ತೀರ್ಥಹಳ್ಳಿ : ಭಾರೀ ಹೋರಾಟದಲ್ಲಿ ಜಯದ ಗಡಿ ತಲುಪಿದ ಆರಗ ಜ್ಞಾನೇಂದ್ರ!

ತೀರ್ಥಹಳ್ಳಿ, ಮೇ 13: ಹಾಲಿ – ಮಾಜಿ ಸಚಿವರ ಸ್ಪರ್ಧೆಯಿಂದ ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಗೂ ನೇರ ಪೈಪೋಟಿ ಕಂಡುಬಂದಿದ್ದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದರ ಅವರು ಗೆಲುವಿನ ನಗೆ ಬೀರಿದ್ದಾರೆ. ಜಯದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪರಾಭವಗೊಂಡಿದ್ದಾರೆ! ವಿಜೇತ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರು 83,879 ಮತ ಪಡೆದರೆ, ಕಿಮ್ಮನೆ ರತ್ನಾಕ್ ಅವರು 71,791 ಪಡೆದಿದ್ದಾರೆ. ಆರಗ ಜ್ಞಾನೇಂದ್ರ ಅವರು 12,088 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.

*ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪರಾಭವ

-ಬಿ. ರೇಣುಕೇಶ್-

ತೀರ್ಥಹಳ್ಳಿ, ಮೇ 13: ಹಾಲಿ – ಮಾಜಿ ಸಚಿವರ ಸ್ಪರ್ಧೆಯಿಂದ ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಗೂ ನೇರ ಪೈಪೋಟಿ ಕಂಡುಬಂದಿದ್ದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ ಅವರು ಗೆಲುವಿನ ನಗೆ ಬೀರಿದ್ದಾರೆ. ಜಯದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪರಾಭವಗೊಂಡಿದ್ದಾರೆ!

ವಿಜೇತ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರು 83,879 ಮತ ಪಡೆದರೆ, ಕಿಮ್ಮನೆ ರತ್ನಾಕ್ ಅವರು 71,791 ಪಡೆದಿದ್ದಾರೆ. ಆರಗ ಜ್ಞಾನೇಂದ್ರ ಅವರು 12,088 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.

ಒಟ್ಟಾರೆ 19 ಸುತ್ತುಗಳಲ್ಲಿ ತೀರ್ಥಹಳ್ಳಿ ಕ್ಷೇತ್ರದ ಮತ ಎಣಿಕೆ ನಡೆಯಿತು. ಮೊದಲ ಸುತ್ತಿನಿಂದ ಕೊನೆಯ ಸುತ್ತಿನವರೆಗೂ ಆರಗ ಜ್ಞಾನೇಂದ್ರ ಮುನ್ನಡೆ ಕಾಯ್ದುಕೊಳ್ಳವಲ್ಲಿ ಸಫಲವಾದರು. ಪ್ರಾರಂಭದಲ್ಲಿ ಎರಡ್ಮೂರು ಸಾವಿರವಿದ್ದ ಆರಗ ಅವರ ಮತಗಳ ಅಂತರ ಕ್ರಮೇಣ ಏರಿಕೆಯಾಗುತ್ತಾ ಬಂದಿತು.

ಬದಲಾದ ಲೆಕ್ಕಾಚಾರ: ಕಾಂಗ್ರೆಸ್ ನಿಂದ ಕಿಮ್ಮನೆ ರತ್ನಾಕರ್ ಜೊತೆಯಲ್ಲಿ ಮುಖಂಡ ಆರ್.ಎಂ.ಮಂಜುನಾಥ್ ಗೌಡ ಅವರು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇಬ್ಬರ ನಡುವೆ ಟಿಕೆಟ್ ಗೆ ಭಾರೀ ಪೈಪೋಟಿ ಕಂಡುಬಂದಿತ್ತು. ಅಂತಿಮವಾಗಿ ಕಾಂಗ್ರೆಸ್ ಕಿಮ್ಮನೆ ರತ್ನಾಕರ್ ಅವರಿಗೆ ಟಿಕೆಟ್ ನೀಡಿತ್ತು. ಮಂಜುನಾಥ್ ಗೌಡ ಅವರಿಗೆ ಎಂ.ಎಲ್.ಸಿ. ಮಾಡುವ ಭರವಸೆ ನೀಡಲಾಗಿತ್ತು.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿದೆ. ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ವಿಜಯದ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಯೋಗೀಶ್ ಪರಾಭಗೊಂಡಿದ್ದು, ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಮತ್ತೊಂದೆಡೆ, ಭಾರೀ ಕುತೂಹಲ ಮೂಡಿಸಿದ್ದ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೀನಾಯ ಸೋಲನುಭವಿಸಿದ್ದಾರೆ!
ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪರವರು 95,399 ಮತ ಪಡೆದಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಹೆಚ್.ಸಿ.ಯೋಗೀಶ್ ಅವರು 68,071 ಮತ ಪಡೆದಿದ್ದಾರೆ. ಚನ್ನಬಸಪ್ಪ ಅವರು ಹೆಚ್.ಸಿ.ಯೋಗೀಶ್ ಎದುರು 27,328 ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದಾರೆ. ಉಳಿದಂತೆ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರು ಕೇವಲ 8623 ಮತ ಗಳಿಸಿದ್ದಾರೆ.

ತದನಂತರ ಈ ಇಬ್ಬರು ನಾಯಕರು ಜೊತೆಜೊತೆಯಾಗಿ ಚುನಾವಣೆ ಎದುರಿಸಿದ್ದರು. ಮತದಾನ ಪೂರ್ವದಲ್ಲಿ ಕ್ಷೇತ್ರದಾದ್ಯಂತ ಕಿಮ್ಮನೆ ಪರವಾದ ಅಲೆ ಕಂಡುಬಂದಿತ್ತು. ಅವರ ಜಯ ನಿಶ್ಚಿತ ಎಂದೇ ವಿಶ್ಲೇಷಿಸಲಾಗಿತ್ತು.

ಆದರೆ ಮತದಾನದ ನಂತರದ ಲೆಕ್ಕಾಚಾರದಲ್ಲಿ ಕಿಮ್ಮನೆ ಸೋಲುವ ಸಾಧ್ಯತೆಗಳು ದಟ್ಟವಾಗಿತ್ತು. ಬಿಜೆಪಿ ಗೆಲುವಿನ ಲಕ್ಷಣಗಳು ಕಂಡುಬಂದಿದ್ದವು. ಇದೀಗ ಮತದಾನೋತ್ತರ ಲೆಕ್ಕಾಚಾರದಂತೆ ಕಾಂಗ್ರೆಸ್ ಪರಾಭವಗೊಂಡಿದೆ. ಬಿಜೆಪಿ ಜಯದ ನಗೆ ಬೀರಿದೆ.

ಸೋಲು-ಗೆಲುವಿನ ಲೆಕ್ಕಾಚಾರ: ಗೃಹ ಸಚಿವರಾದ ನಂತರವೂ ಆರಗ ಜ್ಞಾನೇಂದ್ರ ಅವರು ಕ್ಷೇತ್ರದ ಮತದಾರರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದರು. ಜೊತೆಗೆ ನಿರಂತರವಾಗಿ ಕ್ಷೇತ್ರ ಸುತ್ತು ಹಾಕುವ ಮೂಲಕ ತಮ್ಮ ವಿರುದ್ದ ಆಡಳಿತ ವಿರೋಧಿ ಅಲೆ ಎದುರಾಗದಂತೆ ಮತದಾರರ ವಿಶ್ವಾಸ ಉಳಿಸಿಕೊಂಡಿದ್ದರು. ಜೊತೆಗೆ ಹಿಂದುತ್ವ ಆಧಾರಿತ ಮತಗಳಿಕೆ ಲೆಕ್ಕಾಚಾರ ಹಾಗೂ ಚುನಾವಣೆ ವೇಳೆ ‘ಮತಗಳಿಕೆ’ಗೆ ನಡೆಸಿದ ಗುಪ್ತ ಕಾರ್ಯತಂತ್ರಗಳು ಬಿಜೆಪಿ ಗೆಲುವಿಗೆ ಕಾರಣವೆಂದೇ ವಿಶ್ಲೇಷಿಸಲಾಗುತ್ತಿದೆ.

ಜಯದ ಉಮೇದಿನಲ್ಲಿದ್ದ ಕಾಂಗ್ರೆಸ್ ಪಕ್ಷ ಪರಾಭವಗೊಂಡಿರುವುದಕ್ಕೆ ಕಾರ್ಯತಂತ್ರಗಳ ವೈಫಲ್ಯ, ಕೊನೆ ಹಂತದಲ್ಲಿ ಕೆಲ ನಾಯಕರು ‘ಕೈ’ ಕೊಟ್ಟಿದ್ದು, ‘ಆರ್ಥಿಕ ಸಂಪನ್ಮೂಲ’ಗಳ ಕೊರತೆ ಮತ್ತೀತರ ಕಾರಣಗಳು ಮುಖ್ಯವಾಗಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *