇಕ ತಂಡಗಳು ತೀರ್ಥಹಳ್ಳಿ ತಾಲೂಕಿನ ವಿವಿಧಡೆ ಕಾರ್ಯಾಚರಣೆ ನಡೆಸಿವೆ.
ಅರೇಹಳ್ಳಿ, ಮಳಲೂರು, ಬಗ್ಗೋಡಿಗೆ, ಆಗುಂಬೆ, ಮುಡುಬಾ, ಬುಕ್ಲಾಪುರಗಳಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ವಶಕ್ಕೆ ಪಡೆದ ಲಾರಿಗಳನ್ನು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವಶಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
More Stories
accident news | ಹೈದ್ರಾಬಾದ್ – ಬೆಂಗಳೂರು ಬಸ್ ಬೆಂಕಿಗಾಹುತಿ : 20 ಪ್ರಯಾಣಿಕರ ಸಜೀವ ದಹನ ಶಂಕೆ!
Hyderabad-Bengaluru bus catches fire: 20 passengers feared burnt alive!
ಹೈದ್ರಾಬಾದ್ – ಬೆಂಗಳೂರು ಬಸ್ ಬೆಂಕಿಗಾಹುತಿ : 20 ಪ್ರಯಾಣಿಕರ ಸಜೀವ ದಹನ ಶಂಕೆ!
ಸಚಿವ ಜಮೀರ್ ರಾಜೀನಾಮೆಗೆ ಕಾಂಗ್ರೆಸ್ ಶಾಸಕ ಬೇಳೂರು ಆಗ್ರಹ : ಸಿದ್ದರಾಮಯ್ಯ ಹೇಳಿದ್ದೇನು?
Congress MLA from Belur demands Minister Jamir’s resignation: What did Siddaramaiah say?
ಸಚಿವ ಜಮೀರ್ ರಾಜೀನಾಮೆಗೆ ಕಾಂಗ್ರೆಸ್ ಶಾಸಕ ಬೇಳೂರು ಆಗ್ರಹ : ಸಿದ್ದರಾಮಯ್ಯ ಹೇಳಿದ್ದೇನು?
Gujarat Plane Crash : ಅಹಮದಾಬಾದ್ನಲ್ಲಿ 242 ಜನರಿದ್ದ ಏರ್ ಇಂಡಿಯಾ ವಿಮಾನ ಪತನ!
Gujarat Plane Crash : ಅಹಮದಾಬಾದ್ನಲ್ಲಿ 242 ಜನರಿದ್ದ ಏರ್ ಇಂಡಿಯಾ ವಿಮಾನ ಪತನ!
Gujarat Plane Crash: Air India plane carrying 242 people crashes in Ahmedabad!
kudala sangama | ಪ್ರಧಾನಿ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
kudala sangama | What did CM Siddaramaiah say about Prime Minister Modi’s Mann Ki Baat program?
kudala sangama | ಪ್ರಧಾನಿ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
shimoga | ಸರ್ಕಾರಿ ಬಸ್ ಪ್ರಯಾಣದ ದರ ಏರಿಕೆ ಬೆನ್ನಲ್ಲೆ, ಖಾಸಗಿ ಬಸ್ ದರ ಹೆಚ್ಚಳಕ್ಕೆ ಆಗ್ರಹ!
shimoga | After the government bus travel fare hike demand for private bus fare hike!
shimoga | ಸರ್ಕಾರಿ ಬಸ್ ಪ್ರಯಾಣದ ದರ ಏರಿಕೆ ಬೆನ್ನಲ್ಲೆ, ಖಾಸಗಿ ಬಸ್ ದರ ಹೆಚ್ಚಳಕ್ಕೆ ಆಗ್ರಹ!
ಕರ್ನಾಟಕ – ಆಂಧ್ರ ಪ್ರದೇಶ ಗ್ರಾಮಗಳ ನಡುವೆ ವಿವಾದ ಸೃಷ್ಟಿಸಿದ ದೇವರಿಗೆ ಬಿಟ್ಟ‘ಕೋಣ’ದ ಮಾಲೀಕತ್ವ!
Ownership of ‘Kona’ left to God, which created controversy between Karnataka and Andhra Pradesh villages!
ಕರ್ನಾಟಕ – ಆಂಧ್ರ ಪ್ರದೇಶ ಗ್ರಾಮಗಳ ನಡುವೆ ವಿವಾದ ಸೃಷ್ಟಿಸಿದ ದೇವರಿಗೆ ಬಿಟ್ಟ‘ಕೋಣ’ದ ಮಾಲೀಕತ್ವ!
