ಶಿವಮೊಗ್ಗ : ಗಾಡಿಕೊಪ್ಪದಲ್ಲಿ ಯಶಸ್ವಿಯಾಗಿ ನಡೆದ ಜಾತ್ರಾ ಮಹೋತ್ಸವ

ಶಿವಮೊಗ್ಗ, ಎ. 25: ಶಿವಮೊಗ್ಗ ನಗರದ ಹೊರವಲಯ ಗಾಡಿಕೊಪ್ಪದಲ್ಲಿ ಎರಡು ದಿನಗಳ ಕಾಲ ನಡೆದ, ಮುದ್ದು ಬಸವೇಶ್ವರ ಹಾಗೂ ಕೆಂಡದೇಶ್ವರಿ ಜಾತ್ರಾ ಮಹೋತ್ಸವ ಮತ್ತು ಗುಗ್ಗಳ ಕೆಂಡಾರ್ಚನೆಯು ಮಂಗಳವಾರ ಸಂಪನ್ನಗೊಂಡಿತು.

ಶಿವಮೊಗ್ಗ, ಎ. 25: ಶಿವಮೊಗ್ಗ ನಗರದ ಹೊರವಲಯ ಗಾಡಿಕೊಪ್ಪದಲ್ಲಿ ಎರಡು ದಿನಗಳ ಕಾಲ ನಡೆದ, ಮುದ್ದು ಬಸವೇಶ್ವರ ಹಾಗೂ ಕೆಂಡದೇಶ್ವರಿ ಜಾತ್ರಾ ಮಹೋತ್ಸವ ಮತ್ತು ಗುಗ್ಗಳ ಕೆಂಡಾರ್ಚನೆಯು ಮಂಗಳವಾರ ಸಂಪನ್ನಗೊಂಡಿತು.

ಸೋಮವಾರ ರಂಭಾಪುರಿ ಶ್ರೀಗಳ ಅಡ್ಡಪಲ್ಲಕ್ಕಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಮುಖ್ಯ ರಸ್ತೆಗಳಲ್ಲಿ ಅಡ್ಡಪಲ್ಲಕ್ಕಿ ಮೆರವಣಿಗೆ ಸಾಗಿತು. ನಂತರ ಶ್ರೀಗಳ ಆಶೀರ್ವಚನ ನಡೆಯಿತು.

ಮಂಗಳವಾರ ಮುದ್ದು ಬಸವೇಶ್ವರ ಹಾಗೂ ಕೆಂಡದೇಶ್ವರಿ ಜಾತ್ರಾ ಮಹೋತ್ಸವ ಮತ್ತು ಗುಗ್ಗಳ ಕೆಂಡಾರ್ಚನೆ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಮುಖ್ಯ ರಸ್ತೆಗಳಲ್ಲಿ ದೇವರ ಮೂರ್ತಿಗಳ ಮೆರವಣಿಗೆ ನಡೆಯಿತು. ವೀರಗಾಸೆ ಸೇರಿದಂತೆ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು.

ಜಾತ್ರಾ ಮಹೋತ್ಸವದಲ್ಲಿ ಸ್ಥಳೀಯರು ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮಗಳಿಂದಲೂ ಭಕ್ತಾಧಿಗಳು ಭಾಗವಹಿಸಿದ್ದರು. ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿತ್ತು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *