ಶಿವಮೊಗ್ಗ, ಮೇ 25: ರೈಲ್ವೆ ಎಂಜಿನ್ ಹಾಗೂ ಬೋಗಿ ನಡುವೆ ಸಂಪರ್ಕದ ಕೊಂಡಿ ಕಳಚಿ, ಬೋಗಿಗಳನ್ನು ಬಿಟ್ಟು ಎಂಜಿನ್ ಮುಂದಕ್ಕೆ ಚಲಿಸಿದ ವಿಲಕ್ಷಣ ಘಟನೆ, ಭದ್ರಾವತಿ ತಾಲೂಕು ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಸಮೀಪದ ಬಿಳಕಿ ಪ್ರದೇಶದ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ತಾಳಗುಪ್ಪ – ಬೆಂಗಳೂರು ನಡುವೆ ಸಂಚರಿಸುವ ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು, ಎಂಜಿನ್ – ಬೋಗಿಗಳ ನಡುವೆ ಸಂಪರ್ಕ ಕಳೆದುಕೊಂಡ ರೈಲಾಗಿದೆ. ಈ ಘಟನೆಯಿಂದ ಕೆಲ ಸಮಯ ಪ್ರಯಾಣಿಕರು ಗೊಂದಲಕ್ಕೊಳಗಾಗಿದ್ದರು. ತಾಳಗುಪ್ಪದಿಂದ ಶಿವಮೊಗ್ಗ ಮುಖ್ಯ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ ಸದರಿ ರೈಲು, ಬೆಳಿಗ್ಗೆ 7 ಗಂಟೆ 5 ನಿಮಿಷಕ್ಕೆ ಭದ್ರಾವತಿ ನಿಲ್ದಾಣದತ್ತ ಪ್ರಯಾಣ ಬೆಳೆಸಿತ್ತು. ಬಿಳಕಿ ಸಮೀಪ ಏಕಾಏಕಿ ರೈಲ್ವೆ ಎಂಜಿನ್ ಬೋಗಿಗಳ ಬಿಟ್ಟು ಮುಂದಕ್ಕೆ ಚಲಿಸಿದೆ. ಕೊಂಚ ದೂರ ಕ್ರಮಿಸಿದ ನಂತರ ಎಂಜಿನ್ ನನ್ನು, ಲೋಕೋ ಪೈಲೆಟ್ ನಿಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ರೈಲ್ವೆ ಎಂಜಿನ್ – ಬೋಗಿಗಳ ನಡುವೆ ತಪ್ಪಿದ ಸಂಪರ್ಕ..! ಬೋಗಿಗಳನ್ನೇ ಬಿಟ್ಟು ಮುಂದಕ್ಕೆ ಚಲಿಸಿದ ರೈಲ್ವೆ ಎಂಜಿನ್..!!

ಶಿವಮೊಗ್ಗ, ಮೇ 26: ರೈಲ್ವೆ ಎಂಜಿನ್ ಹಾಗೂ ಬೋಗಿಗಳ ನಡುವಿನ ಸಂಪರ್ಕ ತಪ್ಪಿದ ಪರಿಣಾಮ, ಬೋಗಿಗಳನ್ನೇ ಬಿಟ್ಟು ಎಂಜಿನ್ ಮುಂದಕ್ಕೆ ಚಲಿಸಿದ ವಿಲಕ್ಷಣ ಘಟನೆ, ಭದ್ರಾವತಿ ತಾಲೂಕು ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಸಮೀಪದ ಬಿಳಕಿ ಪ್ರದೇಶದ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ತಾಳಗುಪ್ಪ – ಬೆಂಗಳೂರು ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು, ಎಂಜಿನ್ – ಬೋಗಿಗಳ ನಡುವೆ ಸಂಪರ್ಕ ಕಳೆದುಕೊಂಡ ರೈಲಾಗಿದೆ. ಈ ಘಟನೆಯಿಂದ ಕೆಲ ಸಮಯ ಪ್ರಯಾಣಿಕರು ಗೊಂದಲಕ್ಕೊಳಗಾಗಿದ್ದರು.

ತಾಳಗುಪ್ಪದಿಂದ ಶಿವಮೊಗ್ಗ ಮುಖ್ಯ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ ಸದರಿ ರೈಲು, ಬೆಳಿಗ್ಗೆ 7 ಗಂಟೆ 5 ನಿಮಿಷಕ್ಕೆ ಭದ್ರಾವತಿ ನಿಲ್ದಾಣದತ್ತ ಪ್ರಯಾಣ ಬೆಳೆಸಿತ್ತು.

ಬಿಳಕಿ ಸಮೀಪ ಏಕಾಏಕಿ ರೈಲ್ವೆ ಎಂಜಿನ್ ಬೋಗಿಗಳ ಬಿಟ್ಟು ಮುಂದಕ್ಕೆ ಚಲಿಸಿದೆ. ಕೊಂಚ ದೂರ ಕ್ರಮಿಸಿದ ನಂತರ ಎಂಜಿನ್ ನನ್ನು, ಲೋಕೋ ಪೈಲೆಟ್ ನಿಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಭದ್ರಾವತಿ ಹಾಗೂ ಶಿವಮೊಗ್ಗದ ರೈಲ್ವೆ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಎಂಜಿನ್ ಹಾಗೂ ಬೋಗಿ ನಡುವೆ ಸಂಪರ್ಕ ಕಲ್ಪಿಸಿದ್ದಾರೆ.

ನಂತರ ರೈಲು ಭದ್ರಾವತಿಯತ್ತ ಪ್ರಯಾಣ ಬೆಳೆಸಿದೆ. ಭದ್ರಾವತಿ ನಿಲ್ದಾಣದಲ್ಲಿ ಹೆಚ್ಚುವರಿ ದುರಸ್ತಿ ಕಾರ್ಯ ನಡೆಸಲಾಗುತ್ತಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿ ರೈಲು ಸಂಚಾರ ಆರಂಭಿಸಿದ್ದು, ಕೆಲಸಕಾರ್ಯ ಮತ್ತೀತರ ಉದ್ದೇಶಗಳಿಗೆ ತೆರಳುವ ಪ್ರಯಾಣಿಕರು ತೀವ್ರ ತೊಂದರೆ ಪಡುವಂತಾಯಿತು.

ಕಾರಣವೇನು?: ಎಂಜಿನ್ – ಬೋಗಿಗಳ ನಡುವೆ ಸಂಪರ್ಕ ತಪ್ಪುವುದು ಅಪರೂಪದಲ್ಲಿ ಅಪರೂಪ. ಕೆಲವೊಮ್ಮೆ ತಾಂತ್ರಿಕ ಕಾರಣಗಳಿಂದ ಈ ರೀತಿಯ ಘಟನೆಗಳು ಜರುಗುತ್ತವೆ ಎಂದು ರೈಲ್ವೆ ಇಲಾಖೆ ಮೂಲಗಳು ಮಾಹಿತಿ ನೀಡುತ್ತವೆ.

ಶಿವಮೊಗ್ಗ, ಮೇ 25: ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಗಾಜನೂರಿನ ತುಂಗಾ ಜಲಾಶಯದಲ್ಲಿ ದಿನದಿಂದ ದಿನಕ್ಕೆ ನೀರಿನ ಸಂಗ್ರಹ ಪ್ರಮಾಣ ಕಡಿಮೆಯಾಗುತ್ತಿದೆ! ಇದರ ನೇರ ಪರಿಣಾಮ ಶಿವಮೊಗ್ಗ ನಗರದ ಕುಡಿಯುವ ನೀರು ಪೂರೈಕೆ ಮೇಲೆ ಬೀರಿದೆ. ಹೌದು. ಕಳೆದ ಕೆಲ ದಿನಗಳಿಂದ ನಗರದ ಹಲವೆಡೆ ಕುಡಿಯುವ ನೀರಿಗೆ ತೀವ್ರ ಸ್ವರೂಪದ ಹಾಹಾಕಾರ ಕಂಡುಬರಲಾರಂಭಿಸಿದೆ. ಕೆಲ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ.! Previous post ತುಂಗಾ ಡ್ಯಾಂನಲ್ಲಿ ಕಡಿಮೆಯಾಗುತ್ತಿರುವ ನೀರಿನ ಸಂಗ್ರಹ : ಶಿವಮೊಗ್ಗದಲ್ಲಿ ಕುಡಿಯುವ ನೀರಿಗೆ ಶುರುವಾಗಿದೆ ಹಾಹಾಕಾರ!
ಶಿವಮೊಗ್ಗ, ಮೇ 26: ಶಿವಮೊಗ್ಗ ನಗರದಲ್ಲಿ ಸರ್ಕಾರಿ ಸಿಟಿ ಬಸ್’ಗಳ ಸಂಚಾರ ಸಮರ್ಪಕವಾಗಿಲ್ಲ. ನಗರದ ಹೊರವಲಯದ ಪ್ರದೇಶಗಳಿಗೆ ಸಂಚರಿಸುತ್ತಿದ್ದ ಬಸ್ ಗಳ ಸಂಚಾರವನ್ನು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ಸ್ಥಗಿತಗೊಳಿಸಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಶೋಷಿತ ಸಮುದಾಯಗಳ ವೇದಿಕೆ ಆರೋಪಿಸಿದೆ. ಈ ಸಂಬಂಧ ಶುಕ್ರವಾರ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೆ.ಎಸ್.ಆರ್.ಟಿ.ಸಿ. ವಿರುದ್ದ ಸಂಘಟನೆ ಪ್ರತಿಭಟನೆ ನಡೆಸಿತು. ನಂತರ ಡಿಸಿ ಡಾ.ಆರ್.ಸೆಲ್ವಮಣಿ ಅವರಿಗೆ ಮನವಿ ಪತ್ರ ಅರ್ಪಿಸಿತು. ಸ್ಥಗಿತ: ಕೆ.ಎಸ್.ಆರ್.ಟಿ.ಸಿ. ಮುಖ್ಯ ಬಸ್ ನಿಲ್ದಾಣದಿಂದ ವಿನೋಬನಗರ ಮಾರ್ಗವಾಗಿ ಸೋಮಿನಕೊಪ್ಪ, ಕೋಟೆಗಂಗೂರು, ಸಿದ್ಲಿಪುರ, ಗೆಜ್ಜೇನಹಳ್ಳಿ, ವಿರುಪಿನಕೊಪ್ಪ ಸೇರಿದಂತೆ ವಿವಿಧ ಬಡಾವಣೆ ಹಾಗೂ ಗ್ರಾಮಗಳಿಗೆ ಸರ್ಕಾರಿ ಸಿಟಿ ಬಸ್ ಗಳನ್ನು ಓಡಿಸಲಾಗುತ್ತಿತ್ತು. ಇದರಿಂದ ಸಾವಿರಾರು ಜನರಿಗೆ ಅನುಕೂಲವಾಗಿತ್ತು. Next post ಸರ್ಕಾರಿ ಸಿಟಿ ಬಸ್ ಓಡಿಸಲು ಕೆ.ಎಸ್.ಆರ್.ಟಿ.ಸಿ. ನಿರ್ಲಕ್ಷ್ಯ : ಡಿಸಿ ಕಚೇರಿ ಎದುರು ಪ್ರತಿಭಟನೆ