bhadravati court news | ಭದ್ರಾವತಿ | ಖಾರದ ಪುಡಿ ಎರಚಿ ಹಲ್ಲೆ ಪ್ರಕರಣ – ನಾಲ್ವರಿಗೆ ಜೈಲು ಶಿಕ್ಷೆ!
ಭದ್ರಾವತಿ (shivamogga), ನವೆಂಬರ್ 1: ಹಲ್ಲೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಭದ್ರಾವತಿಯ 4 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಭದ್ರಾವತಿ ತಾಲೂಕು ಆನವೇರಿ ಗ್ರಾಮದ ಕುರುಬರ ಬೀದಿಯ ನಿವಾಸಿಗಳಾದ ರಾಜಪ್ಪ ಈ ಬಿ (51), ಭರತ್ ಈ ಆರ್ (20), ರಂಗನಾಥ್ ಯಾನೆ ರಂಗೇಶ್ (34) ಹಾಗೂ ಹನುಮಂತಪ್ಪ (53) ಜೈಲು ಶಿಕ್ಷೆಗೆ ಗುರಿಯಾದವರೆಂದು ಗುರುತಿಸಲಾಗಿದೆ.
ಜೈಲು ಶಿಕ್ಷೆಯ ಜೊತೆಗೆ 77,000 ರೂ. ದಂಡ ವಿಧಿಸಲಾಗಿದೆ. ತಪ್ಪಿದ್ದಲ್ಲಿ ಹೆಚ್ಚುವರಿಯಾಗಿ 1 ತಿಂಗಳ ಸಾದಾ ಜೈಲು ಶಿಕ್ಷೆ ಸಜೆ ಅನುಭವಿಸುವಂತೆ ಹಾಗೂ ದಂಡ ಮೊತ್ತದಲ್ಲಿ 2 ಲಕ್ಷ ರೂ.ಗಳನ್ನು ನೊಂದವರಿಗೆ ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.
ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು 30/10/2025 ರಂದು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ರತ್ನಮ್ಮ ಪಿ ಅವರು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ : 13-11-2022 ರಂದು ಭದ್ರಾವತಿಯ ಆನವೇರಿ ಗ್ರಾಮದ ತಿಮ್ಮಪ್ಪರವರೊಂದಿಗೆ ಆಸ್ತಿಯ ವಿಚಾರವಾಗಿ ಪ್ರಸ್ತುತ ಶಿಕ್ಷೆಗೊಳಗಾದ ನಾಲ್ವರು ವ್ಯಕ್ತಿಗಳು ಜಗಳ ಮಾಡಿದ್ದರು. ತಿಮ್ಮಪ್ಪರ ಮೇಲೆ ಖಾರದ ಪುಡಿ ಎರಚಿ ಹಲ್ಲೆ ಮಾಡಲಾಗಿತ್ತು. ಜಾತಿ ನಿಂದನೆಯ ಆರೋವಿತ್ತು.
ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಐಪಿಸಿಯ ವಿವಿಧ ಕಲಂಗಳು ಸೇರಿದಂತೆ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ಎಎಸ್ಪಿ ಜೀತೇಂದ್ರ ಕುಮಾರ ದಯಾಮರವರು ಪ್ರಕರಣದ ತನಿಖೆ ನಡೆಸಿದ್ದರು.
Bhadravati (shivamogga), November 1: The 4th Additional District and Sessions Court of Bhadravati has sentenced four people to 2 years rigorous imprisonment in connection with an assault and caste abuse case.
More Stories
shimoga news | ಶಿವಮೊಗ್ಗದ ಹನುಮಂತ ನಗರ ನಿವಾಸಿಗಳ ಗೋಳು ಆಲಿಸದ ಪಾಲಿಕೆ ಆಡಳಿತ!
The municipal administration does not listen to the concerns of the residents of Hanumanth Nagar in Shivamogga!
ಶಿವಮೊಗ್ಗದ ಹನುಮಂತ ನಗರ ನಿವಾಸಿಗಳ ಗೋಳು ಆಲಿಸದ ಪಾಲಿಕೆ ಆಡಳಿತ!
shimoga news | ಶಿವಮೊಗ್ಗ ನಗರ ಕುಡಿಯುವ ನೀರು ಪೂರೈಕೆ : ಹೊಸ ಯೋಜನೆ ಅನುಷ್ಠಾನದತ್ತ ಹರಿಯುವುದೆ ಜನಪ್ರತಿನಿಧಿಗಳ ಚಿತ್ತ?
Shivamogga city drinking water supply: Will the will of the people’s representatives flow towards the implementation of the new project?
ಶಿವಮೊಗ್ಗ ನಗರ ಕುಡಿಯುವ ನೀರು ಪೂರೈಕೆ : ಹೊಸ ಯೋಜನೆ ಅನುಷ್ಠಾನದತ್ತ ಹರಿಯುವುದೆ ಜನಪ್ರತಿನಿಧಿಗಳ ಚಿತ್ತ?
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 16 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for December 16 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 16 ರ ತರಕಾರಿ ಬೆಲೆಗಳ ವಿವರ
shimoga palike news | ಬೆಂಗಳೂರು, ಮೈಸೂರು ಮಾದರಿ ಶಿವಮೊಗ್ಗ – ಭದ್ರಾವತಿ ಬೃಹತ್ ಮಹಾನಗರ ಪಾಲಿಕೆ ರಚನೆಯತ್ತ ಚಿತ್ತ ಹರಿಸುವುದೆ ಸರ್ಕಾರ?
Will the government focus on forming a Shivamogga-Bhadravati Metropolitan City Corporation on the model of Bangalore and Mysore?
ಬೆಂಗಳೂರು – ಮೈಸೂರು ಮಾದರಿ ಶಿವಮೊಗ್ಗ – ಭದ್ರಾವತಿ ಬೃಹತ್ ಮಹಾನಗರ ಪಾಲಿಕೆ ರಚನೆಯತ್ತ ಚಿತ್ತ ಹರಿಸುವುದೆ ಸರ್ಕಾರ?
shimoga court news | ಶಿವಮೊಗ್ಗ | ಭದ್ರಾವತಿಯ 21 ವರ್ಷದ ಯುವಕನಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ!
Shivamogga | A 21-year-old youth from Bhadravati has been sentenced to 30 years in rigorous imprisonment!
ಶಿವಮೊಗ್ಗ | ಭದ್ರಾವತಿಯ 21 ವರ್ಷದ ಯುವಕನಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ!
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 11 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for December 10 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 11 ರ ತರಕಾರಿ ಬೆಲೆಗಳ ವಿವರ
