ಸಕ್ರೆಬೈಲು ಆನೆ ಬಿಡಾರದಲ್ಲಿ ಪ್ರವಾಸಿಗಳ ಜೊತೆ ಸಿಬ್ಬಂದಿಯ ಅನುಚಿತ ವರ್ತನೆ! : ಗಮನಹರಿಸುವುದೆ ಅರಣ್ಯ ಇಲಾಖೆ?

ಸಕ್ರೆಬೈಲು ಆನೆ ಬಿಡಾರದಲ್ಲಿ ಪ್ರವಾಸಿಗಳ ಜೊತೆ ಸಿಬ್ಬಂದಿಯ ಅನುಚಿತ ವರ್ತನೆ! : ಗಮನಹರಿಸುವುದೆ ಅರಣ್ಯ ಇಲಾಖೆ?

ಶಿವಮೊಗ್ಗ, ಜೂ. 22: ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಆನೆ ಬಿಡಾರದಲ್ಲಿನ ಸಿಬ್ಬಂದಿಯೋರ್ವರು, ಪ್ರವಾಸಿಗರ ಜೊತೆ ಅನುಚಿತವಾಗಿ ವರ್ತಿಸಿದ ಘಟನೆಯೊಂದು ಗುರುವಾರ ನಡೆದಿದೆ.

ಹುಬ್ಬಳ್ಳಿಯಿಂದ ಆಗಮಿಸಿದ್ದ ಪ್ರವಾಸಿಗರ ಜೊತೆ, ಬಿಡಾರದ ಸಿಬ್ಬಂದಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿ ಕೂಗಾಡಿದ್ದಾನೆ. ಮಹಿಳೆಯರ ಜೊತೆ ಮಾತಿನ ಚಕಮಕಿ ನಡೆಸಿದ್ದಾನೆ.

ಈ ಕುರಿತಂತೆ ಪ್ರವಾಸಿಗರು ಬಿಡಾರದಲ್ಲಿದ್ದ ಅರಣ್ಯ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ್ ಅವರ ಗಮನಕ್ಕೆ ತಂದಿದ್ದಾರೆ. ತಕ್ಷಣವೇ ಅಧಿಕಾರಿಯು ಸದರಿ ಸಿಬ್ಬಂದಿಗೆ, ಪ್ರವಾಸಿಗಳ ಜೊತೆ ಸೌಜನ್ಯದಿಂದ ನಡೆದುಕೊಳ್ಳುವಂತೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ.  

‘ಶೃಂಗೇರಿಗೆ ತೆರಳುವ ಮಾರ್ಗಮಧ್ಯೆ ಸಕ್ರೆಬೈಲು ಆನೆ ಬಿಡಾರಕ್ಕೆ ಭೇಟಿ ನೀಡಲಾಗಿತ್ತು. ಈ ವೇಳೆ ಯಾವುದೇ ಕಾರಣವಿಲ್ಲದೆ ಸಿಬ್ಬಂದಿಯು ನಮ್ಮ ಕುಟುಂಬದ ಮಹಿಳೆಯರೊಂದಿಗೆ ಜಗಳ ಮಾಡಿದರು. ಸಿಬ್ಬಂದಿಯ ವರ್ತನೆ ಬೇಸರ ಉಂಟು ಮಾಡಿತು. ಪ್ರವಾಸಿ ತಾಣಗಳಲ್ಲಿ ಈ ರೀತಿಯ ಘಟನೆಗಳಿಗೆ ಆಸ್ಪದವಾಗದಂತೆ ಸಂಬಂಧಿಸಿದವರು ಎಚ್ಚರವಹಿಸಬೇಕು. ಪ್ರವಾಸಿಗರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಿಬ್ಬಂದಿಗಳಿಗೆ ಸಲಹೆ ನೀಡಬೇಕು’ ಎಂದು ಪ್ರವಾಸಿಗರು ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *