ಶಿಕಾರಿಪುರ, ಶಿರಾಳಕೊಪ್ಪ ಪೊಲೀಸರಿಂದ ವಾಕಿಂಗ್ – ರನ್ನಿಂಗ್!

ಶಿಕಾರಿಪುರ, ಶಿರಾಳಕೊಪ್ಪ ಪೊಲೀಸರಿಂದ ವಾಕಿಂಗ್ – ರನ್ನಿಂಗ್!

ಶಿಕಾರಿಪುರ/ಶಿರಾಳಕೊಪ್ಪ, ಜೂ. 12: ಪೊಲೀಸರಲ್ಲಿ ದೈಹಿಕ ಸದೃಢತೆ ಹಾಗೂ ಆರೋಗ್ಯ ಕಾಯ್ದುಕೊಳ್ಳುವ ಉದ್ದೇಶದಿಂದ, ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ವಾಕಿಂಗ್ – ರನ್ನಿಂಗ್ ಎಂಬ ಪರಿಕಲ್ಪನೆಯನ್ನು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಪರಿಚಯಿಸಿದ್ದಾರೆ.

ಬೆಳಿಗ್ಗೆಯ ವೇಳೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು, ಸಾರ್ವಜನಿಕ ರಸ್ತೆಗಳಲ್ಲಿ ವಾಕಿಂಗ್ – ರನ್ನಿಂಗ್ ನಡೆಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಇತ್ತೀಚೆಗಷ್ಟೆ ಎಸ್ಪಿ ನೇತೃತ್ವದಲ್ಲಿ ಶಿವಮೊಗ್ಗ ನಗರದ ಮುಖ್ಯ ರಸ್ತೆಗಳಲ್ಲಿ ಪೊಲೀಸರು ವಾಕಿಂಗ್ ಹಾಗೂ ರನ್ನಿಂಗ್ ನಡೆಸಿದ್ದರು.

ಇದೀಗ ಶಿಕಾರಿಪುರ ಹಾಗೂ ಶಿರಾಳಕೊಪ್ಪ ಪೊಲೀಸರು ಕೂಡ ವಾಕಿಂಗ್ – ರನ್ನಿಂಗ್ ಆರಂಭಿಸಿದ್ದಾರೆ. ಸೋಮವಾರ ಬೆಳಿಗ್ಗೆ ಡಿವೈಎಸ್ಪಿ ಶಿವಾನಂದ ಮದರಕಂಡಿ ನೇತೃತ್ವದಲ್ಲಿ ಶಿಕಾರಿಪುರ ಪಟ್ಟಣದಲ್ಲಿ ನಡಿಗೆ-ಓಟ ನಡೆಯಿತು. ಸಬ್ ಇನ್ಸ್ ಪೆಕ್ಟರ್ ಗಳಾದ ಪ್ರಶಾಂತ್, ಶರತ್, ಶೋಭಾರಾಣಿ ಸೇರಿದಂತೆ ಇತರೆ ಸಿಬ್ಬಂದಿಗಳು ಭಾಗಿಯಾಗಿದ್ದರು.

ಮತ್ತೊಂದೆಡೆ ಶಿರಾಳಕೊಪ್ಪದಲ್ಲಿ ನಡೆದ ನಡಿಗೆ – ಓಟದಲ್ಲಿ ಸಬ್ ಇನ್ಸ್’ಪೆಕ್ಟರ್ ಮಂಜುನಾಥ್ ಕುರಿ ಮತ್ತವರ ಸಿಬ್ಬಂದಿಗಳು ಭಾಗವಹಿಸಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *