ಮೇ 31 ರಿಂದ ಶಾಲೆಗಳು ಆರಂಭ : ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಸ್ವಾಗತ –  ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು/ಶಿವಮೊಗ್ಗ, ಮೇ 29: ಸರ್ಕಾರದ 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ, ಮೇ 31 ರ ಬುಧವಾರದಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ಮೇ 29 ರಿಂದಲೇ ಶಾಲೆಗಳ ಆರಂಭದ ಪೂರ್ವಭಾವಿ ಸಿದ್ದತೆಗಳು ನಡೆಯಲಾರಂಭಿಸಿವೆ. ‘ಮೇ 31 ರಂದು ಮಕ್ಕಳಿಗೆ ಸಿಹಿ ವಿತರಣೆ ಮಾಡುವ ಮೂಲಕ ಶಾಲೆಗಳಿಗೆ ಬರ ಮಾಡಿಕೊಳ್ಳಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಬೆಂಗಳೂರು/ಶಿವಮೊಗ್ಗ, ಮೇ 29: ಸರ್ಕಾರದ 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ, ಮೇ 31 ರ ಬುಧವಾರದಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ಮೇ 29 ರಿಂದಲೇ ಶಾಲೆಗಳ ಆರಂಭದ ಪೂರ್ವಭಾವಿ ಸಿದ್ದತೆಗಳು ನಡೆಯಲಾರಂಭಿಸಿವೆ.

‘ಮೇ 31 ರಂದು ಮಕ್ಕಳಿಗೆ ಸಿಹಿ ವಿತರಣೆ ಮಾಡುವ ಮೂಲಕ ಶಾಲೆಗಳಿಗೆ ಬರ ಮಾಡಿಕೊಳ್ಳಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಶಿಕ್ಷಣ ಸಚಿವರಾಗಿ ನಿಯೋಜನೆ ಮಾಡಲಾಗಿರುವ ಕುರಿತಂತೆ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುತ್ತಿದ್ದಂತೆ, ಸೋಮವಾರ ಮಧು ಬಂಗಾರಪ್ಪರವರು ತಮ್ಮ ಫೇಸ್’ಬುಕ್ ಖಾತೆಯಲ್ಲಿ ಶಾಲೆಗಳ ಕಾರ್ಯಾರಂಭದ ಬಗ್ಗೆ ಹಾಕಿರುವ ಮೊದಲ ಸಂದೇಶದಲ್ಲಿ ಈ ವಿಷಯ ತಿಳಿಸಿದ್ದಾರೆ.

‘ಶಾಲೆಗಳ ಆರಂಭಕ್ಕೆ ಸಂಬಂಧಿಸಿದ ಪೂರಕ ಸಿದ್ದತೆಗಳು ಇಂದಿನಿಂದ ಆರಂಭವಾಗಲಿದೆ. ಶಾಲೆಯತ್ತ ಹೆಜ್ಜೆ ಹಾಕುತ್ತಿರುವ ಎಲ್ಲ ಮಕ್ಕಳಿಗೆ ಶುಭ ಕೋರುತ್ತೆನೆ. ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ. ಮಾದರಿ ಶಿಕ್ಷಣ ವ್ಯವಸ್ಥೆಗೆ ಶಿಕ್ಷಕರ, ಪೋಷಕರ ಹಾಗೂ ಕನ್ನಡಿಗರ ಸಹಕಾರವಿರಲಿ’ ಎಂದು ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

One Comment on “ಮೇ 31 ರಿಂದ ಶಾಲೆಗಳು ಆರಂಭ : ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಸ್ವಾಗತ –  ಶಿಕ್ಷಣ ಸಚಿವ ಮಧು ಬಂಗಾರಪ್ಪ”

  1. Work hard help poor children never show ego do field work more, success is yours. All the best 👍

    Your welwisher

Leave a Reply

Your email address will not be published. Required fields are marked *