Shivamogga: BSNL retired employees protest against the central government ಶಿವಮೊಗ್ಗ : ಕೇಂದ್ರ ಸರ್ಕಾರದ ವಿರುದ್ದ ಬಿಎಸ್ಎನ್ಎಲ್ ನಿವೃತ್ತ ನೌಕರರ ಪ್ರತಿಭಟನೆ

shimoga news | ಶಿವಮೊಗ್ಗ : ಕೇಂದ್ರ ಸರ್ಕಾರದ ವಿರುದ್ದ ಬಿಎಸ್ಎನ್ಎಲ್ ನಿವೃತ್ತ ನೌಕರರ ಪ್ರತಿಭಟನೆ

ಶಿವಮೊಗ್ಗ (shivamogga), ಜನವರಿ 09: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರಿ ಇಲಾಖೆಗಳ ನಿವೃತ್ತ ನೌಕರರು ಜನವರಿ 09 ರಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ಬೆಂಬಲವಾಗಿ ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಬಿಎಸ್ಎನ್ಎಲ್ ಭವನದ ಎದುರು ಆಲ್ ಇಂಡಿಯಾ ಬಿಎಸ್ಎನ್ಎಲ್  – ಡಾಟ್ ಪೆನ್ಷನರ್ಸ್ ಸಂಘಟನೆ  ಧರಣಿ ನಡೆಸಿತು.

  ಕೇಂದ್ರ ಸರ್ಕಾರದ ಹಣಕಾಸು ಬಿಲ್ ನಲ್ಲಿ 8 ನೇ ವೇತನ ಆಯೋಗ ರಚಿಸಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರಿ ಇಲಾಖೆಗಳ ನಿವೃತ್ತ ನೌಕರರು ಪಡೆಯುತ್ತಿರುವ ಪಿಂಚಣಿ ಪರಿಷ್ಕರಿಸಲು ಅವಕಾಶ ನೀಡಿಲ್ಲ. ಇದು ಖಂಡನಾರ್ಹವಾದುದಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೇತನ ಆಯೋಗದ ಪರಿಷ್ಕರಣೆಯಲ್ಲಿ ನಿವೃತ್ತರನ್ನು ಪರಿಗಣನೆ ಮಾಡದಿರುವುದು ನಿಜಕ್ಕೂ ನಿವೃತ್ತ ನೌಕರ ವಿರೋಧಿ ಧೋರಣೆಯಾಗಿದೆ. ಪಿಂಚಣಿ ಪರಿಷ್ಕರಣೆ ಮಾಡುವುದು ಅಗತ್ಯವಾಗಿದೆ. ಇದು ಸರ್ಕಾರದ ಅಗತ್ಯ ಕ್ರಮವಾಗಿದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ತಕ್ಷಣವೇ ಕೇಂದ್ರ ಸರ್ಕಾರ ನಿವೃತ್ತ ನೌಕರರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಮುಖಂಡರಾದ ನಾಗರಾಜ್, ಬಸವರಾಜ್, ರಾಜಪ್ಪ, ರಾಮಾನಾಯ್ಕ್, ಅರ್ಜುನ್, ಕೃಷ್ಣಮೂರ್ತಿ, ಚಂದ್ರಶೇಖರ್, ಕೃಷ್ಣಪ್ಪ. ರಾಮಪ್ಪ, ರಾಜಪ್ಪ, ಚನ್ನಬಸಪ್ಪ, ಚನ್ನಕೇಶವಮೂರ್ತಿ ಹೊಸಹಳ್ಳಿ ಸೇರಿದಂತೆ ಮೊದಲಾದವರಿದ್ದರು.

“Demanding the fulfillment of various demands, retired employees of central government departments held nationwide protests on January 9. In support of this, the All India BSNL-DOT Pensioners’ Association staged a sit-in protest in front of the BSNL building on Sagar Road in Shivamogga city.”

Lokayukta team conducts surprise inspection at Shivamogga Municipal Corporation office! ಶಿವಮೊಗ್ಗ ಪಾಲಿಕೆ ಕಚೇರಿಯಲ್ಲಿ ಲೋಕಾಯುಕ್ತ ತಂಡದಿಂದ ದಿಡೀರ್ ತಪಾಸಣೆ! Previous post shimoga news | ಶಿವಮೊಗ್ಗ ಪಾಲಿಕೆ ಕಚೇರಿಯಲ್ಲಿ ಲೋಕಾಯುಕ್ತ ತಂಡದಿಂದ ದಿಡೀರ್ ತಪಾಸಣೆ!
ಭದ್ರಾವತಿ ನಗರದಲ್ಲಿ ಯುವತಿಯ ನಿಗೂಢ ಕಣ್ಮರೆ! ಶಿವಮೊಗ್ಗ,ಜ.09: ಮನೆಯಿಂದ ಹೊರ ತೆರಳಿದ ಯುವತಿಯೋರ್ವಳು ಮನೆಗೆ ಹಿಂದಿರುಗದೆ ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ಭದ್ರಾವತಿ ನಗರದಲ್ಲಿ ನಡೆದಿದೆ. ಈ ಕುರಿತಂತೆ ಜನವರಿ 9 ರಂದು ಹಳೇನಗರ ಪೊಲೀಸ್ ಠಾಣೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಮಾಸ್ ಪರ್ವೀನ್ ಎನ್ ಆರ್ (25) ನಾಪತ್ತೆಯಾದ ಯುವತಿ ಎಂದು ಗುರುತಿಸಲಾಗಿದೆ. ಇವರು ಭದ್ರಾವತಿಯ ಸಿಗೇಬಾಗಿಯಲ್ಲಿರುವ ಬಿಎಡ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಜನವರಿ 06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಮನೆಯಿಂದ ಯುವತಿ ಹೊರ ಹೋಗಿದ್ದು, ನಂತರ ಮನೆಗೆ ಹಿಂದುರುಗದೆ ಕಣ್ಮರೆಯಾಗಿದ್ದಾರೆ. ಎಲ್ಲಿಯೂ ಅವರ ಸುಳಿವು ಲಭ್ಯವಾಗಿಲ್ಲ. ಚಹರೆ : ಕಾಣೆಯಾದ ಅಲ್ಮಾಸ್ ಪರ್ವೀನ್ 5.4 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಉರ್ದು, ಹಿಂದಿ, ಕನ್ನಡ, ಇಂಗ್ಲೀಷ್ ಭಾಷೆ ಮಾತಾನಾಡುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಟಾಪ್, ಪಿಂಕ್ ಬಣ್ಣದ ಲೆಗಿನ್ಸ್ ಪ್ಯಾಂಟು, ಬಿಳಿ ಗೆರೆಗಳಿರುವ ಕಪ್ಪು ಬಣ್ಣದ ಬುರ್ಖಾ, ಕಾಫಿ ಬಣ್ಣದ ವೇಲ್ ಧರಿಸಿರುತ್ತಾಳೆ. ಇವರ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಹಳೇನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. Shivamogga, Jan. 09: An incident has taken place in Bhadravati city where a young woman who left home and did not return home mysteriously disappeared. This was stated in a statement issued by Halenagar Police Station on January 9. Next post bhadravati news | ಭದ್ರಾವತಿ ನಗರದಲ್ಲಿ ಯುವತಿಯ ನಿಗೂಢ ಕಣ್ಮರೆ!