Caste abuse, assault case : Bhadravati man sentenced to 4 years rigorous imprisonment! ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!

bhadravati | ಭದ್ರಾವತಿ  : ಮೂವರಿಗೆ ಜೈಲು ಶಿಕ್ಷೆ – ಕಾರಣವೇನು?

ಭದ್ರಾವತಿ (bhadravathi), ಆಗಸ್ಟ್ 24: : ಮಹಿಳೆಯೋರ್ವರಿಗೆ ಜಾತಿ ನಿಂದನೆ ಮಾಡಿ, ಮಾನಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರಿಗೆ  ಜೈಲು ಶಿಕ್ಷೆ ವಿಧಿಸಿ ಭದ್ರಾವತಿ 4 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಭದ್ರಾವತಿ ತಾಲೂಕಿನ ಸಿರಿಯೂರು ವೀರಾಪುರ ಗ್ರಾಮದ ನಿವಾಸಿಗಳಾದ ಶ್ರೀಧರ್, ಮೋಹನ್ ಗೆ 4 ವರ್ಷ ಹಾಗೂ ಹರೀಶ್ ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.  

ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ಆಗಸ್ಟ್ 23 ರಂದು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ರತ್ನಮ್ಮ ಪಿ  ಅವರು ವಾದ ಮಂಡನೆ ಮಾಡಿದ್ದರು.

ಪ್ರಕರಣದ ಹಿನ್ನೆಲೆ : 11-8-2018 ರಂದು ಸಿರಿಯೂರು ವೀರಾಪುರ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೋರ್ವರ ಅಂಗಡಿಗೆ ನುಗ್ಗಿದ್ದ ಅಪರಾಧಿಗಳು ದಾಂಧಲೆ ನಡೆಸಿದ್ದರು. ಪೀಠೋಪಕರಣಗಳನ್ನು ಹಾಳು ಮಾಡಿದ್ದರು. ಜಾತಿ ನಿಂದನೆ ಮಾಡಿ, ಮಾನಹಾನಿಗೆ ಯತ್ನಿಸಿದ್ದರು.

ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಂದಿನ ಪೊಲೀಸ್ ಉಪಾಧೀಕ್ಷಕರಾಗಿದ್ದ ಓಂಕಾರನಾಯ್ಕ್ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

ಒಟ್ಟಾರೆ ನಾಲ್ವರ ವಿರುದ್ದ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು. ಇದರಲ್ಲಿ ಓರ್ವ ಮೃತಪಟ್ಟಿದ್ದಾನೆ. ಪ್ರಸ್ತುತ ಮೂವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.

Bhadravati, August 23: The Bhadravati 4th Additional District and Sessions Court has sentenced three people to four years in prison in a case of caste-based insults and defamation against a woman.

After Bangalore – Mysore and Hubballi special treatment facilities will also be available to patients at the Government Meggan Hospital in Shivamogga! ಬೆಂಗಳೂರು ಮೈಸೂರು ಹುಬ್ಬಳ್ಳಿ ನಂತರ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿಯೂ ರೋಗಿಗಳಿಗೆ ಲಭ್ಯವಾಗಲಿದೆ ವಿಶೇಷ ಚಿಕಿತ್ಸಾ ಸೌಲಭ್ಯ! Previous post shimoga | ಶಿವಮೊಗ್ಗ : ಹೆರಿಗೆ ವಾರ್ಡ್ ಶೌಚಾಲಯದಲ್ಲಿ ಶಿಶುವಿನ ಕೊಲೆ ಪ್ರಕರಣ – ತಾಯಿಯ ಬಂಧನ!
CCTV Installation – Servicing: Applications invited for free training ಸಿಸಿ ಟಿವಿ ಅಳವಡಿಕೆ – ಸರ್ವೀಸಿಂಗ್ : ಉಚಿತ ತರಬೇತಿಗೆ ಅರ್ಜಿ ಆಹ್ವಾನ Next post free training camp news | ಸಿಸಿ ಟಿವಿ ಅಳವಡಿಕೆ – ಸರ್ವೀಸಿಂಗ್ : ಉಚಿತ ತರಬೇತಿಗೆ ಅರ್ಜಿ ಆಹ್ವಾನ